AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಯೋಧನ ಅಂತ್ಯಕ್ರಿಯೆಗೆ ಸರ್ಕಾರಿ ಜಾಗ ಕೇಳಿದ್ದಕ್ಕೆ ಗ್ರಾಮಸ್ಥರ ಮೇಲೆ ಲಾಠಿ ಬೀಸಿದ ಪೊಲೀಸರು

ಬೈಲಹೊಂಗಲ ತಾಲೂಕಿನ ಮುರಗೋಡದಲ್ಲಿ ಕರ್ತವ್ಯದಲ್ಲಿ ಗಾಯಗೊಂಡು ಮೃತಪಟ್ಟ ಯೋಧ ವಿಷ್ಣು ಕಾರಜೋಳ ಅವರ ಅಂತ್ಯಕ್ರಿಯೆಗೆ ಸರ್ಕಾರಿ ಭೂಮಿ ನೀಡಲು ನಿರಾಕರಿಸಿದ್ದರಿಂದ ಗ್ರಾಮಸ್ಥರು ಪ್ರತಿಭಟಿಸಿದರು. ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಬೀಸಿದರು. ತಡರಾತ್ರಿ ಸಾರ್ವಜನಿಕ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿತು. ಈ ಘಟನೆಯು ಸರ್ಕಾರದ ವಿರುದ್ಧ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on:May 19, 2025 | 12:01 PM

Share

ಬೆಳಗಾವಿ, ಮೇ 19: ಯೋಧನ (Soilder) ಅಂತ್ಯಕ್ರಿಯೆಗೆ ಸರ್ಕಾರಿ ಜಾಗ (Government Land) ಕೇಳಿದ ಗ್ರಾಮಸ್ಥರ ಮೇಲೆ ಪೊಲೀಸರು (Police) ಲಾಠಿ ಬೀಸಿರುವ ಘಟನೆ ಬೈಲಹೊಂಗಲ (Bailhongal) ತಾಲೂಕಿನ ಮುರಗೋಡ ಗ್ರಾಮದಲ್ಲಿ ನಡೆದಿದೆ. ವಿಷ್ಣು ಕಾರಜೋಳ (25) ಮೃತ ಯೋಧ. ಯೋಧ ವಿಷ್ಣು ಕಾರಜೋಳ ಕರ್ತವ್ಯದಲ್ಲಿದ್ದಾಗ ಬಿದ್ದು ಗಾಯಗೊಂಡಿದ್ದರು. ಮೂರು ತಿಂಗಳು ದೆಹಲಿ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಾಲ್ಕು ದಿನದ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಗ್ರಾಮ ಪಂಚಾಯತಿ ಜಾಗದಲ್ಲಿ ಅಂತ್ಯ ಕ್ರಿಯೆಗೆ ಗ್ರಾಮಸ್ಥರು ಅವಕಾಶ ಕೇಳಿದ್ದರು. ಗ್ರಾಮ ಪಂಚಾಯತಿ ಜಾಗ ಕೊಡಲು ಸಾಧ್ಯವಿಲ್ಲ, ಸಾರ್ವಜನಿಕ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಲು ಪಿಡಿಒ ಹೇಳಿದ್ದಾರೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಪಿಡಿಒ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ‌ ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ. ತಡರಾತ್ರಿ ಸಾರ್ವಜನಿಕ ರುದ್ರಭೂಮಿಯಲ್ಲಿ ಯೋಧನ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.

ಇದನ್ನೂ ಓದಿ: ಕುರಾನ್​ ಸುಟ್ಟಿದ್ದನ್ನು ಖಂಡಿಸಿ ಮುಸ್ಲಿಮರಿಂದ ಪ್ರತಿಭಟನೆ: ಪೊಲೀಸರ ಮೇಲೆಯೇ ಚಪ್ಪಲಿ ಎಸೆತ

ಇದನ್ನೂ ಓದಿ
Image
ಕುರಾನ್ ಸುಟ್ಟಿದ್ದನ್ನ ಖಂಡಿಸಿ ಪ್ರತಿಭಟನೆ: ಪೊಲೀಸರ ಮೇಲೆಯೇ ಚಪ್ಪಲಿ ಎಸೆತ
Image
ಖುರೇಷಿ ಪತಿ ಮನೆ ಮೇಲೆ ದಾಳಿ: ಸುಳ್ಳು ಪೋಸ್ಟ್ ಮಾಡಿದ್ದವನ ವಿರುದ್ಧ FIR
Image
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
Image
ಸೋಫಿಯಾ ಪತಿ ಮನೆ ಮೇಲೆ RSS ದಾಳಿ: ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿ

ಕರ್ನಲ್​ ಸುಫೀಯಾ ಮನೆ ಮೇಲೆ ದಾಳಿ ಸುಳ್ಳು ಸುದ್ದಿ

ಆಪರೇಷನ್​ ಸಿಂದೂರ್​ ಯಶಸ್ವಿ ಬಗ್ಗೆ ಕ್ಷಣ ಕ್ಷಣ ಮಾಹಿತಿಯನ್ನು ನೀಡುತ್ತಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರ ಬೆಳಗಾವಿಯ ಮನೆ ಮೇಲೆ ಆರ್​ಎಸ್​ಎಸ್​ ದಾಳಿ ಮಾಡಿತ್ತು ಎಂದು ಕಿಡಿಗೇಡಿ ಅನಿಸ್ ಉದ್ದೀನ್ ಎಂಬಾತ ಇತ್ತೀಚಿಗೆ ಎಕ್ಸ್​ನಲ್ಲಿ ಟ್ವೀಟ್​ ಮಾಡಿದ್ದನು. ಆದರೆ, ಇದು ಸುಳ್ಳು ಸುದ್ದಿ ಎಂದು ಬೆಳಗಾವಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಹೇಳಿದ್ದರು.

ಸುಳ್ಳು ಸುದ್ದಿ ಟ್ವೀಟ್​ ಮಾಡಿದ್ದ ಆರೋಪಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಕರ್ನಲ್​ ಸುಫಿಯಾ ಖುರೇಷಿ ಅವರ ಮನೆಗೆ ಭದ್ರತೆ ನೀಡಲಾಗಿತ್ತು. ಸುಳ್ಳು ಸುದ್ದಿ ಹರಡಿದ್ದ ವಿಚಾರವಾಗಿ ಎಸ್​ಪಿ ಭೀಮಾಶಂಕರ್​ ಗುಳೇದ್​ ಮಾತನಾಡಿ, ಸುಳ್ಳು ಸುದ್ದಿ ಹರಡಿದರೆ ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ. ಎಲ್ಲಾ ರೀತಿಯ ಕ್ರಮಗಳನ್ನ ಪೊಲೀಸ್ ಇಲಾಖೆ ತೆಗೆದುಕೊಳ್ಳುತ್ತಿದೆ. ಸಾಮಾಜಿಕ ಮಾಧ್ಯಮಗಳ ಮೇಲೆ ಸೈಬರ್ ಪೊಲೀಸರು ಕಣ್ಣಿಟ್ಟಿದ್ದಾರೆ ಎಂದು ತಿಳಿಸಿದ್ದರು.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:57 am, Mon, 19 May 25

Follow Us
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು