AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಮುಹೂರ್ತ ನಿಗದಿಪಡಿಸಿದ್ದು ಬೆಳಗಾವಿಯ ವಿದ್ಯಾವಿಹಾರ ವಿದ್ಯಾಲಯ ಕುಲಪತಿ

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿದೆ. ಜ.22ರಂದು ಪಂಚಾಂಗದ ಪ್ರಕಾರ ಮೃಗಶಿರಾ ನಕ್ಷತ್ರವಿದೆ. ಆ ದಿನ ಮಧ್ಯಾಹ್ನ 12.15ರಿಂದ 12.45ರ ನಡುವೆ ವಿಗ್ರಹವನ್ನು ಗರ್ಭಗುಡಿ ಯಲ್ಲಿ ಪ್ರತಿಷ್ಠಾಪನೆ ಮಾಡಿ, ಪ್ರಾಣ ತುಂಬಲಾಗುತ್ತದೆ. ಈ ಪ್ರಾಣ ಪ್ರತಿಷ್ಠೆಯ ಮುಹೂರ್ತ ನಿಗದಿಪಡಿಸಿದ್ದು ಯಾರು? ಎಲ್ಲಿಯವರು? ಇಲ್ಲಿದೆ ಮಾಹಿತಿ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಮುಹೂರ್ತ ನಿಗದಿಪಡಿಸಿದ್ದು ಬೆಳಗಾವಿಯ ವಿದ್ಯಾವಿಹಾರ ವಿದ್ಯಾಲಯ ಕುಲಪತಿ
ವಿಜಯೇಂದ್ರ ಶರ್ಮಾ, ಮುಹೂರ್ತ ಪತ್ರ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on:Jan 20, 2024 | 1:41 PM

Share

ಬೆಳಗಾವಿ, ಜನವರಿ 20: ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಜನವರಿ 22 ರಂದು ರಾಮಲಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ನಂತರ ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಜ.22ರಂದು ಪಂಚಾಂಗದ ಪ್ರಕಾರ ಮೃಗಶಿರಾ ನಕ್ಷತ್ರವಿದೆ. ಆ ದಿನ ಮಧ್ಯಾಹ್ನ 12.15ರಿಂದ 12.45ರ ನಡುವೆ ವಿಗ್ರಹವನ್ನು ಗರ್ಭಗುಡಿ ಯಲ್ಲಿ ಪ್ರತಿಷ್ಠಾಪನೆ ಮಾಡಿ, ಪ್ರಾಣ ತುಂಬಲಾಗುತ್ತದೆ. ಈ ಸಮಯದಲ್ಲಿ ಅಭಿಜಿನ್ ಮುಹೂರ್ತವಿರುತ್ತದೆ. ಇದೇ ಸಮಯದಲ್ಲಿ ರಾಮನ ಜನನವಾಯಿತು ಎಂಬ ಕಾರಣದ ಜತೆಗೆ, ಈ ವೇಳೆ ಅಮೃತ ಸಿದ್ಧಿಯೋಗ, ಸರ್ವಾರ್ಥ ಸಿದ್ಧಿಯೋಗಗಳಿವೆ ಎಂಬುದನ್ನೂ ಗಮನದಲ್ಲಿಟ್ಟುಕೊಳ್ಳಬೇಕು. ಇನ್ನು ಈ ಮುಹೂರ್ತವನ್ನು ನಿಗದಿಪಡಿಸಿದ್ದು ಯಾರು? ಎಂಬ ಮಾಹಿತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ.

ಬೆಳಗಾವಿಯ ನವ ಬೃಂದಾವನ ನಿವಾಸಿಯಾಗಿರುವ ವಿಜಯೇಂದ್ರ ಶರ್ಮಾ ಅವರು ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಮುಹೂರ್ತ ನಿಗದಿಪಡಿಸಿದ್ದಾರೆ. ವಿಜಯೇಂದ್ರ ಶರ್ಮಾ ಅವರು ವಿದ್ಯಾವಿಹಾರ ವಿದ್ಯಾಲಯ ಕುಲಪತಿಯಾಗಿದ್ದಾರೆ. ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠೆಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​​ ಕೋಶ್ಯಾಧ್ಯಕ್ಷ ಸ್ವಾಮಿ ಗೋವಿಂದ್ ದೇವಗಿರಿ ಅವರು, ವಿಜಯೇಂದ್ರ ಶರ್ಮಾ ಅವರ ಬಳಿ ಮುಹೂರ್ತ ಕೇಳಿದ್ದರು.

ಇದನ್ನೂ ಓದಿ: Watch: ಅಯೋಧ್ಯೆ ರಾಮಮಂದಿರ ಹೇಗಿದೆ?; ಇಲ್ಲಿದೆ ರಾಮನ ಭವ್ಯ ದೇಗುಲದ ಒಂದು ನೋಟ

ಬಳಿಕ ವಿಜಯೇಂದ್ರ ಶರ್ಮಾ ಅವರು ದೇವಾಲಯದ ಒಳಗೆ ಮೂರ್ತಿ ಪ್ರವೇಶ (ಜ.18) ಮತ್ತು ಪ್ರಾಣ ಪ್ರತಿಷ್ಠೆಗೆ (ಜ.22) ಈ ಎರಡು ದಿನದ ಮುಹೂರ್ತವನ್ನು ನಿಗದಿಪಡಿಸಿ 2023ರ ಏ.15ರಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​​ಗೆ ಪತ್ರದ ಮೂಲಕ ಕಳುಹಿಸುತ್ತಾರೆ.

ಶಂಕುಸ್ಥಾಪನೆಗೂ ಮುಹೂರ್ತ ನಿಗದಿ ಮಾಡಿದ್ದು ಇವರೆ

ಹೌದು 2020ರ ಆಗಸ್ಟ್​ 5 ರಂದು ಭದ್ರಯೋಗದಲ್ಲಿ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ನೆರವೇರಿದೆ. ಈ ಶಂಕುಸ್ಥಾಪನೆಯ ಮುಹೂರ್ತವನ್ನು ವಿಜಯೇಂದ್ರ ಶರ್ಮಾ ಅವರೇ ನೀಡಿದ್ದಾರೆ. ಬಳಿಕ ರಾಮಮಂದಿರ ಭೂಮಿ ಪೂಜೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ನೆರವೇರಿಸುತ್ತಾರೆ. ಆದರೆ ಇದೀಗ ಅನಾರೋಗ್ಯದ ಕಾರಣ ವಿಜಯೇಂದ್ರ ಶರ್ಮಾ ಅವರು ಅಯೋಧ್ಯೆಗೆ ಹೋಗುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Sat, 20 January 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ