AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಜೀವ ಉಳಿಸಲು ಹೋಗಿ ತಾಯಿಯನ್ನು ಕಳೆದುಕೊಂಡ ಮಗ: ಆಸ್ಪತ್ರೆ ಆವರಣದಲ್ಲಿ ಅಮ್ಮನಿಗಾಗಿ ಗೋಳಾಟ

ಬೆಳಗಾವಿ ಹೊರವಲಯದ ಸಾಂಬ್ರಾ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಾಯಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮಗ ಬೈಕ್ ಚಲಾಯಿಸುತ್ತಿದ್ದಾಗ, ರಸ್ತೆಗೆ ನಾಯಿ ಅಡ್ಡ ಬಂದಿದ್ದು, ಅದನ್ನು ಉಳಿಸಲು ಹೋಗಿ ಬೈಕ್ ಆಯತಪ್ಪಿದೆ. ತೀವ್ರ ಪೆಟ್ಟು ಬಿದ್ದಿದ್ದರಿಂದ ತಾಯಿ ಶಾಂತವ್ವ ಸ್ಥಳದಲ್ಲೇ ಮೃತಪಟ್ಟರು. ಮಗ ಈರಣ್ಣಾ ತಾಯಿಯ ಅಗಲಿಕೆಯಿಂದ ತೀವ್ರ ದುಃಖಿತನಾಗಿದ್ದು, ಈ ದಾರುಣ ಘಟನೆ ಎಲ್ಲರ ಹೃದಯವನ್ನೂ ಕಲಕಿದೆ.

ನಾಯಿ ಜೀವ ಉಳಿಸಲು ಹೋಗಿ ತಾಯಿಯನ್ನು ಕಳೆದುಕೊಂಡ ಮಗ: ಆಸ್ಪತ್ರೆ ಆವರಣದಲ್ಲಿ ಅಮ್ಮನಿಗಾಗಿ ಗೋಳಾಟ
ಬೆಳಗಾವಿ ಅಪಘಾತ
Sahadev Mane
| Edited By: |

Updated on: Jun 19, 2026 | 12:30 PM

Share

ಬೆಳಗಾವಿ,ಜೂ.19: ಬೆಳಗಾವಿ ನಗರದ ಹೊರವಲಯದಲ್ಲಿ ಕಲ್ಲುಹೃದಯವನ್ನೂ ಕರಗಿಸುವಂತಹ ಅತ್ಯಂತ ಹೃದಯ ವಿದ್ರಾವಕ ರಸ್ತೆ ಅಪಘಾತವೊಂದು ನಡೆದಿದೆ. ರಸ್ತೆಗೆ ಅಡ್ಡ ಬಂದ ನಾಯಿಯ ಪ್ರಾಣ ಉಳಿಸಲು ಹೋಗಿ ಬೈಕ್ ಚಲಾಯಿಸುತ್ತಿದ್ದ ಮಗನೊಬ್ಬ ತನ್ನ ಹೆತ್ತ ತಾಯಿಯನ್ನೇ ಕಳೆದುಕೊಂಡಿರುವ ದಾರುಣ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ (Sambra) ಬಳಿ ನಡೆದಿದೆ.

ಅಪಘಾತದಲ್ಲಿ ಪಂಥಬಾಳೆಕುಂದ್ರಿ ಗ್ರಾಮದ ನಿವಾಸಿ ಶಾಂತವ್ವ ಕಲ್ಮಠ ಎಂಬುವವರು ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರ ಮಗ ಈರಣ್ಣಾ ಕಲ್ಮಠ ಬೈಕ್ ಚಲಾಯಿಸುತ್ತಿದ್ದರು. ತಾಯಿ ಮತ್ತು ಮಗ ಇಬ್ಬರೂ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಸಾಂಬ್ರಾ ಬಳಿ ರಸ್ತೆಗೆ ಇದ್ದಕ್ಕಿದ್ದಂತೆ ನಾಯಿಯೊಂದು ಅಡ್ಡ ಬಂದಿದೆ. ಮೂಕ ಪ್ರಾಣಿಯ ಜೀವ ಉಳಿಸಬೇಕೆಂಬ ಆತುರದಲ್ಲಿ ಈರಣ್ಣಾ ಬೈಕ್‌ನ ಹ್ಯಾಂಡಲ್ ನಿಯಂತ್ರಿಸಲು ಯತ್ನಿಸಿದ್ದಾರೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ತಾಯಿ ಶಾಂತವ್ವ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಗಾಬರಿಗೊಂಡ ಮಗ ಈರಣ್ಣಾ, ತಾಯಿಯನ್ನು ತಕ್ಷಣವೇ ಬೆಳಗಾವಿಯ ಬಿಮ್ಸ್ (BIMS) ಆಸ್ಪತ್ರೆಗೆ ಕರೆತಂದಿದ್ದಾನೆ. ಆದರೆ ಪರೀಕ್ಷಿಸಿದ ವೈದ್ಯರು ಆಕೆ ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಮಾತು ಕೇಳುತ್ತಿದ್ದಂತೆ ಮಗನ ಗೋಳಾಟ ಮುಗಿಲು ಮುಟ್ಟಿದೆ. ತಾಯಿ ಕೊನೆಕ್ಷಣದವರೆಗೂ ಕೈಯಲ್ಲಿ ಹಿಡಿದುಕೊಂಡಿದ್ದ ಬ್ಯಾಗ್ ಅನ್ನು ಎದೆಗೆ ಅಪ್ಪಿಕೊಂಡು ಆಸ್ಪತ್ರೆಯ ಆವರಣದಲ್ಲೇ ಮಗ ಕಣ್ಣೀರಿಟ್ಟ ದೃಶ್ಯ ನೆರೆದಿದ್ದವರ ಕಣ್ಣಾಲಿಗಳನ್ನು ಒದ್ದೆಯಾಗಿಸಿತು.

ಇದನ್ನೂ ಓದಿ: ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ವಿದ್ಯಾರ್ಥಿ ಸಾವು

ಹೆತ್ತ ತಾಯಿಯನ್ನು ತನ್ನ ಕಣ್ಣೆದುರೇ ಕಳೆದುಕೊಂಡು ಅನಾಥ ಪ್ರಜ್ಞೆಯಲ್ಲಿ ಮುಳುಗಿರುವ ಮಗನ ಸ್ಥಿತಿ ಕಂಡು ಸ್ಥಳೀಯರು ಮತ್ತು ಆಸ್ಪತ್ರೆಯ ಸಿಬ್ಬಂದಿಮರುಗಿದ್ದಾರೆ. ಈ ಕರುಣಾಜನಕ ಘಟನೆಗೆ ಸಂಬಂಧಿಸಿದಂತೆ ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ