AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಮಹಿಳೆಯೊಂದಿಗೆ ಇರುವಾಗಲೇ ಸಿಕ್ಕಬಿದ್ದ ಸ್ವಾಮೀಜಿ, ರಾತ್ರೋರಾತ್ರಿ ಮಠದಿಂದ ಓಡಿಸಿದ ಗ್ರಾಮಸ್ಥರು

ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯಿಂದ ಅನಾಚಾರ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಮಠಕ್ಕೆ ನುಗ್ಗಿ ಕೆಲ ಯುವಕರು ಸ್ವಾಮೀಜಿ ಮೇಲೆ ಹಲ್ಲೆ ಮಾಡಿ ಮಹಿಳೆ ಮತ್ತು ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸುವ ಮೂಲಕ ನೈತಿಕ ಪೊಲೀಸಗಿರಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದಲ್ಲಿ ಘಟನೆ ನಡೆದಿದೆ.

ಬೆಳಗಾವಿ: ಮಹಿಳೆಯೊಂದಿಗೆ ಇರುವಾಗಲೇ ಸಿಕ್ಕಬಿದ್ದ ಸ್ವಾಮೀಜಿ, ರಾತ್ರೋರಾತ್ರಿ ಮಠದಿಂದ ಓಡಿಸಿದ ಗ್ರಾಮಸ್ಥರು
ಸ್ವಾಮೀಜಿಯಿಂದ ಅನಾಚಾರ ಆರೋಪ
Sahadev Mane
| Edited By: |

Updated on:Jun 23, 2025 | 11:40 AM

Share

ಬೆಳಗಾವಿ, ಜೂನ್​ 23: ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯಿಂದ (Swamiji) ಅನಾಚಾರ ಆರೋಪ ಕೇಳಿಬಂದಿದೆ. ಅಡವಿಸಿದ್ದರಾಮಶ್ರೀ ಸ್ವಾಮೀಜಿ ಮಹಿಳೆಯೊಂದಿಗೆ (woman) ಇರುವುದನ್ನು ಕಂಡ ಗ್ರಾಮಸ್ಥರು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿಯನ್ನು ತರಾಟೆ ತೆಗೆದುಕೊಂಡರು. ಅಷ್ಟೇ ಅಲ್ಲದೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಕೆಲ ಯುವಕರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಮಹಿಳೆಯ ಮಗಳ ಬಟ್ಟೆ ಹರಿದು ಎಳೆದಾಡಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಡೆದದ್ದೇನು?

ಬಾಗಲಕೋಟೆ ಮೂಲದ ಮಹಿಳೆ ಮತ್ತು ಮಗಳು ಮಠಕ್ಕೆ ಬಂದಿದ್ದು, ರಾತ್ರಿ ಮಠದಲ್ಲೇ ತಂಗಿದ್ದಾರೆ. ಮಹಿಳೆಯೊಂದಿಗೆ ಸ್ವಾಮೀಜಿ ಇದ್ದಾರೆಂದು ಯುವಕರು ಮಠಕ್ಕೆ ನುಗಿದ್ದು, ಈ ವೇಳೆ ಸ್ವಾಮೀಜಿ, ‌ಮಹಿಳೆ ಮತ್ತು ಬಾಲಕಿ ಒಂದೇ ರೂಮ್​ನಲ್ಲಿರುವುದು ಕಂಡುಬಂದಿದೆ.

ಇದನ್ನೂ ಓದಿ: 30 ವರ್ಷ ಹಿಂದೆ 500 ರೂ ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿಗೆ ನಿವೃತ್ತಿಯಾದ 10 ವರ್ಷದ ಬಳಿಕ ಜೈಲು!

ಇದನ್ನೂ ಓದಿ
Image
ಬೆಳಗಾವಿ: ಲೋಕೇಶ್ವರ ಸ್ವಾಮೀಜಿ ಮೇಲೆ ಅತ್ಯಾಚಾರ ಕೇಸ್ ಬೆನ್ನಲ್ಲೇ ಮಠ ಧ್ವಂಸ
Image
ಜಲಪಾತಗಳಿಗೆ ಜೀವ ಕಳೆ: ಪ್ರವಾಸಿಗರನ್ನ ಸೆಳೆಯುತ್ತಿದೆ ಮಾಗೋಡು ಫಾಲ್ಸ್
Image
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
Image
ಧುಮ್ಮಿಕ್ಕಿ ಹರಿಯುತ್ತಿದೆ ಧನುಷ್ಕೋಟಿ ಜಲಪಾತ: ವಿಡಿಯೋ ನೋಡಿ

ಇದೇ ವೇಳೆ ಯುವಕರು ಸ್ವಾಮೀಜಿಯನ್ನು ತಳ್ಳಿ ಮಹಿಳೆ, ಅಪ್ರಾಪ್ತ ಮಗಳ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಬಾಲಕಿಯ ಬಟ್ಟೆ ಹರಿದು ಎಳೆದಾಡಿದ್ದಾರೆ. ರಕ್ಷಣೆಗೆ ನಿಂತ ಸ್ವಾಮೀಜಿಗೆ ಯುವಕರು ಕಪಾಳಮೋಕ್ಷ ಮಾಡಿದ್ದಾರೆ.

ಇನ್ನು ಸ್ಥಳಕ್ಕೆ ಭೇಟಿ ನೀಡಿದ ಮೂಡಲಗಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಮಹಿಳೆಗೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ. ಇತ್ತ ಗ್ರಾಮಸ್ಥರು ರಾತ್ರಿಯೇ ಅಡವಿಸಿದ್ದರಾಮ ಸ್ವಾಮೀಜಿಯನ್ನ ಹೊರಹಾಕಿದ್ದಾರೆ. ಸದ್ಯ ಬೆಳಗಾವಿ ಜಿಲ್ಲೆಯ ಗೋಕಾಕ್​ನಲ್ಲಿದ್ದಾರೆ.

ಅಪ್ರಾಪ್ತ ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ: ಸ್ವಯಂಘೋಷಿತ ಸ್ವಾಮಿ ಅರೆಸ್ಟ್

ಇತ್ತೀಚೆಗೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಕಳಿ ಗ್ರಾಮದಲ್ಲಿ ರಾಮ ಮಂದಿರದ ಮಠ ಕಟ್ಟಿಕೊಂಡು ವಾಸವಿದ್ದ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಅಪ್ರಾಪ್ತ ಬಾಲಕಿಯನ್ನು ಕಿಡ್ನ್ಯಾಪ್​ ಮಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವಂತಹ ಘಟನೆ ನಡೆದಿತ್ತು. ಬಳಿಕ ಪೊಲೀಸರು ಸ್ವಾಮೀಜಿಯನ್ನು ಬಂಧಿಸಿದ್ದರು.

ಇದನ್ನೂ ಓದಿ: ಬೆಳಗಾವಿ: ಕಾರ್​ ಮೇಲೆ ಉರುಳಿ ಬಿದ್ದ ಭಾರೀ ಗಾತ್ರದ ಮರ, ದೂಷಣೆ ಧಾರಾಕಾರವಾಗಿ ಸುರಿದ ಮಳೆಗೆ

ಮೇ 13ರಂದು ಸೋದರ ಮಾವನ ಮನೆಗೆ ಹೋಗಿ ಬರುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ ನಂಬಿಸಿ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಆಕೆಯನ್ನು ರಾಯಚೂರಿನ ಲಾಡ್ಜ್‌ ಕರೆದುಕೊಂಡು ಹೋಗಿ ಎರಡು ದಿನ ಜೊತೆಗೆಯಲ್ಲಿ ಇರಿಸಿಕೊಂಡು ಅತ್ಯಾಚಾರ ಎಸಗಿದ್ದರು. ಬಳಿಕ ಬಾಗಲಕೋಟೆಗೆ ಕರೆದುಕೊಂಡು ಬಂದು ಅಲ್ಲಿಯೂ ದೌರ್ಜನ್ಯ ಎಸಗಿದ್ದರು. ಇಷ್ಟೇಲ್ಲಾ ಆದ ಮೇಲೆ ಬಾಲಕಿಗೆ ಧಮ್ಕಿ ಹಾಕಿ, ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದರು. ಈ ಬಗ್ಗೆ ಬಾಲಕಿ ಫೋಷಕರು ದೂರು ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:07 am, Mon, 23 June 25

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು