AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರ: ಲಡಾಖ್​ನಲ್ಲಿ ಗುಡ್ಡ ಕುಸಿದು ಬೆಳಗಾವಿಯ ಯೋಧ ಸಾವು

ಲಡಾಖ್‌ನಲ್ಲಿ ಭೂಕುಸಿತದಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಸೈನಿಕ ಮಹೇಶ್ ಮೃತಪಟ್ಟಿದ್ದಾರೆ. ಡಿಸೆಂಬರ್ 14 ರಂದು ಕರ್ತವ್ಯದಲ್ಲಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅವರ ಪಾರ್ಥಿವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮಕ್ಕೆ ತರಲಾಯಿತು. ಎರಡು ತಿಂಗಳ ಹಿಂದೆ ನಿಶ್ಚಿತಾರ್ಥವಾಗಿತ್ತು. ಈ ದುರಂತದಿಂದ ಅವರ ಕುಟುಂಬ ಮತ್ತು ಸ್ನೇಹಿತರು ಆಘಾತಕ್ಕೀಡಾಗಿದ್ದಾರೆ.

ಜಮ್ಮು-ಕಾಶ್ಮೀರ: ಲಡಾಖ್​ನಲ್ಲಿ ಗುಡ್ಡ ಕುಸಿದು ಬೆಳಗಾವಿಯ ಯೋಧ ಸಾವು
ಯೋಧ ಮಹೇಶ್​
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on: Dec 18, 2024 | 10:35 AM

Share

ಬೆಳಗಾವಿ, ಡಿಸೆಂಬರ್​ 18: ಜಮ್ಮು-ಕಾಶ್ಮೀರದ (Jammu-Kashmir) ಲಡಾಖ್​ನಲ್ಲಿ (Ladakh) ಗುಡ್ಡ ಕುಸಿದು ಬೆಳಗಾವಿ (Belagavi) ಮೂಲದ ಯೋಧರೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್​ ಅವರು ಡಿಸೆಂಬರ್​ 14ರಂದು ಲಡಾಖ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗುಡ್ಡ ಕುಸಿದು ಮೃತಪಟ್ಟಿದ್ದಾರೆ. ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವ ಹೊರತೆಗೆದಿದ್ದರು.

ಸೈನಿಕ ಮಹೇಶ್ ಅವರ ಪಾರ್ಥಿವ ಶರೀರ ಮಂಗಳವಾರ (ಡಿಸೆಂಬರ್​ 17) ಸಂಜೆ ಇರಣಟ್ಟಿ ಗ್ರಾಮಕ್ಕೆ ಆಗಮಿಸಿತು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್​ ಗೌರವ ಸಮರ್ಪಿಸಿದರು. ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ಮಹೇಶ್ ಅವರ ಅಂತ್ಯಸಂಸ್ಕಾರ ನೆರವೇರಿತು. ಎರಡು ತಿಂಗಳ ಹಿಂದೆಯಷ್ಟೇ ಸೈನಿಕ ಮಹೇಶ್ ಅವರ ನಿಶ್ಚಿತಾರ್ಥ ಕೂಡ ಆಗಿದ್ದು, ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಆದರೆ ಲಡಾಖ್​ನಲ್ಲಿ ನಡೆದ ದುರಂತದಲ್ಲಿ ಮಹೇಶ್​ ಪ್ರಾಣ ತೆತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು