ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಮುಹೂರ್ತ ನಿಗದಿಪಡಿಸಿದ್ದು ಬೆಳಗಾವಿಯ ವಿದ್ಯಾವಿಹಾರ ವಿದ್ಯಾಲಯ ಕುಲಪತಿ

| Updated By: ವಿವೇಕ ಬಿರಾದಾರ

Updated on: Jan 20, 2024 | 1:41 PM

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿದೆ. ಜ.22ರಂದು ಪಂಚಾಂಗದ ಪ್ರಕಾರ ಮೃಗಶಿರಾ ನಕ್ಷತ್ರವಿದೆ. ಆ ದಿನ ಮಧ್ಯಾಹ್ನ 12.15ರಿಂದ 12.45ರ ನಡುವೆ ವಿಗ್ರಹವನ್ನು ಗರ್ಭಗುಡಿ ಯಲ್ಲಿ ಪ್ರತಿಷ್ಠಾಪನೆ ಮಾಡಿ, ಪ್ರಾಣ ತುಂಬಲಾಗುತ್ತದೆ. ಈ ಪ್ರಾಣ ಪ್ರತಿಷ್ಠೆಯ ಮುಹೂರ್ತ ನಿಗದಿಪಡಿಸಿದ್ದು ಯಾರು? ಎಲ್ಲಿಯವರು? ಇಲ್ಲಿದೆ ಮಾಹಿತಿ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಮುಹೂರ್ತ ನಿಗದಿಪಡಿಸಿದ್ದು ಬೆಳಗಾವಿಯ ವಿದ್ಯಾವಿಹಾರ ವಿದ್ಯಾಲಯ ಕುಲಪತಿ
ವಿಜಯೇಂದ್ರ ಶರ್ಮಾ, ಮುಹೂರ್ತ ಪತ್ರ
Follow us on

ಬೆಳಗಾವಿ, ಜನವರಿ 20: ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಜನವರಿ 22 ರಂದು ರಾಮಲಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ನಂತರ ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಜ.22ರಂದು ಪಂಚಾಂಗದ ಪ್ರಕಾರ ಮೃಗಶಿರಾ ನಕ್ಷತ್ರವಿದೆ. ಆ ದಿನ ಮಧ್ಯಾಹ್ನ 12.15ರಿಂದ 12.45ರ ನಡುವೆ ವಿಗ್ರಹವನ್ನು ಗರ್ಭಗುಡಿ ಯಲ್ಲಿ ಪ್ರತಿಷ್ಠಾಪನೆ ಮಾಡಿ, ಪ್ರಾಣ ತುಂಬಲಾಗುತ್ತದೆ. ಈ ಸಮಯದಲ್ಲಿ ಅಭಿಜಿನ್ ಮುಹೂರ್ತವಿರುತ್ತದೆ. ಇದೇ ಸಮಯದಲ್ಲಿ ರಾಮನ ಜನನವಾಯಿತು ಎಂಬ ಕಾರಣದ ಜತೆಗೆ, ಈ ವೇಳೆ ಅಮೃತ ಸಿದ್ಧಿಯೋಗ, ಸರ್ವಾರ್ಥ ಸಿದ್ಧಿಯೋಗಗಳಿವೆ ಎಂಬುದನ್ನೂ ಗಮನದಲ್ಲಿಟ್ಟುಕೊಳ್ಳಬೇಕು. ಇನ್ನು ಈ ಮುಹೂರ್ತವನ್ನು ನಿಗದಿಪಡಿಸಿದ್ದು ಯಾರು? ಎಂಬ ಮಾಹಿತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ.

ಬೆಳಗಾವಿಯ ನವ ಬೃಂದಾವನ ನಿವಾಸಿಯಾಗಿರುವ ವಿಜಯೇಂದ್ರ ಶರ್ಮಾ ಅವರು ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಮುಹೂರ್ತ ನಿಗದಿಪಡಿಸಿದ್ದಾರೆ. ವಿಜಯೇಂದ್ರ ಶರ್ಮಾ ಅವರು ವಿದ್ಯಾವಿಹಾರ ವಿದ್ಯಾಲಯ ಕುಲಪತಿಯಾಗಿದ್ದಾರೆ. ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠೆಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​​ ಕೋಶ್ಯಾಧ್ಯಕ್ಷ ಸ್ವಾಮಿ ಗೋವಿಂದ್ ದೇವಗಿರಿ ಅವರು, ವಿಜಯೇಂದ್ರ ಶರ್ಮಾ ಅವರ ಬಳಿ ಮುಹೂರ್ತ ಕೇಳಿದ್ದರು.

ಇದನ್ನೂ ಓದಿ: Watch: ಅಯೋಧ್ಯೆ ರಾಮಮಂದಿರ ಹೇಗಿದೆ?; ಇಲ್ಲಿದೆ ರಾಮನ ಭವ್ಯ ದೇಗುಲದ ಒಂದು ನೋಟ

ಬಳಿಕ ವಿಜಯೇಂದ್ರ ಶರ್ಮಾ ಅವರು ದೇವಾಲಯದ ಒಳಗೆ ಮೂರ್ತಿ ಪ್ರವೇಶ (ಜ.18) ಮತ್ತು ಪ್ರಾಣ ಪ್ರತಿಷ್ಠೆಗೆ (ಜ.22) ಈ ಎರಡು ದಿನದ ಮುಹೂರ್ತವನ್ನು ನಿಗದಿಪಡಿಸಿ 2023ರ ಏ.15ರಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​​ಗೆ ಪತ್ರದ ಮೂಲಕ ಕಳುಹಿಸುತ್ತಾರೆ.

ಶಂಕುಸ್ಥಾಪನೆಗೂ ಮುಹೂರ್ತ ನಿಗದಿ ಮಾಡಿದ್ದು ಇವರೆ

ಹೌದು 2020ರ ಆಗಸ್ಟ್​ 5 ರಂದು ಭದ್ರಯೋಗದಲ್ಲಿ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ನೆರವೇರಿದೆ. ಈ ಶಂಕುಸ್ಥಾಪನೆಯ ಮುಹೂರ್ತವನ್ನು ವಿಜಯೇಂದ್ರ ಶರ್ಮಾ ಅವರೇ ನೀಡಿದ್ದಾರೆ. ಬಳಿಕ ರಾಮಮಂದಿರ ಭೂಮಿ ಪೂಜೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ನೆರವೇರಿಸುತ್ತಾರೆ. ಆದರೆ ಇದೀಗ ಅನಾರೋಗ್ಯದ ಕಾರಣ ವಿಜಯೇಂದ್ರ ಶರ್ಮಾ ಅವರು ಅಯೋಧ್ಯೆಗೆ ಹೋಗುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Sat, 20 January 24