ಸೋಶಿಯಲ್ ಮೀಡಿಯಾದಲ್ಲಿ​ ಧಾರ್ಮಿಕ ಭಾವನೆ ಕೆರಳಿಸುವ ಸಂದೇಶ ಪೋಸ್ಟ್ ಮಾಡಿದ್ರೆ ಕಠಿಣ ಕ್ರಮ: ಬೆಳಗಾವಿ ಎಸ್ಪಿ ಎಚ್ಚರಿಕೆ

ವಾಟ್ಸಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್​ದಲ್ಲಿ ವಿವಾದಿತ ಪೋಸ್ಟ್, ಸ್ಟೇಟಸ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್​ ಎಚ್ಚರಿಕೆ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ​ ಧಾರ್ಮಿಕ ಭಾವನೆ ಕೆರಳಿಸುವ ಸಂದೇಶ ಪೋಸ್ಟ್ ಮಾಡಿದ್ರೆ ಕಠಿಣ ಕ್ರಮ: ಬೆಳಗಾವಿ ಎಸ್ಪಿ ಎಚ್ಚರಿಕೆ
ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಎಸ್ಪಿ ಡಾ.ಸಂಜೀವ್ ಪಾಟೀಲ್

Updated on: Jun 07, 2023 | 9:17 PM

ಬೆಳಗಾವಿ: ವಿವಾದಾತ್ಮಕ ವಾಟ್ಸಪ್ ಸ್ಟೇಟಸ್‌ನಿಂದ ನೆರೆಯ ಕೊಲ್ಹಾಪುರ (Kolhapur)ದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ವಾಟ್ಸಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್​ದಲ್ಲಿ ವಿವಾದಿತ ಪೋಸ್ಟ್, ಸ್ಟೇಟಸ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್​ ಎಚ್ಚರಿಕೆ ನೀಡಿದ್ದಾರೆ. ಐಪಿಸಿ ಕಲಂ 153ಎ, 295 ಎ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಿಪ್ಪಾಣಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಎಸ್ಪಿ ಡಾ. ಸಂಜೀವ್ ಪಾಟೀಲ್​​, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತೀವ್ರ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆ.

ಬೂದಿ ಮುಚ್ಚಿದ ಕೆಂಡವಾದ ಕೊಲ್ಹಾಪುರ  

ಔರಂಗಜೇಬ್​​ ಮತ್ತು ಟಿಪ್ಪು ಸುಲ್ತಾನ್​ರನ್ನು ಹೊಗಳಿ ವಾಟ್ಸಪ್‌ ಸ್ಟೇಟಸ್​ ಹಾಕಿದ್ದಕ್ಕೆ ಕೊಲ್ಹಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಿಡಿಗೇಡಿಗಳ ಕೃತ್ಯ ಸದ್ಯ ಆಕ್ರೋಶಕ್ಕೆ ಕಾರಣವಾಗಿದ್ದು, ಕೊಲ್ಹಾಪುರದಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಇದನ್ನೂ ಓದಿ: ಔರಂಗಜೇಬ್​​, ಟಿಪ್ಪು​ ಹೊಗಳಿ ವಾಟ್ಸಾಪ್​ ಸ್ಟೇಟಸ್ ಹಾಕಿದ್ದಕ್ಕೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್, 144 ಸೆಕ್ಷನ್ ಜಾರಿ

ಅಶ್ರುವಾಯು ಪ್ರಯೋಗಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರ ಹರಸಾಹಸ ಪಟ್ಟಿದ್ದು, ಕೊಲ್ಹಾಪುರ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸದ್ಯ ಕೊಲ್ಹಾಪುರ ನಗರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದೂಪರ ಸಂಘಟನೆಗಳಿಂದ ಬಂಧನಕ್ಕೆ ಆಗ್ರಹ

ಬುಧವಾರ ಹಿಂದೂಪರ ಸಂಘಟನೆಗಳು ಕೊಲ್ಹಾಪುರ ನಗರ ಬಂದ್‌ಗೆ ಕರೆ ನೀಡಿದ್ದರು. ಬೆಳಗ್ಗೆ ಛತ್ರಪತಿ ಶಿವಾಜಿ ಮಹಾರಾಜ ಚೌಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದ ಹಿಂದೂಪರ ಸಂಘಟನೆಗಳು, ಆಕ್ಷೇಪಾರ್ಹ ಪೋಸ್ಟ್ ಮಾಡಿದವರ ಬಂಧನಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಟಿಪ್ಪು ಸುಲ್ತಾನ್ ಬಗ್ಗೆ ಪೋಸ್ಟ್ ವಿವಾದ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸಂಘರ್ಷ, ಕಲ್ಲು ತೂರಾಟ

ಕಿಡಿಗೇಡಿಗಳಿಂದ ಕಲ್ಲು ತೂರಾಟ: ಸಾರ್ವಜನಿಕ ಆಸ್ತಿಪಾಸ್ತಿ ನಾಶ

ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ಉಂಟಾಗಿದೆ. ಇದೇ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ಮಾಡಿದ್ದು, ಇಬ್ಬರಿಗೆ ಗಾಯಗಳಾಗಿವೆ. ಅಂಗಡಿ ಮುಂಗಟ್ಟು ಮೇಲೆಯೂ ಕಲ್ಲು ತೂರಿ ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡಲಾಗಿದೆ.

ಇತ್ತೀಚೆಗೆ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಶಾಸಕ ಆಸೀಫ್ ಸೇಠ್​ ಗೆಲುವು ಸಾಧಿಸಿದ್ದರು. ಈ ಹಿನ್ನಲೆ ಅವರ ಸಂಭ್ರಮದಲ್ಲಿ ಯಾರೋ ಕಿಡಿಗೇಡಿಗಳು ‘ಪಾಕಿಸ್ತಾನ್​ ಜಿಂದಾಬಾದ್’ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:14 pm, Wed, 7 June 23

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us