AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿ ಬತ್ತಿ ಹೋದರೂ ನೆರವಿನ ಚಿಲುಮೆ ಉಕ್ಕಿಸಿದ ಬೆಳಗಾವಿ ಎಸ್​ಪಿ

ಬೆಳಗಾವಿ: ತನ್ನ ಜಮೀನಿನಲ್ಲಿ ಕೊರೆಸಿದ ಕೊಳವೆ ಬಾವಿಯಲ್ಲಿ ನೀರು ಬರಲಿಲ್ಲ ಎಂಬ ಕಾರಣಕ್ಕೆ ಬೇಸರಗೊಂಡು ಅದೇ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಜಿಲ್ಲೆಯ ರೈತನ ಕುಟುಂಬಕ್ಕೆ ನೆರವಿನ ಹಸ್ತ ಚಾಚಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾನವೀಯತೆ ಮೆರೆದಿದ್ದಾರೆ. ಕಳೆದ 15 ದಿನಗಳ ಹಿಂದೆ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿದ್ದ ತನ್ನ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿದ್ದ. ನೀರು ಬರಲಿಲ್ಲ ಎಂದು ರೈತ ಲಕ್ಕಪ್ಪ ದೊಡ್ಡಮನಿ ತೀವ್ರ ಬೇಸರಗೊಂಡಿದ್ದರು. ಅದೇ ಬೇಸರದಲ್ಲಿ ಬಹಳಷ್ಟು ಸಾಲ ಮಾಡಿ […]

ಬಾವಿ ಬತ್ತಿ ಹೋದರೂ ನೆರವಿನ ಚಿಲುಮೆ ಉಕ್ಕಿಸಿದ ಬೆಳಗಾವಿ ಎಸ್​ಪಿ
ಸಾಧು ಶ್ರೀನಾಥ್​
| Edited By: |

Updated on: Jun 10, 2020 | 7:49 PM

Share

ಬೆಳಗಾವಿ: ತನ್ನ ಜಮೀನಿನಲ್ಲಿ ಕೊರೆಸಿದ ಕೊಳವೆ ಬಾವಿಯಲ್ಲಿ ನೀರು ಬರಲಿಲ್ಲ ಎಂಬ ಕಾರಣಕ್ಕೆ ಬೇಸರಗೊಂಡು ಅದೇ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಜಿಲ್ಲೆಯ ರೈತನ ಕುಟುಂಬಕ್ಕೆ ನೆರವಿನ ಹಸ್ತ ಚಾಚಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾನವೀಯತೆ ಮೆರೆದಿದ್ದಾರೆ.

ಕಳೆದ 15 ದಿನಗಳ ಹಿಂದೆ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿದ್ದ ತನ್ನ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿದ್ದ. ನೀರು ಬರಲಿಲ್ಲ ಎಂದು ರೈತ ಲಕ್ಕಪ್ಪ ದೊಡ್ಡಮನಿ ತೀವ್ರ ಬೇಸರಗೊಂಡಿದ್ದರು. ಅದೇ ಬೇಸರದಲ್ಲಿ ಬಹಳಷ್ಟು ಸಾಲ ಮಾಡಿ ಕೊರೆಸಿದ ಕೊಳವೆ ಬಾವಿಗೆ ಬಿದ್ದು ಸಾವನ್ನಪ್ಪಿದ್ದರು.

ಈ ಪ್ರಕರಣದ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿಕೊಟ್ಟ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಶವವನ್ನು ಹೊರತೆಗೆಸಿದ್ದರು. ಮೃತ ರೈತನ ಕುಟುಂಬಸ್ಥರ ಆಕ್ರಂದನ ಕಂಡು ಅವರಿಗೆ ಸಾಂತ್ವನ ಹೇಳಿದ್ದರು. ಮನೆಯ ಆಧಾರಸ್ತಂಭವಾಗಿದ್ದ ಮೃತ ಲಕ್ಕಪ್ಪನ ಕಳೆದುಕೊಂಡ ಪತ್ನಿ ಕಸ್ತೂರಿ ದೊಡ್ಡಮನಿ ಮತ್ತು ಮಕ್ಕಳಾದ ಸಂಗಮೇಶ ದೊಡ್ಡಮನಿ ಹಾಗೂ ಪುತ್ರಿ ಜಯಶ್ರೀ ದೊಡ್ಡಮನಿಗೆ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದರು.

ಮಾನವೀಯತೆ ಮೆರೆದ ಎಸ್​ಪಿ: ಆದರೆ ತಮ್ಮ ನೆರವಿನ ಆಶ್ವಾಸನೆಯನ್ನು ಕೇವಲ ಆಶ್ವಾಸನೆಗೆ ಮಾತ್ರ ಸೀಮಿತಗೊಳಿಸದೆ ಅದನ್ನ ಕಾರ್ಯರೂಪಕ್ಕೆ ತರುವ ಪ್ರಯತ್ನವನ್ನ ಬೆಳಗಾವಿ ಎಸ್​ಪಿ ನಿಂಬರಗಿ ಮಾಡಿದ್ದಾರೆ. ಕುಟುಂಬದ ದಾರುಣ ಸ್ಥಿತಿಯನ್ನು ಕಣ್ಣಾರೆ ಕಂಡಿದ್ದ ನಿಂಬರಗಿ ತಮ್ಮ ಕಡೆಯಿಂದ ವೈಯಕ್ತಿಕವಾಗಿ 50,000 ರೂಪಾಯಿಯನ್ನ ನೀಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಷ್ಟೇ ಅಲ್ಲದೆ ಈ ಮೂಲಕ ಎಲ್ಲರ ಕಣ್ಣಲ್ಲಿ ಒಬ್ಬ ಮಾದರಿ ಅಧಿಕಾರಿಯಾಗಿಯೂ ರೂಪಗೊಂಡಿದ್ದಾರೆ.

ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುವ ಭರವಸೆ: ಎಸ್​ಪಿ ಲಕ್ಷ್ಮಣ ನಿಂಬರಗಿ ನೀಡಿದ ಸಹಾಯಧನವನ್ನ ಕಣ್ಣೀರಿಡುತ್ತಾ ಸ್ವೀಕರಿಸಿದ ಕಸ್ತೂರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಅಷ್ಟೇ ಅಲ್ಲದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎಸ್​ಪಿ ಅವರಂತೆ ಒಳ್ಳೆಯ ಮತ್ತು ದಕ್ಷ ಅಧಿಕಾರಿ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಒಟ್ಟಿನಲ್ಲಿ ಸಾಂತ್ವನ ಮತ್ತು ಸಹಾಯವನ್ನ ಕೇವಲ ಬಾಯಿಮಾತಿಗೆ ಸೀಮಿತವಾಗದಂತೆ ನಡೆದುಕೊಂಡಿರುವ ಎಸ್​ಪಿ ಲಕ್ಷ್ಮಣ ನಿಂಬರಗಿ ಅವರಿಗೆ ಎಲ್ಲೆಡೆಯಿಂದ ಪ್ರಶಂಸೆಯ ಮಹಾಪೂರವೇ ಹದಿದುಬಂದಿದೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು