AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಮಹಿಳೆ ಹಲ್ಲೆ ಪ್ರಕರಣ; ಸಂತ್ರಸ್ತೆಗೆ ಎರಡು ಎಕರೆ ಜಮೀನು ಮಂಜೂರು‌

ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಗೆ ಎರಡು ಎಕರೆ ಜಮೀನು ಮಂಜೂರು‌ ಮಾಡಲಾಗಿದೆ. ಈ ಕುರಿತು ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಸಚಿವ ಬಿ.ನಾಗೇಂದ್ರ(B Nagendra) ಅವರ ನಿರ್ದೇಶನ ಹಿನ್ನೆಲೆ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ಜಮೀನಿಗೆ ಮಂಜೂರು ಮಾಡಲಾಗಿದೆ.

ಬೆಳಗಾವಿ ಮಹಿಳೆ ಹಲ್ಲೆ ಪ್ರಕರಣ; ಸಂತ್ರಸ್ತೆಗೆ ಎರಡು ಎಕರೆ ಜಮೀನು ಮಂಜೂರು‌
ಸಂತ್ರಸ್ತೆಗೆ 2 ಎಕರೆ ಜಮೀನು ನೀಡಿದ ಸರ್ಕಾರ
Sahadev Mane
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 16, 2023 | 7:43 PM

Share

ಬೆಳಗಾವಿ, ಡಿ.16: ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಗೆ ಎರಡು ಎಕರೆ ಜಮೀನು ಮಂಜೂರು‌ ಮಾಡಲಾಗಿದೆ. ಈ ಕುರಿತು ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಸಚಿವ ಬಿ.ನಾಗೇಂದ್ರ(B Nagendra) ಅವರ ನಿರ್ದೇಶನ ಹಿನ್ನೆಲೆ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು  2.03 ಎಕರೆ ಜಮೀನು ಮಂಜೂರಿಗೆ ಆದೇಶಿಸಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾಹಿತಿ ನೀಡಿದ್ದಾರೆ.

ನಿನ್ನೆಯಷ್ಟೇ ಸಂತ್ರಸ್ತ ಮಹಿಳೆಗೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದ ಸರ್ಕಾರ

ಇನ್ನು ಈ ಪ್ರಕರಣದ ಸಂಬಂಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ, ಅಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿಯೊಂದನ್ನು ರಚನೆ ಮಾಡಿದ್ದು, ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ, ಸಂತ್ರಸ್ತೆ ಮಹಿಳೆಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು. ಇದೀಗ ಮತ್ತೆ ಸರ್ಕಾರ 2 ಎಕರೆ ಜಮೀನು ನೀಡುವ ಮೂಲಕ ಸಂತ್ರಸ್ತೆಯ ಜೊತೆಗೆ ನಾವಿದ್ದೇವು ಎಂಬುದನ್ನು ಸರ್ಕಾರ ಸಾಭೀತುಪಡಿಸಿದೆ.

ಇದನ್ನೂ ಓದಿ:ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ನೀಡಿದ ಮಾನವ ಹಕ್ಕುಗಳ ಆಯೋಗ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sahadev Mane
Sahadev Mane
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ