AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ, ಘಟನೆ ತಡೆದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ಸಾರ್ವಜನಿಕರಿಗೆ ಸನ್ಮಾನ

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿದ್ದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ.

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ, ಘಟನೆ ತಡೆದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ಸಾರ್ವಜನಿಕರಿಗೆ ಸನ್ಮಾನ
ಬೆಳಗಾವಿ ಪೊಲೀಸ್​
TV9 Web
| Edited By: |

Updated on: Dec 30, 2023 | 10:07 AM

Share

ಬೆಳಗಾವಿ, ಡಿಸೆಂಬರ್​​ 30: ಬೆಳಗಾವಿ (Belagavi) ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿದ್ದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು (Belagavi City Police) ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ. ನಗರದ ಪೊಲೀಸ್ ಮೈದಾನದಲ್ಲಿ ಜನರಲ್ ಪೊಲೀಸ್ ಪರೇಡ್ ನಡೆಯಿತು.

ಬಳಿಕ ವಂಟಮೂರಿ ಗ್ರಾಮದ ನಿವಾಸಿ ಜಹಾಂಗೀರ್ ತಹಶಿಲ್ದಾರ, ವಾಸೀಂಮ್ ಮಕಾನದಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳಿಕಾರ್ ಅವರಿಗೆ ಸನ್ಮಾನಿಸಲಾಯಿತು. ಈ ವೇಳೆ ಕೋರ್ಟ್ ನೀಡಿದ್ದ ಪ್ರಶಂಸನೀಯ ಪತ್ರವನ್ನು ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅವರು ಜಹಾಂಗೀರ್ ಎಂಬುವವರಿಗೆ ನೀಡಿ ಗೌರವಿಸಿದರು. ಮೂವರಿಗೆ ತಲಾ ಐದು ಸಾವಿರ ರೂಪಾಯಿ ನಗದು ಬಹುಮಾನ ವಿತರಿಸಲಾಯಿತು.

ಇನ್ನು ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿ ಘಟನೆ ತಡೆದ ಕಾಕತಿ ಠಾಣೆಯ ಪಿಎಸ್ಐ ಮಂಜುನಾಥ್ ಹುಲಕುಂದ ಸೇರಿ ಆರು ಜನ ಸಿಬ್ಬಂದಿಗೂ ಸನ್ಮಾನಿಸಲಾಯಿತು.

ಇದನ್ನೂ ಓದಿ: ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಯ ಫೋಟೊ, ಸಂದರ್ಶನ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ದೇಶನ

ವಂಟಮೂರಿ ಗ್ರಾಮದಲ್ಲಿ ನಡೆದಿದ್ದ ಘಟನೆ ತಡೆದವರಿಗೆ ಸನ್ಮಾನ ಮಾಡಿದ್ದೇವೆ. ವಂಟಮೂರಿ ಗ್ರಾಮದ ಮೂವರು ಸಾರ್ವಜನಿಕರಿಗೆ ಸನ್ಮಾನ ಮಾಡಿದ್ದೇವೆ. ಕೋರ್ಟ್ ನೀಡಿದ್ದ ಪ್ರಶಂಸನೀಯ ಪತ್ರ ಕೂಡ ನೀಡಿ ಗೌರವಿಸಿದ್ದೇವೆ. ಕಾಕತಿ ಠಾಣೆ ಪಿಎಸ್ಐ ಸೇರಿ ಆರು ಜನರಿಗೆ ಸನ್ಮಾನ ಮಾಡಿದ್ದೇವೆ. ಪಿಎಸ್ಐಗೆ ಐದು ಸಾವಿರ ನಗದು, ಉಳಿದು ಐದು ಜನ ಸಿಬ್ಬಂದಿಗೆ ನಾಲ್ಕು ಸಾವಿರ ಬಹುಮಾನ ನೀಡಿದ್ದೇವೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಹೇಳಿದರು.

ಮಾಹಿತಿ ನೀಡಿದ್ದ ಮೂರು ಜನ ಸಾರ್ವಜನಿಕರಿಗೆ ಎನೂ ಆಗದಂತೆ ರಕ್ಷಣೆ ನೀಡುತ್ತೇವೆ‌. ಘಟನೆ ನಡೆದಾಗ ಭಯ ಪಡದೇ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿ ಅಂತಾ ಕಮಿಷನರ್ ಮನವಿ ಮಾಡಿದರು.

ಏನಿದು ಪ್ರಕರಣ

ಇದೇ ತಿಂಗಳ 11 ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಓರ್ವ ಮಹಿಳೆಯನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿತ್ತು. ಬಳಿಕ ಘಟನೆಗೆ ಸಂಬಂಧಪಟ್ಟಂತೆ 7 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಪ್ರಿಯತಮೆ ಜೊತೆ ಪ್ರಿಯತಮ ಓಡಿ ಹೋಗಿದ್ದರಿಂದ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು, ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯ ವರ್ತನೆ ತೋರಿದ್ದರು. ರಾಜ್ಯವೇ ತಲೆತಗ್ಗಿಸುವಂತ ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ