AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದವನು ಯಾರು? ಆತನ ಕ್ರೈಂ ಹಿಸ್ಟರಿ ಇಲ್ಲಿದೆ ನೋಡಿ

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದವನು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಂಗಳೂರಿನ ಕೈದಿ ಜಯೇಶ್ ಪೂಜಾರಿ. ಈತನ ಕ್ರೈಂ ಹಿಸ್ಟಡಿ ಕೂಡ ಹಾಗೇ ಇದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದವನು ಯಾರು? ಆತನ ಕ್ರೈಂ ಹಿಸ್ಟರಿ ಇಲ್ಲಿದೆ ನೋಡಿ
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಕೈದಿ ಜಯೇಶ್ ಪೂಜಾರಿ ಇರುವ ಹಿಂಡಲಗಾ ಜೈಲು
Follow us
TV9 Web
| Updated By: Rakesh Nayak Manchi

Updated on:Jan 15, 2023 | 3:58 PM

ಬೆಳಗಾವಿ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಜೀವ ಬೆದರಿಕೆ ಹಾಕಿದ ಕೈದಿ ಮಂಗಳೂರಿನ ಜಯೇಶ್ ಪೂಜಾರಿ (Prisoner Jayesh Poojary) ಎಂದು ತಿಳಿದುಬಂದಿದ್ದು, ಈತನ ಕ್ರೈಮ್ ಹಿಸ್ಟರಿ ಕೂಡ ಅದೇ ರೀತಿಯಲ್ಲಿದೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಜಯೇಶ್ ಪೂಜಾರಿ (Jayesh Poojary Crime History) ಆರೇಳು ವರ್ಷಗಳ ಹಿಂದೆ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದ. ನಾಲ್ಕು ವರ್ಷಗಳ ಹಿಂದೆ ಅಂದು ಉತ್ತರ ವಲಯ ಐಜಿಪಿಯಾಗಿದ್ದ ಇಂದಿನ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್​ಗೆ (Alok Kumar) ಕರೆ ಮಾಡಿ ಜೀವ ಬೆದರಿಕೆಯೊಡ್ಡಿದ್ದನು.

ಮೂಲತಃ ಕಡಬಾ ತಾಲೂಕು ಶಿರಾಡಿ ನಿವಾಸಿಯಾಗಿರುವ ಜಯೇಶ್ ಪೂಜಾರಿ 2008ರಲ್ಲಿ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಜೈಲು ಸೇರಿದ್ದನು. 2016ರ ಆಗಸ್ಟ್ 12ರಂದು ಮಂಗಳೂರಿನ ಐದನೇ ಸೆಷನ್ಸ್ ನ್ಯಾಯಾಲಯವು ಜಯೇಶ್ ಪೂಜಾರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. 2017ರಲ್ಲಿ ಮರಣ ದಂಡನೆ ಶಿಕ್ಷೆ ಜೀವಾವಧಿ ಶಿಕ್ಷೆಯಾಗಿ ಮಾರ್ಪಾಡಾಗಿತ್ತು.

ಇದನ್ನೂ ಓದಿ: Threat to Nitin Gadkari: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ 3 ಬಾರಿ ಜೀವ ಬೆದರಿಕೆ ಕರೆ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಜಯೇಶ್​ ಪೂಜಾರಿ 2018ರಲ್ಲಿ ಅಂದಿನ ಉತ್ತರ ವಲಯ ಐಜಿಪಿಯಾಗಿದ್ದ ಇಂದಿನ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್‌ ಕುಮಾರ್‌ ಅವರಿಗೆ ದೂರವಾನಿ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. 2019ರ ಮೇ 1ರಂದು ಮೈಸೂರು ಜೈಲಿಗೆ ಸ್ಥಳಾಂತರಗೊಂಡಿದ್ದ ಜಯೇಶ್ ಪೂಜಾರಿ, 2021ರ ಸೆಪ್ಟೆಂಬರ್ 14ರಂದು ಮರಳಿ ಬೆಳಗಾವಿ ಹಿಂಡಲಗಾ ಜೈಲಿಗೆ ಸ್ಥಳಾಂತರಗೊಂಡಿದ್ದನು.

ಎಟಿಎಸ್ ಅಧಿಕಾರಿಗಳಿಂದ ಕೈದಿ ಜಯೇಶ್​ ಪೂಜಾರಿ ವಿಚಾರಣೆ

ಹಿಂಡಲಗಾ ಜೈಲಿನ ಕೈದಿಯಿಂದ ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ ಸಂಬಂಧ ಎಟಿಎಸ್ ಅಧಿಕಾರಿಗಳಿಂದ ಕೈದಿ ಜಯೇಶ್​ ಪೂಜಾರಿ ವಿಚಾರಣೆ ನಡೆದಿದೆ. ಎಟಿಎಸ್​ನ ಎಪಿಐ ಶಿಲ್ಪಾ ಯಮಗಾರ ನೇತೃತ್ವದಲ್ಲಿ ಮಹಾರಾಷ್ಟ್ರದ ATS ಅಧಿಕಾರಿಗಳು ವಿಚಾರಣೆ ನಡೆಸಿ ತೆರಳಿದ್ದಾರೆ. ಜಯೇಶ್ ಪೂಜಾರಿ ಬಳಿ ಇದ್ದ ಡೈರಿ ಜಪ್ತಿ ಮಾಡಿದ್ದು, ಅದರಲ್ಲಿ ಕೇಂದ್ರ ಸಚಿವರು, ಪೊಲೀಸ್ ಅಧಿಕಾರಿಗಳ ನಂಬರ್ ಪತ್ತೆಯಾಗಿದೆ.

ನಾಗ್ಪುರದ ಧನತೋಲಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​​ ದಾಖಲು

ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ ಸಂಬಂಧ ನಾಗ್ಪುರದ ಧನತೋಲಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​​ ದಾಖಲಾಗಿದೆ. ಗಡ್ಕರಿ ಕಚೇರಿ ಸಿಬ್ಬಂದಿ ಜಿತೇಂದ್ರ ಶರ್ಮಾ ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್ 1860ರ ಕಲಂ 385, 387, 506/2, 507 ಅಡಿ ಎಫ್​ಐಆರ್ ದಾಖಲಾಗಿದೆ. ನಿನ್ನೆ ಬೆಳಗ್ಗೆ 11.29ಕ್ಕೆ ನಿತಿನ್​ ಗಡ್ಕರಿ ಕಚೇರಿ ದೂರವಾಣಿ ಸಂಖ್ಯೆಗೆ ಕರೆ ಮಾಡಿ ‘ನಾನು ದಾವೂದ್​ ಗ್ಯಾಂಗ್​ನಿಂದ ಮಾತನಾಡುತ್ತಿದ್ದೇನೆ, ಕೇಂದ್ರ ಸಚಿವ ನಿತಿನ್​ ಗಡ್ಕರಿಗೆ ಹೇಳಿ 100 ಕೋಟಿ ಹಣ ಕಳುಹಿಸಿ. ಇಲ್ಲದಿದ್ದರೆ ಗಡ್ಕರಿ ಎಲ್ಲಿ ಸಿಗುತ್ತಾರೋ ಅಲ್ಲಿ ಬಾಂಬ್​ ಸ್ಫೋಟಿಸಿ ಕೊಲ್ಲುತ್ತೇನೆ. ನನಗೆ ಕೇಂದ್ರ ಸಚಿವ ನಿತಿನ್​ ಗಡ್ಕರಿ ಕಚೇರಿ ಗೊತ್ತು, ಬೆಂಗಳೂರಿಗೆ ಹಣ ಕಳುಹಿಸಿ ಎಂದು ಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ವಿಚಾರವನ್ನು ಸಿಬ್ಬಂದಿ ಗಡ್ಕರಿ ಗನ್​ಮ್ಯಾನ್ ದೀಪಕ್‌ಗೆ ತಿಳಿಸಿದ್ದಾರೆ. ನಿನ್ನೆ ಬೆಳಗ್ಗೆ 11.37ಕ್ಕೆ ಮತ್ತೆ ಕರೆ ಮಾಡಿ ಬೆದರಿಕೆ ಹಾಕಿದ್ದ ಕೈದಿ ಜಯೇಶ್, ಈ ವೇಳೆ 8139923258 ನಂಬರ್ ನೀಡಿದ್ದನು. ಮಧ್ಯಾಹ್ನ 12.29ಕ್ಕೆ ಮತ್ತೊಮ್ಮೆ ಕರೆ ಮಾಡಿದ್ದ ಜಯೇಶ್ ಪೂಜಾರಿ, ನನ್ನ ಸಂದೇಶವನ್ನು ನಿತಿನ್​ ಗಡ್ಕರಿಗೆ ಹೇಳಿದ್ದೀರಾ ಎಂದು ಪ್ರಶ್ನಿಸಿದ್ದಾನೆ. ಆಗ ಸಾಹೇಬರು ಬ್ಯುಸಿ ಇದ್ದಾರೆ ಅಂತಾ ಸಿಬ್ಬಂದಿ ಹೇಳಿದ್ದಾರೆ. ನಿನ್ನ ಹೆಸರು, ವಿಳಾಸ ತಿಳಿಸು ಎಂದಾಗ ನೀವು ಕ್ಯಾಶ್ ಕರ್ನಾಟಕಕ್ಕೆ ಕಳುಹಿಸಿ ಅಲ್ಲಿಂದ ಹೇಳುತ್ತೇವೆ ಎಂದಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:58 pm, Sun, 15 January 23

ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ