AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ; ಸಂತ್ರಸ್ತೆ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ಸಚಿವ ಸತೀಶ್​ ಜಾರಕಿಹೊಳಿ

ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬಕ್ಕೆ ಬೆಳಗಾವಿ(Belagavi) ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಅವರು ಸಿಎಂ ಸಿದ್ದರಾಮಯ್ಯ ನಿಧಿಯಿಂದ 5 ಲಕ್ಷ ರೂ. ಪರಿಹಾರದ ಚೆಕ್​ ವಿತರಿಸಿದ್ದಾರೆ.

ಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ; ಸಂತ್ರಸ್ತೆ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ಸಚಿವ ಸತೀಶ್​ ಜಾರಕಿಹೊಳಿ
ಸಚಿವ ಸತೀಶ್​ ಜಾರಕಿಹೊಳಿ
ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 19, 2023 | 4:47 PM

Share

ಬೆಳಗಾವಿ, ಡಿ.19: ನಗರದ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬಕ್ಕೆ ಬೆಳಗಾವಿ(Belagavi) ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಅವರು ಸಿಎಂ ಸಿದ್ದರಾಮಯ್ಯ ನಿಧಿಯಿಂದ 5 ಲಕ್ಷ ರೂ. ಪರಿಹಾರದ ಚೆಕ್​ ವಿತರಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ ಐದು ಲಕ್ಷದ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 2 ಎಕರೆ ಜಮೀನು ಮಂಜೂರಾಗಿದೆ ಎಂದು ಹೇಳಿದರು.

ಇನ್ನು ಸಿಐಡಿ ತನಿಖೆಗೂ ಮುನ್ನವೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೂ ಪ್ರಕರಣವನ್ನು ಸರ್ಕಾರ ತನಿಖೆಯನ್ನು ಸಿಐಡಿಗೆ ಒಪ್ಪಿಸಿದೆ. ತನಿಖೆ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಸಿಐಡಿಗೆ ಕೊಟ್ಟಿದ್ದಾರೆ.ಇಂತಹದೊಂದು ಘಟನೆ ಆಗಬಾರದಿತ್ತು, ಆದರೆ ನಮ್ಮ ಭಾಗದಲ್ಲಿ ಆಗಿದೆ. ಮುಂದೆ ಇಂತಹ ಘಟನೆ ಆಗದಂತೆ ಎಲ್ಲರೂ ಪ್ರಯತ್ನ ಮಾಡೋಣ ಎಂದುಸ ಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ:ಬೆಳಗಾವಿ ರೀತಿ ಹಾವೇರಿಯಲ್ಲೂ ಹೀನ ಕೃತ್ಯ: ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ

ಘಟನೆ ವಿವರ

ವಂಟಮೂರಿ ಗ್ರಾಮದಲ್ಲಿ ಪ್ರೀತಿಸುತ್ತಿದ್ದ ಜೋಡಿಯೊಂದು ಓಡಿ ಹೋಗಿತ್ತು. ಇದರಿಂದ ಆಕ್ರೋಶಗೊಂಡಿದ್ದ ಯುವತಿಯ ಕುಟುಂಬುಸ್ಥರು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ಏಳು ಆರೋಪಿಗಳನ್ನು ಕಾಕತಿ ಪೊಲೀಸರು ಬಂಧಿಸಿದ್ದರು. ಈ ನಡುವೆ ಪ್ರಕರಣದ ತನಿಖೆಯನ್ನುಸಿಐಡಿಗೆ ಒಪ್ಪಿಸುವಂತೆ ಒತ್ತಾಯಗಳು ಕೇಳಿಬಂದ ಹಿನ್ನಲೆ ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ರಾಜ್ಯ ಸರ್ಕಾರವು ಡಿ.17 ರಂದು ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಆದೇಶಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು