AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ; ಸಂತ್ರಸ್ತೆ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ಸಚಿವ ಸತೀಶ್​ ಜಾರಕಿಹೊಳಿ

ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬಕ್ಕೆ ಬೆಳಗಾವಿ(Belagavi) ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಅವರು ಸಿಎಂ ಸಿದ್ದರಾಮಯ್ಯ ನಿಧಿಯಿಂದ 5 ಲಕ್ಷ ರೂ. ಪರಿಹಾರದ ಚೆಕ್​ ವಿತರಿಸಿದ್ದಾರೆ.

ಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ; ಸಂತ್ರಸ್ತೆ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ಸಚಿವ ಸತೀಶ್​ ಜಾರಕಿಹೊಳಿ
ಸಚಿವ ಸತೀಶ್​ ಜಾರಕಿಹೊಳಿ
Sahadev Mane
| Edited By: |

Updated on: Dec 19, 2023 | 4:47 PM

Share

ಬೆಳಗಾವಿ, ಡಿ.19: ನಗರದ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬಕ್ಕೆ ಬೆಳಗಾವಿ(Belagavi) ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಅವರು ಸಿಎಂ ಸಿದ್ದರಾಮಯ್ಯ ನಿಧಿಯಿಂದ 5 ಲಕ್ಷ ರೂ. ಪರಿಹಾರದ ಚೆಕ್​ ವಿತರಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ ಐದು ಲಕ್ಷದ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 2 ಎಕರೆ ಜಮೀನು ಮಂಜೂರಾಗಿದೆ ಎಂದು ಹೇಳಿದರು.

ಇನ್ನು ಸಿಐಡಿ ತನಿಖೆಗೂ ಮುನ್ನವೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೂ ಪ್ರಕರಣವನ್ನು ಸರ್ಕಾರ ತನಿಖೆಯನ್ನು ಸಿಐಡಿಗೆ ಒಪ್ಪಿಸಿದೆ. ತನಿಖೆ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಸಿಐಡಿಗೆ ಕೊಟ್ಟಿದ್ದಾರೆ.ಇಂತಹದೊಂದು ಘಟನೆ ಆಗಬಾರದಿತ್ತು, ಆದರೆ ನಮ್ಮ ಭಾಗದಲ್ಲಿ ಆಗಿದೆ. ಮುಂದೆ ಇಂತಹ ಘಟನೆ ಆಗದಂತೆ ಎಲ್ಲರೂ ಪ್ರಯತ್ನ ಮಾಡೋಣ ಎಂದುಸ ಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ:ಬೆಳಗಾವಿ ರೀತಿ ಹಾವೇರಿಯಲ್ಲೂ ಹೀನ ಕೃತ್ಯ: ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ

ಘಟನೆ ವಿವರ

ವಂಟಮೂರಿ ಗ್ರಾಮದಲ್ಲಿ ಪ್ರೀತಿಸುತ್ತಿದ್ದ ಜೋಡಿಯೊಂದು ಓಡಿ ಹೋಗಿತ್ತು. ಇದರಿಂದ ಆಕ್ರೋಶಗೊಂಡಿದ್ದ ಯುವತಿಯ ಕುಟುಂಬುಸ್ಥರು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ಏಳು ಆರೋಪಿಗಳನ್ನು ಕಾಕತಿ ಪೊಲೀಸರು ಬಂಧಿಸಿದ್ದರು. ಈ ನಡುವೆ ಪ್ರಕರಣದ ತನಿಖೆಯನ್ನುಸಿಐಡಿಗೆ ಒಪ್ಪಿಸುವಂತೆ ಒತ್ತಾಯಗಳು ಕೇಳಿಬಂದ ಹಿನ್ನಲೆ ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ರಾಜ್ಯ ಸರ್ಕಾರವು ಡಿ.17 ರಂದು ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಆದೇಶಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!