AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕಾಕ: ಸರ್ವೆಗೆ ಹೋಗಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಕಲ್ಲು ತೂರಾಟ

ಒತ್ತುವರಿ ಭೂಮಿ ಸರ್ವೇಗೆ ಹೋದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಗೋಕಾಕ ತಾಲೂಕಿನ ಏಳಪಟ್ಟಿ ಗ್ರಾಮಸ್ಥರು ಕಲ್ಲು ತೂರಾಟ ಮಾಡಿದ್ದು, ಅರಣ್ಯ, ಪೊಲೀಸ್ ಇಲಾಖೆ ವಾಹನಗಳು ಸೇರಿದಂತೆ ಖಾಸಗಿ ವಾಹನಗಳು ಜಖಂಗೊಂಡಿವೆ.

ಗೋಕಾಕ: ಸರ್ವೆಗೆ ಹೋಗಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಕಲ್ಲು ತೂರಾಟ
ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಕಲ್ಲು ತೂರಾಟ
Sahadev Mane
| Edited By: |

Updated on:Oct 09, 2023 | 8:52 AM

Share

ಬೆಳಗಾವಿ ಅ.09: ಗೋಕಾಕ (Gokak) ತಾಲೂಕಿನ ಏಳಪಟ್ಟಿ ಗ್ರಾಮದಲ್ಲಿ ಒತ್ತುವರಿ ಮಾಡಿಕೊಂಡಿರುವ ಅರಣ್ಯ ಭೂಮಿಯನ್ನು ಸರ್ವೆ ಮಾಡಲು ಹೋದವರ ಮೇಲೆ ಗ್ರಾಮಸ್ಥರು ಕಲ್ಲು ತೂರಾಟ (Stone Pelting) ಮಾಡಿದ್ದಾರೆ. ಗೋಕಾಕ​​ನ​ ಆರ್​ಎಫ್​ಒ ಸೇರಿ ಐವರು ಅರಣ್ಯ ಇಲಾಖೆ (Forest Department) ಸಿಬ್ಬಂದಿಗೆ ಗಾಯಗಳಾಗಿವೆ. ಕಲ್ಲು ತೂರಾಟದಿಂದ ಅರಣ್ಯ ಸಿಬ್ಬಂದಿ ವಾಹನ, ಪೊಲೀಸ್ ವಾಹನ, ಎರಡು ಖಾಸಗಿ ವಾಹನಗಳು ಸೇರಿದಂತೆ 10ಕ್ಕೂ ಹೆಚ್ಚು ಬೈಕ್​ಗಳು ಜಖಂಗೊಂಡಿವೆ.

ಖನಗಾಂವ್​​ ಕಾಯ್ದಿಟ್ಟ ಅರಣ್ಯ ಪ್ರದೇಶ ಸರ್ವೆ ಮಬರ್ 477, 718/ಎ ಮತ್ತು 580ಎ ನ 500 ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಒತ್ತುವರಿ ಮಾಡಿದ ಜಮೀನನ್ನು ಸರ್ವೆ ಮಾಡಲು ಹೋಗಿದ್ದರು. ಈ ವೇಳೆ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ವಾಗ್ವಾದ ತಾರಕಕ್ಕೇರಿದ್ದು, ಗ್ರಾಮಸ್ಥರು ಏಕಾಏಕಿ ಕಲ್ಲು ತೂರಾಟ ಮಾಡಿದ್ದಾರೆ. ಹೀಗಾಗಿ ಗೋಕಾಕ್ ಪೊಲೀಸ್​​​ ಠಾಣೆಯಲ್ಲಿ 30ಕ್ಕೂ ಹೆಚ್ಚು ಜನರ ಮೇಲೆ ಎಫ್​ಐಆರ್ ದಾಖಲಾಗಿದೆ.

ಖಾನಾಪುರದಲ್ಲಿ ಕರಡಿ ದಾಳಿಗೆ ರೈತ ಸಾವು

ಖಾನಾಪುರ ತಾಲೂಕಿನ ಘೋಶೆ ಬುದ್ರುಕ ಗ್ರಾಮದಲ್ಲಿ ಕರಡಿ ದಾಳಿಗೆ ರೈತ ಸಾವಿಗೀಡಾಗಿದ್ದಾನೆ. ಭೀಕಾಜಿ ಮಿರಾಶಿ (63) ಮೃತ ರೈತ. ಶವ ಎರಡು ಕಿಲೋ ಮೀಟರ್ ದೂರದ ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ರೈತ ಭೀಕಾಜಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಕರಡಿ ದಾಳಿ ಮಾಡಿದೆ. ಬಳಿಕ ಶವ ಎಳೆದೊಯ್ದಿದೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:17 am, Mon, 9 October 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!