ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ತೆರೆ: ಏನೆಲ್ಲಾ ಚರ್ಚೆಯಾಯ್ತು? ಮಾಹಿತಿ ನೀಡಿದ ಸ್ಫೀಕರ್
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ (Belagavi Session) ಚಳಿಗಾಲದ ಅಧಿವೇಶನ (Winter Session) ಇಂದು ಕೊನೆ ದಿನವಾಗಿದ್ದು, 12 ದಿನಗಳ ಕಾಲ ನಡೆದ ಅಧಿವೇಶನದಲ್ಲಿ ಏನೆಲ್ಲಾ ಚರ್ಚೆಗಳು ನಡೆದಿವೆ. ಎಷ್ಟು ಬಿಲ್ಗಳು ಅಂಗೀಕಾರವಾಗಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಸ್ಪೀಕರ್ ಯುಟಿ ಖಾದರ್ ನೀಡಿದ್ದಾರೆ.

ಬೆಳಗಾವಿ, (ಡಿಸೆಂಬರ್ 15): ಇದೇ ಡಿಸೆಂಬರ್ 4ರಿಂದ ಆರಂಭವಾಗಿದ್ದ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ (belagavi Winter session 2023) ಇಂದು ತೆರೆ ಬಿದ್ದಿದೆ. ಅಧೀವೇಶನದ ಕೊನೆ ದಿನವಾದ ಇಂದು(ಡಿಸೆಂಬರ್ 15) ಯುಟಿ ಖಾದರ್ (Speaker UT Khader) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಭಾರಿ ದೀರ್ಘಾವದಿ ಚರ್ಚೆಯಾಗಿದ್ದು, 17 ಬಿಲ್ ಗಳನ್ನ ಅಂಗೀಕರಿಸಲಾಗಿದೆ. ಇನ್ನು 150 ಗಮನ ಸೆಳೆಯುವ ಸೂಚನೆಗೆ ಚರ್ಚೆಯಾಗಿದ್ದು, ಅಧಿವೇಶನ ಅತ್ಯಂತ ಸಂತೋಷ ತಂದಿದೆ ಎಂದಿದ್ದಾರೆ.
ಅಧಿವೇಶನದಲ್ಲಿ ಅನೇಕ ವಿಚಾರಗಳು ಪ್ರಸ್ತಾಪವಾದರೆ, ಮತ್ತೆ ಕೆಲವು ವಿಷಯಗಳು ಕುರಿತ ಚರ್ಚೆಯೇ ಆಗಿಲ್ಲ. ಅಧಿವೇಶನ ಡಿಸೆಂಬರ್ 4 ರಿಂದ ಆರಂಭವಾಗಿದ್ದು ಈವರೆಗೆ ಉಪಯುಕ್ತ ಚರ್ಚೆಗಿಂತ ಗದ್ದಲ ಕೋಲಾಹಲದಲ್ಲೇ ಸದನ ಮುಳುಗಿಹೋಗಿದೆ. ಚರ್ಚೆಯಾಗಬೇಕಾದ ಸಾಕಷ್ಟು ವಿಚಾರಗಳು ಹಾಗೇ ಉಳಿದುಕೊಂಡಿವೆ.
ಇದನ್ನೂ ಓದಿ: Belagavi Session: ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ: ಚರ್ಚೆ ಆಗಿದ್ದೇನು, ಬಾಕಿ ಉಳಿದಿದ್ದೇನು?
ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಾದ ಚರ್ಚೆ
ಈ ಬಾರಿಯ ವಿಧಾನ ಸಭಾ ಕಲಾಪದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಾಗಿ ವಿಶೇಷ ಚರ್ಚೆ ಜರುಗಿದೆ. 42 ಶಾಸಕರು 11 ಗಂಟೆ 04 ನಿಮಿಷಗಳ ಕಾಲ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಮಾತನಾಡಿದ್ದಾರೆ. ಇನ್ನು ರಾಜ್ಯದಲ್ಲಿ ಆವರಿಸಿರುವ ಬರಗಾಲದ ಕುರಿತು ವಿಧಾನ ಸಭೆಯಲ್ಲಿ ಚರ್ಚೆ ಜರುಗಿತು. ಶಾಸಕರು ಹಾಗೂ ಮಂತ್ರಿಗಳು ಬರಗಾಲದ ಬಗ್ಗೆ ಯುದ್ದ ಸನದ್ಧ ರೀತಿಯಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ನೀತಿಗಳನ್ನು ರೂಪಿಸಿದರು. ಯುವ ಶಾಸಕರು ಹವಮಾನ ಬದಲಾವಣೆ ಹಾಗೂ ಅದರ ಗಂಭೀರತೆಯ ಬಗ್ಗೆ ಸದನಲ್ಲಿ ಗಹನ ವಿಚಾರಗಳನ್ನು ಮಂಡಿಸಿದ್ದಾರೆ ಎಂದು ಸ್ಪೀಕರ್ ಹೇಳಿದರು.
ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಹನ್ನೊಂದು ಗಂಟೆ ಹನ್ನೊಂದು ನಿಮಿಷಗಳ ಕಾಲ ಚರ್ಚೆಯಾಗಿದ್ದು,. ಸಿಎಂ ಉತ್ತರವನ್ನೂ ಸಹ ಕೊಟ್ಟಿದ್ದಾರೆ, ಇನ್ನು ಪ್ರಮುಖವಾಗಿ ಎರಡು ದಿನ ಬರಗಾಲದ ಮೇಲೆ ಚರ್ಚೆಯಾಗಿದ್ದು, ಇದಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ಉತ್ತರ ಕೊಟ್ಟಿದ್ದಾರೆ ಎಂದು ವಿವರಿಸಿದರು.
ಶಾಸಕರು ಸರಿಯಾದ ಸಮಯಕ್ಕೆ ಬರುವುದಿಲ್ಲ ಎಂದಿತ್ತು. ಈ ಭಾರಿ ಅದನ್ನ ತಪ್ಪಿಸಿದ್ದೇವೆ. ಧರಣಿ, ಪ್ರತಿಭಟನೆ ಪ್ರಜಾಪ್ರಭುತ್ವದ ಸೌಂದರ್ಯ. ಪತ್ರಕರ್ತರು ಹಲವು ಸಲಹೆಗಳನ್ನು ಕೊಟ್ಟಿದ್ದರು. ಸಲಹೆಯಂತೆಯೇ ನಾವು ನಡೆದುಕೊಂಡಿದ್ದೇವೆ. ಎಲ್ಲರಿಗೆ ನಾವು ಋಣಿಯಾಗಿದ್ದೇವೆ. ಕೆಲವು ಸಣ್ಣ ಪುಟ್ಟ ಸಮಸ್ಯೆಗಳು ಆಗಿವೆ ಎಂದು ಹೇಳಿದರು.
ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದ್ದೇವೆ. ಪರಿಸರ ಪ್ರೇಮಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ಶಾಸಕರು ಇದರಲ್ಲಿ ಪಾಲ್ಗೊಂಡಿದ್ದರು. ಹಿಂದೆ ಕಲಾಪ ನೋಡಲು ವಿದ್ಯಾರ್ಥಿಗಳು ಕಾಯಬೇಕಿತ್ತು. ಈ ಬಾರಿ ಅವರಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಸ್ವರ್ಣ ಸಂಭ್ರಮ ಕಾರ್ಯಕ್ರಮವನ್ನೂ ಸಹ ನಡೆಸಿದ್ದೇವೆ. ಅಲ್ಲದೇ ಸದನದ ಸದಸ್ಯರನ್ನ ಗೌರವಿಸುವ ಕೆಲಸ ಮಾಡಿದ್ದೇವೆ ಎಂದು ಹೇಳಿದರು.
ಅಧಿವೇಶನಕ್ಕೆ ಸಾಂಸ್ಕೃತಿಕ ಮೆರಗು: ಸುವರ್ಣ ಸಂಭ್ರಮದ ಹಿನ್ನಲೆಯಲ್ಲಿ ಆರಂಭವಾದ ಅಧಿವೇಶನಕ್ಕೆ ಈ ಬಾರಿ ಸಾಂಸ್ಕತಿಕ ಮೆರಗು ದೊರಕಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುವರ್ಣ ಸೌಧದ ಮುಂದೆ ಶಾಸ್ತಿçÃಯ ಹಾಗೂ ನವ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇದರ ನಡುವೆಯೇ ಸುವರ್ಣ ಸೌಧಕ್ಕೆ ಶಾಶ್ವತ ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಲಾಗಿದೆ. ಡಿ.12 ರಂದು ಸುವರ್ಣ ಸೌಧದ ಮುಂದೆ ಕರ್ನಾಟಕ ಎಂದು ನಾಮಕರಣಗೊಂಡ 50 ವರ್ಷ ಸಂದ ಹಿನ್ನಲೆಯಲ್ಲಿ ಸುವರ್ಣ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಮಂಡಲದ ಮಾಜಿ ಸಭಾಧ್ಯಕ್ಷ ಹಾಗೂ ಸಭಾಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮೂಡಬಿದರೆಯ ಆಳ್ವ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಭಾನುವಾರ ಸೇರಿದಂತೆ ರಜಾ ದಿನ, ರಾಷ್ಟಿçÃಯ ಹಬ್ಬಗಳಂದು ಸುವರ್ಣ ಸೌಧ ವಿದ್ಯುತ್ ವಿದ್ಯುತ್ ದೀಪಾಲಂಕಾರದಿAದ ಕಂಗೊಳಿಸಲಿದೆ. ಸುವರ್ಣ ಸೌಧ ಉತ್ತರ ಭಾಗದಲ್ಲಿ ಶಾಸಕರ ಹೆಸರಿನಲ್ಲಿ ಗಿಡಗಳನ್ನು ನೆಡುವ ಮೂಲಕ ಪ್ರಕೃತಿ ಕಾಳಜಿಯನ್ನು ಸಹ ಈ ಬಾರಿ ಅಧಿವೇಶನದಲ್ಲಿ ತೋರಲಾಯಿತು.
ಸುವರ್ಣ ಸೌಧದಲ್ಲಿ ಚಿಣ್ಣರ ಕಲರವ:
ಈ ಬಾರಿಯ ಅಧಿವೇಶನವನ್ನು ರಾಜ್ಯ ಮೂಲೆ ಮೂಲೆಗಳಿಂದ ಆಗಮಿಸಿದ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ವೀಕ್ಷಿಸಿದರು. ಪ್ರಜಾಪ್ರಭುತ್ವ ಹಾಗೂ ಸಂಸದೀಯ ಅಂಶಗಳ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳಲು ಸುವರ್ಣ ಮ್ಕಳಿಗೆ ಅವಕಾಶ ಒದಗಿತು. ಇದರ ನಡುವೆ ಸಾರ್ವಜನಿಕರು ಅತಿ ಹೆಚ್ಚು ಸಂಖ್ಯೆಯಲ್ಲಿ ಕಲಾಪಗಳನ್ನು ವೀಕ್ಷಿಸಿದ ಇತಿಹಾಸ ಸೃಷ್ಠಿಯಾಯಿತು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:30 pm, Fri, 15 December 23