AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಧಿವೇಶನ: ಪರಿಷತ್​​ನಲ್ಲಿ ಪ್ರಶ್ನೆ ಕೇಳಿದ್ದ BJP ಎಂಎಲ್ಸಿಗೆ ಕೊಟ್ಟಿದ್ದು ಖಾಲಿ ಪೆನ್​ಡ್ರೈವ್​!

ಗೃಹಲಕ್ಷ್ಮೀ ಯೋಜನೆ ವಿಚಾರವಾಗಿ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿಪಕ್ಷಗಳು ಆಕ್ರೋಶ ವಕ್ತಪಡಿಸುತ್ತಿರುವ ನಡುವೆ ರಾಜ್ಯ ಸರ್ಕಾರ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಪರಿಷತ್​​ ಬಿಜೆಪಿ ಸದಸ್ಯರ ಪ್ರಶ್ನೆಗೆ ಉತ್ತರಿಸುವ ವೇಳೆ ಅಧಿಕಾರಿಗಳು ಬೇಜವಾಬ್ದಾರಿ ತೋರಿರೋದು ಆಡಳಿತ ಪಕ್ಷಕ್ಕೆ ಇರುಸುಮುರುಸು ಉಂಟುಮಾಡಿದೆ.

ಬೆಳಗಾವಿ ಅಧಿವೇಶನ: ಪರಿಷತ್​​ನಲ್ಲಿ ಪ್ರಶ್ನೆ ಕೇಳಿದ್ದ BJP ಎಂಎಲ್ಸಿಗೆ ಕೊಟ್ಟಿದ್ದು ಖಾಲಿ ಪೆನ್​ಡ್ರೈವ್​!
ವಿಧಾನ ಪರಿಷತ್​​
ಹರೀಶ್ ಜಿ.ಆರ್​.
| Edited By: |

Updated on:Dec 17, 2025 | 4:00 PM

Share

ಬೆಳಗಾವಿ, ಡಿಸೆಂಬರ್​​ 17: ಗೃಹಲಕ್ಷ್ಮೀ ಯೊಜನೆ ವಿಚಾರವಾಗಿ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ಮಾಹಿತಿ ತಪ್ಪು ಎಂಬ ಕಾರಣಕ್ಕೆ ವಿಪಕ್ಷಗಳು ಕೋಲಾಹಲವನ್ನೇ ಎಬ್ಬಿಸಿವೆ. ವಾಗ್ಯುದ್ಧ, ಸಭಾತ್ಯಾಗದಂತಹ ಘಟನೆಗಳು ನಡೆದು ಸಚಿವರು ವಿಷಾದ ವ್ಯಕ್ತಪಡಿಸಿದ ಪ್ರಸಂಗವೂ ನಡೆದಿದೆ. ಹೀಗಿದ್ದರೂ ಪ್ರತಿಪಕ್ಷಗಳ ಆಕ್ರೋಶ ಮಾತ್ರ ಕಡಿಮೆಯಾಗಿಲ್ಲ. ಈ ನಡುವೆ ರಾಜ್ಯ ಸರ್ಕಾರದ ಮತ್ತೊಂದು ಬೇಜವಾಬ್ದಾರಿ ಸದನದಲ್ಲಿ ಬಟಾ ಬಯಲಾಗಿದೆ. ಪರಿಷತ್​​ ಸದಸ್ಯರಿಗೆ ಉತ್ತರ ನೀಡುವ ವಿಚಾರದಲ್ಲೂ ಎಡವಟ್ಟು ನಡೆದಿರೋದೀಗ ಬಹಿರಂಗಗೊಂಡಿದೆ.

ಉತ್ತರ ಇದೆ ಎಂದು ನೀಡಿದ್ದು ಖಾಲಿ ಪೆನ್​ಡ್ರೈವ್​ !

ವಿಧಾನ ಪರಿಷತ್​​ನ ಬಿಜೆಪಿ ಸದಸ್ಯ ನವೀನ್​​ ಕಲಾಪದಲ್ಲಿ ಪ್ರಶ್ನೆಯೊಂದನ್ನು ಕೇಳಿದ್ದು, ಇದಕ್ಕೆ ಉತ್ತರ ಇದೆ ಎಂದು ನೀಡಿದ್ಧ ಪೆನ್​ಡ್ರೈವ್​ ಖಾಲಿಯಾಗಿತ್ತು ಎಂಬ ಆರೊಪ ಕೇಳಿಬಂದಿದೆ. ಪರಿಷತ್​ ಪ್ರಶ್ನೋತ್ತರ ಕಲಾಪದಲ್ಲಿ ನೀಡಿದ್ದ ಉತ್ತರದ ಬಗ್ಗೆಸದಸ್ಯ ನವೀನ್ ತೀವ್ರ​​ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ನೀಡಿದ್ದ ಪೆನ್​ಡ್ರೈವ್​​ನಲ್ಲಿ ಏನೂ ಇರಲಿಲ್ಲ ಎಂದು ಅವರು ಬೇಸರ ಹೊರಹಾಕಿದ ಪ್ರಸಂಗ ನಡೆದಿದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ, ಸದನದಲ್ಲಿ ವಿಷಾದ ವ್ಯಕ್ತಪಡಿಸಿದ ಲಕ್ಷ್ಮಿ ಹೆಬ್ಬಾಳ್ಕರ್

ಸರ್ಕಾರಕ್ಕೆ ಉಪಸಭಾಪತಿ ಸೂಚನೆ

ಸದಸ್ಯರ ಆರೋಪದ ಮೇರೆಗೆ ಈ ರೀತಿಯ ಲೋಪ ಆಗದಂತೆ ನೋಡಿಕೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ  ಸಭಾಪತಿ ಪೀಠ ಖಡಕ್​​ ಸೂಚನೆ ನೀಡಿದೆ. ಇಂತಹ ವಿಚಾರಗಳು ಮುಂದೆ ಮುರುಕಳಿಸಬಾರದು ಎಂದು ಸಭಾಪತಿ ಪೀಠದಲ್ಲಿದ್ದ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ತಾಕೀತು ಮಾಡಿದ್ದಾರೆ. ಅಲ್ಲದೆ, ನಿಮಗೆ ಸೂಕ್ತ ಉತ್ತರ ಪೆನ್​ಡ್ರೈವ್​ನಲ್ಲೇ ಸಿಗುತ್ತೆಂದು ಬಿಜೆಪಿ ಸದಸ್ಯ ನವೀನ್​ಗೆ ಉಪಸಭಾಪತಿ ಅವರು ಭರವಸೆ ನೀಡಿದ ಹಿನ್ನೆಲೆ ವಿಷಯ ಸುಖಾಂತ್ಯ ಕಂಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:56 pm, Wed, 17 December 25

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ