AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಡ್ಯೂಟಿ ಬದಲಿಸಿದ್ದಕ್ಕೆ ಠಾಣೆಯಲ್ಲಿ ಆತ್ಮಹತ್ಯೆ ಡ್ರಾಮಾ ಮಾಡಿದ ಕಾನ್ಸ್​ಟೇಬಲ್! ಆಮೇಲೇನಾಯ್ತು?

ಡ್ಯೂಟಿಯಿಂದ ತಪ್ಪಿಸಿಕೊಳ್ಳಬೇಕೆಂದು ಪೊಲೀಸ್ ಕಾನ್ಸ್​ಟೇಬಲ್ ಒಬ್ಬರು ಆತ್ಮಹತ್ಯೆ ನಾಟಕವಾಡಿದ ವಿಚಿತ್ರ ಘಟನೆ ಬೆಳಗಾವಿಯ ಉದ್ಯಮಬಾಗ ಪೊಲಿಸ್ ಠಾಣೆಯಲ್ಲಿ ನಡೆದಿದೆ. ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಿದಾಗ ಅಸಲಿ ಸತ್ಯ ಗೊತ್ತಾಗಿದೆ. ಆದರೆ, ಅಷ್ಟರಲ್ಲಿ ಪಿಐಗೆ ಲೋ ಬಿಪಿಯಾಗಿ ಕಂಗಾಲಾಗಿದ್ದಾರೆ. ಆಮೇಲೇನಾಯ್ತು? ತಿಳಿಯಲು ಮುಂದೆ ಓದಿ.

ಬೆಳಗಾವಿ: ಡ್ಯೂಟಿ ಬದಲಿಸಿದ್ದಕ್ಕೆ ಠಾಣೆಯಲ್ಲಿ ಆತ್ಮಹತ್ಯೆ ಡ್ರಾಮಾ ಮಾಡಿದ ಕಾನ್ಸ್​ಟೇಬಲ್! ಆಮೇಲೇನಾಯ್ತು?
ಪೊಲೀಸ್ ಕಾನ್ಸ್​ಟೇಬಲ್ ಮುದಕಪ್ಪ ಉದಗಟ್ಟಿ
ಸಹದೇವ್​ ಮಾನೆ
| Edited By: |

Updated on:Jan 02, 2025 | 8:07 AM

Share

ಬೆಳಗಾವಿ, ಜನವರಿ 2: ಡ್ಯೂಟಿ ಬದಲಿಸಿದ್ದಕ್ಕೆ ಪೊಲೀಸ್ ಕಾನ್ಸ್​ಟೇಬಲ್ ಮುದಕಪ್ಪ ಉದಗಟ್ಟಿ ಎಂಬವರು ಆತ್ಮಹತ್ಯೆಯ ನಾಟಕ ಮಾಡಿದ ವಿಚಿತ್ರ ಘಟನೆ ಬೆಳಗಾವಿಯ ಉದ್ಯಮಬಾಗ ಠಾಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಮುದಕಪ್ಪ ಅವಾಂತರದಿಂದಾಗಿ ಠಾಣೆಯ ಪಿಐ ಡಿಕೆ ಪಾಟೀಲ್ ಲೋ ಬಿಪಿ ಆಗಿ ಆಸ್ಪತ್ರೆ ಸೇರುವಂಥ ಆಗಿದೆ! ಘಟನೆ ಬಗ್ಗೆ ಇದೀಗ ಬೆಳಗಾವಿ ಪೊಲೀಸ್ ಆಯುಕ್ತ ಯುಡಾ ಮಾರ್ಟಿನ್ ಅವರಿಗೂ ಮಾಹಿತಿ ನೀಡಲಾಗಿದೆ.

ಠಾಣೆಯಲ್ಲಿ ನಡೆಯಿತು ಹೈಡ್ರಾಮಾ

ಮುದಕಪ್ಪ ಎರಡು ದಿನ ರಜೆ ಹೋಗಿ ಬಂದಿದ್ದರು. ಹೀಗಾಗಿ ಅವರಿಗೆ ಪಿಐ ಡ್ಯೂಟಿ ಬದಲಿಸಿದ್ದರು. ಕರ್ತವ್ಯ ನಿಯೋಜಿಸಿದ ಜಾಗಕ್ಕೆ ಹೋಗಬೇಕೆಂದು ಸೂಚನೆ ನೀಡಿದ್ದರು. ಆದರೆ ಇದಕೊಪ್ಪದ ಮುದಕಪ್ಪ, ವಿಷ ಸೇವಿಸುತ್ತೇನೆ ಎಂದು ಹೇಳಿದ್ದಲ್ಲದೆ ದಾಳಿಯಲ್ಲಿ ಬಿದ್ದು ಹೊರಳಾಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಯಲಾಗಿದ್ದು ಆರೋಗ್ಯ ತಪಾಸಣೆ ಮಾಡಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು, ಮುದಕಪ್ಪ ವಿಷ ಸೇವಿಸಿಲ್ಲ ಎಂದು ದೃಢಪಡಿಸಿದ್ದಾರೆ. ಬಳಿಕ ಮೇಲಧಿಕಾರಿಗಳು ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.

ಇದನ್ನೂ ಓದಿ: ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಗು, ಗರ್ಭಿಣಿ ಸಾವು: ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಯತ್ನ

ಆದರೆ ಇಷ್ಟೆಲ್ಲ ಆಗುವಾಗ ಪಿಐ ಡಿಕೆ ಪಾಟೀಲ್ ಅಸ್ವಸ್ಥಗೊಂಡಿದ್ದಾರೆ. ಅವರಿಗೆ ಲೋ ಬಿಪಿ ಆಗಿದ್ದು ಆಸ್ಪತ್ರೆಗೆ ದಾಖಲಿಸಲಾಯಿತು. ಈ ವಿಚಾರ ತಿಳಿದು ಎಸಿಪಿ ಶೇಖರಪ್ಪ ಉದ್ಯಮಬಾಗ ಠಾಣೆಗೆ ಆಗಮಿಸಿ, ಘಟನೆಯ ಸಂಪೂರ್ಣ ಮಾಹಿತಿ ಪಡೆದರು. ನಂತರ ಬೆಳಗಾವಿ ಪೊಲೀಸ್ ಕಮಿಷನರ್ ಅವರಿಗೂ ವಿವರಗಳನ್ನು ತಿಳಿಸಿದರು.

ಇದೇ ಮೊದಲಲ್ಲ!

ಅಂದಹಾಗೆ, ಉದ್ಯಮಬಾಗ ಠಾಣೆಯಲ್ಲಿಈ ರೀತಿಯ ವಿಚಿತ್ರ ನಡೆಯುತ್ತಿರುವುದು ಇದೇ ಮೊದಲಲ್ಲ. ಒಂದು ತಿಂಗಳ ಹಿಂದೆ ಇದೇ ಠಾಣೆಯಲ್ಲಿ ಪೊಲೀಸ್ ಪೇದೆ ವಿಠ್ಠಲ್ ಮುನಿಹಾಳ ಎಂಬವರು ಡೆತ್ ನೋಟ್ ಬರೆದಿಟ್ಟು ಹೋಗಿದ್ದರು. ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟು ಹೋಗಿದ್ದರು. ಸಿಪಿಐ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 am, Thu, 2 January 25

Follow Us
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ