AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಇಎಸ್ ಕರಾಳ ದಿನ ಮೆರವಣಿಗೆ ವಿಫಲ: ಕನ್ನಡದ ಪರ ದೃಢವಾಗಿ ನಿಂತ ಬೆಳಗಾವಿಯ ಯುವಸಮೂಹ

ಬೆಳಗಾವಿ ನಗರದ ಯುವಸಮೂಹವಂತೂ ಕಾರ್ಯಕ್ರಮದಿಂದ ಸಂಪೂರ್ಣ ದೂರ ಸರಿದಿದ್ದು ಎದ್ದು ಕಂಡಿತ್ತು

ಎಂಇಎಸ್ ಕರಾಳ ದಿನ ಮೆರವಣಿಗೆ ವಿಫಲ: ಕನ್ನಡದ ಪರ ದೃಢವಾಗಿ ನಿಂತ ಬೆಳಗಾವಿಯ ಯುವಸಮೂಹ
ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಿದ್ದ ಕರಾಳ ದಿನಾಚರಣೆಯಲ್ಲಿ ಕೇವಲ ಬೆರಳೆಣಿಕೆಯಷ್ಟು ಜನರು ಪಾಲ್ಗೊಂಡಿದ್ದರು.
TV9 Web
| Edited By: |

Updated on: Nov 01, 2022 | 12:43 PM

Share

ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿಯು ಪ್ರತಿವರ್ಷದಂತೆ ಈ ವರ್ಷವೂ ನವೆಂಬರ್ 1ರಂದು ಕರಾಳ ದಿನಾಚರಣೆ ಆಯೋಜಿಸಿತ್ತು. ಆದರೆ ಹೆಚ್ಚು ಜನರು ಸೇರಲಿಲ್ಲ. ಹೀಗಾಗಿ ಎಂಇಎಸ್ ಕಾರ್ಯಕ್ರಮ ಸಂಪೂರ್ಣ ವಿಫಲವಾಯಿತು. ಕರಾಳದಿನದ ಮೆರವಣಿಗೆಯಲ್ಲಿಯೂ ಹೆಚ್ಚು ಜನರು ಪಾಲ್ಗೊಳ್ಳಲಿಲ್ಲ. ನಗರದ ಯುವಸಮೂಹವಂತೂ ಕಾರ್ಯಕ್ರಮದಿಂದ ಸಂಪೂರ್ಣ ದೂರ ಸರಿದಿದ್ದು ಎದ್ದು ಕಂಡಿತ್ತು. ಕರಾಳ ದಿನಾಚರಣೆಗೆ ಮಹಾರಾಷ್ಟ್ರದ ಶಿವಸೇನೆ ನಾಯಕರನ್ನು ಎಂಇಎಸ್ ಆಹ್ವಾನಿಸಿತ್ತು. ಆದರೆ ಮಹಾರಾಷ್ಟ್ರ ನಾಯಕರನ್ನು ಕರ್ನಾಟಕದ ಗಡಿ ಪ್ರವೇಶಿಸಲು ಪೊಲೀಸರು ಅವಕಾಶ ನೀಡಲಿಲ್ಲ. ಬಹುತೇಕರನ್ನು ಗಡಿಯಲ್ಲಿಯೇ ತಡೆದು ವಾಪಸ್ ಕಳಿಸಲಾಯಿತು.

ಶಿವಸೇನೆಯ ಕೊಲ್ಲಾಪುರ ಘಟಕದ ಅಧ್ಯಕ್ಷ ವಿಜಯ ದೇವಣೆ ಬೆಳಗಾವಿ ಪ್ರವೇಶಿಸಲು ಬಹುಕಾಲ ಕಾದು ನಿಂತರು. ಕುಗನೊಳ್ಳಿ ಚೆಕ್ ಪೋಸ್ಟ್ ಮೂಲಕ ಕರ್ನಾಟಕ ಪ್ರವೇಶಿಸಿದ್ದ ಅವರು, ಶಿನೋಳ್ಳಿ ಮಾರ್ಗವಾಗಿ ಬೆಳಗಾವಿ ಪ್ರವೇಶಿಸಲು ಯತ್ನಿಸಿದರು. ಶಿನೋಳ್ಳಿ ಚೆಕ್ ಪೋಸ್ಟ್ ಬಳಿಯೂ ಪೊಲೀಸರು ಬಂದೋಬಸ್ತ್ ಬಿಗಿ ಮಾಡಿದ್ದರು.

ಗಡಿ ವಿವಾದದ ಅಂತಿಮ ವಿಚಾರಣೆ

ನವೆಂಬರ್ 23ರಂದು ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಅಂತಿಮ ವಿಚಾರಣೆ ನಡೆಯಲಿದೆ. ಇದೇ ವಿಷಯವನ್ನು ಕರಪತ್ರಗಳಲ್ಲಿ ಪ್ರಸ್ತಾಪಿಸಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಯು ಸಾವಿರಾರು ಸಂಖ್ಯೆಯಲ್ಲಿ ಕರಾಳ ದಿನಾಚರಣೆಯಲ್ಲಿ ಪಾಲ್ಗೊಳ್ಳಬೇಕೆಂದು ಮರಾಠಿ ಭಾಷಿಕರಿಗೆ ಕರೆ ನೀಡಿತ್ತು. ಸಾಮಾಜಿಕ ಜಾಲತಾಣಗಳಲ್ಲಿಯೂ ಎಂಇಎಸ್ ಪರ ಇರುವವರು ಈ ಅಂಶಗಳನ್ನೇ ಪ್ರಸ್ತಾಪಿಸಿ ಪೋಸ್ಟ್​ಗಳನ್ನು ಹಾಕಿಕೊಂಡಿದ್ದರು. ಕರಾಳ ದಿನಾಚರಣೆಗೆ ಅನುಮತಿ ನೀಡದಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿದ್ದವು. ಇದನ್ನು ಲೆಕ್ಕಿಸದ ಎಂಇಎಸ್ ಸಂಭಾಜಿ ಉದ್ಯಾನದಿಂದ ಮರಾಠಾ ಮಂದಿರದವರೆಗೆ ಜಾಥಾ ನಡೆಸಲು ಮುಂದಾಗಿತ್ತು. ಆದರೆ ನಗರದ ಮರಾಠಿ ಭಾಷಿಕರು ಸೌಹಾರ್ದಕ್ಕೆ ಒತ್ತುಕೊಟ್ಟ ಹಿನ್ನೆಲೆಯಲ್ಲಿ ಈ ಪ್ರಯತ್ನವು ವಿಫಲವಾಯಿತು.

ಬಿಗಿ ಭದ್ರತೆ

ಬೆಳಗಾವಿಯಲ್ಲಿ ಕರಾಳ ದಿನಾಚರಣೆಗೆ ಎಂಇಎಸ್​ ಸಿದ್ಧತೆ ನಡೆಸಿದ್ದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಮಹಾರಾಷ್ಟ್ರದ ಗಡಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಹಾಕಿದ್ದರು. ಬೆಳಗಾವಿ ನಗರದಲ್ಲಿ ಬೆಳಗಾವಿ ಪೊಲೀಸ್ ಆಯುಕ್ತ ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿತ್ತು. ಇದಕ್ಕಾಗಿ 3 ಡಿಸಿಪಿ, 12 ಎಸಿಪಿ, 52 ಇನ್ಸ್​​ಪೆಕ್ಟರ್​, 2,500 ಕಾನ್ಸ್​ಟೇಬಲ್, 9 ಸಿಎಆರ್​ ತುಕಡಿ, 10 ಕೆಎಸ್​​ಆರ್​ಪಿ ತುಕಡಿ ನಿಯೋಜಿಸಲಾಗಿತ್ತು. 35 ವಿಡಿಯೊ ಕ್ಯಾಮೆರಾ, 8 ಡ್ರೋನ್, 300 ಸಿಸಿಕ್ಯಾಮೆರಾಗಳ ಕಣ್ಗಾವಲು ಇತ್ತು.

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ