AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವು-ಬದುಕಿನ ನಡುವೆ ಹೋರಾಡುತ್ತಿರುವ ವೃದ್ಧೆಯನ್ನು ಕಚೇರಿಗೆ ಕರೆಸಿಕೊಂಡ ಸಿಬ್ಬಂದಿ: ಬೆಳಗಾವಿ ಸಬ್​ ರಿಜಿಸ್ಟ್ರಾರ್ ಸಿಬ್ಬಂದಿ ನಡೆಗೆ ತೀವ್ರ ಆಕ್ರೋಶ

ಆಸ್ಪತ್ರೆಗೆ ಬಂದು ವೃದ್ಧೆ ಸಹಿ ಪಡೆಯಲು ಹಣಕ್ಕೆ ಬೇಡಿಕೆ ಆರೋಪ ಮಾಡಿದ್ದು, ಹಣ ನೀಡಲು ಒಪ್ಪದೇ ವೃದ್ಧೆಯನ್ನು ಕುಟುಂಬಸ್ಥರು ಕಚೇರಿಗೆ ಕರೆತಂದಿದ್ದಾರೆ.

ಸಾವು-ಬದುಕಿನ ನಡುವೆ ಹೋರಾಡುತ್ತಿರುವ ವೃದ್ಧೆಯನ್ನು ಕಚೇರಿಗೆ ಕರೆಸಿಕೊಂಡ ಸಿಬ್ಬಂದಿ: ಬೆಳಗಾವಿ ಸಬ್​ ರಿಜಿಸ್ಟ್ರಾರ್ ಸಿಬ್ಬಂದಿ ನಡೆಗೆ ತೀವ್ರ ಆಕ್ರೋಶ
ಸಹಿಹಾಕಲು ಸಬ್​ ರಿಜಿಸ್ಟ್ರಾರ್ ಕಚೇರಿಗೆ ವೃದ್ಧೆ ಕರೆಸಿಕೊಂಡ ಸಿಬ್ಬಂದಿ
TV9 Web
| Edited By: |

Updated on:Oct 01, 2022 | 1:21 PM

Share

ಬೆಳಗಾವಿ: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ವೃದ್ಧೆಯನ್ನು ಆಸ್ಪತ್ರೆ ಐಸಿಯುನಿಂದ ಸಹಿ ಮಾಡಲು ಸಬ್​ ರಿಜಿಸ್ಟ್ರಾರ್ ಕಚೇರಿಗೆ ಸಿಬ್ಬಂದಿ ಕರೆಸಿಕೊಂಡಂತಹ ಅಮಾನವೀಯತೆ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಐಸಿಯುನಿಂದ ಸ್ಟ್ರೆಚರ್​ನಲ್ಲೇ ವೃದ್ಧೆ ಮಹಾದೇವಿ (80) ಕುಟುಂಬಸ್ಥರು ಕರೆತಂದಿದ್ದಾರೆ. ಆಸ್ತಿಹಂಚಿಕೆ, ಆಸ್ತಿಹಕ್ಕು ಪತ್ರಕ್ಕೆ ಸಹಿ ಹಾಕುವ ವಿಚಾರಕ್ಕೆ ನೋಂದಣಿ ಮಾಡಲು ಕರೆತರಲಾಗಿದೆ. ವೃದ್ಧೆ ಐಸಿಯುನಲ್ಲಿದ್ದ ಕಾರಣ ಆಸ್ಪತ್ರೆಗೆ ಬರಲು ಉಪನೋಂದಣಾಧಿಕಾರಿ ಪದ್ಮನಾಭ್ ಗುಡಿ ಅವರಿಗೆ ಮನವಿ ಮಾಡಲಾಗಿದೆ. ಆದರೆ ಮನವಿ ನಿರಾಕರಿಸಿದ್ದಾರೆ. ಆಸ್ಪತ್ರೆಗೆ ಬಂದು ವೃದ್ಧೆ ಸಹಿ ಪಡೆಯಲು ಹಣಕ್ಕೆ ಬೇಡಿಕೆ ಆರೋಪ ಮಾಡಿದ್ದು, ಹಣ ನೀಡಲು ಒಪ್ಪದೇ ವೃದ್ಧೆಯನ್ನು ಕುಟುಂಬಸ್ಥರು ಕಚೇರಿಗೆ ಕರೆತಂದಿದ್ದಾರೆ. ಆಸ್ಪತ್ರೆಯ ಬೆಡ್ ಮೇಲೆ ಕಚೇರಿಗೆ ಬಂದು ಅಜ್ಜಿ ಸಹಿ ಮಾಡುವ ವಿಡಿಯೋ ವೈರಲ್ ಆಗಿದೆ. ಸದ್ಯ ಸಾರ್ವಜನಿಕ ವಲಯದಲ್ಲಿ ಉಪನೋಂದಣಾಧಿಕಾರಿ ಕಚೇರಿ ಸಿಬ್ಬಂದಿ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೂ ಘಟನೆ ಬಗ್ಗೆ ಪ್ರತಿಕ್ರಿಯೆಗೆ ಅಜ್ಜಿಯ ಕುಟುಂಬಸ್ಥರು ನಕಾರ ಎಂದರು.

ಗದಗ-ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಟ

ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗದಗ ಮುಂಡರಗಿ ರಸ್ತೆಯಲ್ಲಿ ಅವಳಿ ನಗರಕ್ಕೆ ಪೂರೈಕೆಯ 24*7 ನೀರಿನ ಪೈಪ್ ಒಡೆದು ಭಾರಿ ಪೋಲಾಗುತ್ತಿದೆ. ಒಂದು ತಿಂಗಳಿಂದ ಕುಡಿಯುವ ನೀರು ಪೂರೈಕೆ ಇಲ್ಲದೇ ಜನರು ಗೋಳಾಡುತ್ತಿದ್ದು, ನಗರಸಭೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ. ಗದಗ ಬೆಟಗೇರಿ ಅವಳಿ ನಗರದ ಜನರಿಗೆ ದಿನ ನಿತ್ಯ ನೀರಿಗೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಜಿಲ್ಲಾಡಳಿತ ನಿರ್ಲಕ್ಷ್ಯ ವಿರುದ್ಧ ಅವಳಿ ನಗರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಸೂಲಿಗೆ ಬಂದಿದ್ದ ನಕಲಿ ಪತ್ರಕರ್ತನಿಗೆ ಮಹಿಳೆಯಿಂದ ಧರ್ಮದೇಟು 

ತುಮಕೂರು: ಪತ್ರಕರ್ತನ ಹೆಸರೇಳಿಕೊಂಡು ವಸೂಲಿಗೆ ಬಂದವನಿಗೆ ಮಹಿಳೆಯರು ಚಪ್ಪಲಿ ಏಟು ನೀಡಿರುವಂತಹ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರ ಜೀವನೋಪಾಯ ಕೇಂದ್ರದಲ್ಲಿ ಸಿಆರ್​ಪಿ ಆಗಿ ಮಹಿಳೆ ಕೆಲಸ ಮಾಡುತ್ತಿದ್ದಳು. ಮಹಿಳೆ ಜೊತೆ ಮಾತನಾಡುತ್ತ ಲಂಚದಾಸೆ ತೋರಿಸಿ ನಕಲಿ ಪತ್ರಕರ್ತ ವಿಡಿಯೋ ಮಾಡಿಕೊಂಡಿದ್ದ. ಬಳಿಕ ವಿಡಿಯೋ ತೋರಿಸಿ ವಸೂಲಿಗೆ ಇಳಿದಿದ್ದ. ಮಹಿಳೆಗೆ ವಿಡಿಯೋ ಕಳಿಸಿ 4 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ. ಹಣ ಕೊಡದಿದ್ದಕ್ಕೆ ನನ್ನ ಜೊತೆ ಒಂದು ರಾತ್ರಿ ಕಳಿಯಬೇಕು ಎಂದು ಮೆಸೇಜ್ ಮಾಡಿದ್ದನಂತೆ. ಮಹಿಳೆ ಕೆಲಸ ಮಾಡುವ ಜಾಗಕ್ಕೆ ಬಂದು ಬೆದರಿಕೆ ಹಾಕುತ್ತಿದ್ದಾಗ ಧರ್ಮದೇಟು ನೀಡಲಾಗಿದೆ. ಸದ್ಯ ನಾಲ್ವರಿಗೆ ಭರ್ಜರಿ ಗೂಸಾ ಬಿದಿದ್ದು, ನಾಲ್ವರನ್ನು ತುಮಕೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:10 pm, Sat, 1 October 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ