AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಗಾಂಜಾ, ಸಿಗರೇಟ್, ಬಿಯರ್: ಇಸ್ಪೀಟ್ ಆಡುತ್ತಿರುವ ಕೈದಿಗಳ ವಿಡಿಯೋ ವೈರಲ್

ಬೆಳಗಾವಿಯ ಹಿಂಡಲಗಾ ಜೈಲಿನ ಕರಾಳಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ, ಜೈಲಿನ ಹೈಫೈ ಜೀವನ ಅನಾವರಣಗೊಂಡಿದ್ದು, ಕೈದಿಗಳು ಹಣ ಇಟ್ಟು ಇಸ್ಪೀಟ್ ಆಡುತ್ತಿರುವ ವಿಡಿಯೋ ವೈರಲ್ ಆಗಿದೆ. ಜೈಲಿಗೆ ಗಾಂಜಾ, ಸಿಗರೇಟ್, ಬಿಯರ್ ಪೂರೈಕೆಯಾಗುತ್ತಿರುವುದು ತಿಳಿದುಬಂದಿದೆ.

Sahadev Mane
| Edited By: |

Updated on: Dec 09, 2024 | 9:48 AM

Share

ಬೆಳಗಾವಿ, ಡಿಸೆಂಬರ್ 9: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ, ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಎಣ್ಣೆ ಪಾರ್ಟಿ ವಿಡಿಯೋ ವೈರಲ್ ಪ್ರಕರಣದ ಬೆನ್ನಲ್ಲೇ ಇದೀಗ ಬೆಳಗಾವಿಯ ಹಿಂಡಲಗಾ ಜೈಲಿನ ಕರಾಳ ಮುಖ ಅನಾವರಣಗೊಂಡಿದೆ. ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹೊತ್ತಿನಲ್ಲೇ ಹಿಂಡಲಗಾ ಜೈಲಿನ ಕರ್ಮಕಾಂಡ ಬಯಲಾಗಿದೆ.

ಹಿಂಡಲಗಾ ಜೈಲಿನಲ್ಲಿ ಕೈದಿಗಳು ಬಿಂದಾಸ್​ ಆಗಿ ಮೊಬೈಲ್​ ಬಳಸುತ್ತಿರುವುದು, ಗಾಂಜಾ ಸೇವಿಸುತ್ತಿರುವುದು, ಸಿಗರೇಟ್ ಸೇದುವುದು ಬೆಳಕಿಗೆ ಬಂದಿದೆ. ಜೈಲಿಗೆ ಬಿಯರ್ ಸೇರಿದಂತೆ ಎಲ್ಲವೂ ಹೊರಗಿನಿಂದ ಪೂರೈಕೆಯಾಗುತ್ತಿರುವುದು ಬಹಿರಂಗಗೊಂಡಿದೆ.

ಜೈಲಿನ ಸರ್ಕಲ್ ನಂಬರ್ 2ರ ಎರಡನೇ ಬ್ಯಾರಕ್​ನಲ್ಲಿ ಕೈದಿಗಳು ಐಷಾರಾಮಿ ಜೀವನ ನಡೆಸುತ್ತಿದ್ದು, ರಾಜಾರೋಷವಾಗಿ ಹಣವಿಟ್ಟು ಇಸ್ಪೀಟ್ ಆಡುತ್ತಿರುವ ವಿಡಿಯೋ ವೈರಲ್ ಆಗಿದೆ. ಇಲ್ಲಿ ಹಣ ಕೊಟ್ಟರೆ ಕೈದಿಗಳಿಗೆ 20 ಸಾವಿರ ರೂ. ಬೆಲೆಯ ಆಂಡ್ರಾಯ್ಡ್ ಮೊಬೈಲ್ ಕೂಡ ಸಿಗುತ್ತದಂತೆ! ಶಿಕ್ಷೆ ಅನುಭವಿಸುತ್ತಿರುವ ಕೈದಿಯಿಂದಲೇ ಐಷಾರಾಮಿ ಜೀವನ ಅನಾವರಣಗೊಂಡಿದೆ. ಹಣ ಕೊಟ್ಟರೆ ಜೈಲು ಅಧೀಕ್ಷಕ ಕೃಷ್ಣಮೂರ್ತಿ ಎಲ್ಲಾ ವ್ಯವಸ್ಥೆ ಮಾಡ್ತಾರೆ ಎಂಬ ಆರೋಪ ಕೇಳಿಬಂದಿದೆ.

ಹಣ ಇಟ್ಟು ಇಸ್ಪೀಟ್ ಆಡುತ್ತಿರುವ ಕೈದಿಗಳು!

ನೆಲಮಂಗಲ ಮೂಲದ ಮುಬಾರಕ್​ ಎಂಬ ಕೈದಿ ಇಸ್ಪೀಟ್ ಆಡುವ ವಿಡಿಯೋ ಮಾಡಿದ್ದಾನೆ ಎನ್ನಲಾಗಿದೆ. ಮೊಬೈಲ್ ಇಟ್ಟುಕೊಂಡು ಇಸ್ಪೀಟ್ ಆಡುತ್ತಿರುವ ವಿಡಿಯೋ ಈಗ ವೈರಲ್​ ಆಗುತ್ತಿದೆ. ಬೆಳಗಾವಿಯ ಕೈದಿ ಸುರೇಶ್, ಶಾಹಿದ್ ಖುರೇಶಿ, ಆನಂದ್ ನಾಯಕ್ ಸೇರಿ ಹಲವರು ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಎಣ್ಣೆ ಪಾರ್ಟಿ: ವಿಡಿಯೋ ವೈರಲ್

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿನ ಕರ್ಮಕಾಂಡವನ್ನು ಇತ್ತೀಚೆಗಷ್ಟೇ ‘ಟಿವಿ9’ ಬಟಾಬಯಲು ಮಾಡಿತ್ತು. ಅದಾದ ಬೆನ್ನಲ್ಲೇ, ಜೈಲಿನಲ್ಲಿ ಕೈದಿಗಳು ಮದ್ಯ ಸೇವಿಸುತ್ತಿರುವ ಎರಡು ತಿಂಗಳ ಹಿಂದಿನ ವಿಡಿಯೋ ಶನಿವಾರ ವೈರಲ್ ಆಗಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​