AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಊಟದಲ್ಲಿ ಹುಳು: ವಿದ್ಯಾರ್ಥಿಗಳಿಂದ ದೂರು

ಮೂರು ವರ್ಷದ ಹಿಂದೆ ಎರಡು ಕೋಟಿ ವೆಚ್ಚದಲ್ಲಿ ನಿರ್ಮಿಸಿಲಾದ ವಸತಿ ನಿಲಯವು ಸೋರಿಕೆಯಾಗುತ್ತಿದ್ದು, ಕಟ್ಟಡ ಉದ್ಘಾಟನೆಯಾಗಿ ಕೇವಲ ಒಂದೂವರೆ ವರ್ಷದಲ್ಲಿ ಈ ಸ್ಥಿತಿ ಎದುರಾಗಿದೆ. ನೆಲದ ಟೈಲ್ಸ್​ಗಳು ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಗ್ರಂಥಾಲಯವೂ ಸೋರಿಕೆಯಾಗುತ್ತಿದೆ.

ಬೆಳಗಾವಿಯ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಊಟದಲ್ಲಿ ಹುಳು: ವಿದ್ಯಾರ್ಥಿಗಳಿಂದ ದೂರು
ಆಹಾರದಲ್ಲಿ ಹುಳು
Sahadev Mane
| Updated By: Ganapathi Sharma|

Updated on: Aug 25, 2023 | 5:10 PM

Share

ಬಾಗಲಕೋಟೆ, ಆಗಸ್ಟ್ 25: ಬೆಳಗಾವಿಯ (Belagavi) ಬೈಲಹೊಂಗಲ ತಾಲೂಕಿನ ಸರ್ಕಾರಿ ವಸತಿ ನಿಲಯದ ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ತಾಲೂಕಿನ ಎಸ್ಸಿ ಎಸ್ಟಿ (SC, ST) ಪೋಸ್ಟ್ ಮೆಟ್ರಿಕ್ ಬಾಲಕರ ವಸತಿ ನಿಲಯದಲ್ಲಿ (Post-matric SC-ST boys hostel) ನೀಡುವ ಆಹಾರದಲ್ಲಿ ಹುಳುಗಳು ಪತ್ತೆಯಾಗಿವೆ. ಅದಷ್ಟೇ ಅಲ್ಲದೆ ಹಾಸ್ಟೆಲ್​ನಲ್ಲಿ ಹಸಿ ರೊಟ್ಟಿ, ಅರೆಬೆಂದ ಇಡ್ಲಿ, ಮಸಾಲೆಗಳಿಲ್ಲದ ಸಾರನ್ನು ನೀಡಲಾಗುತ್ತದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಅರೆ ಬೆಂದ ಹುಳು ಮಿಶ್ರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹಲವು ಬಾರಿ ವಿದ್ಯಾರ್ಥಿಗಳು ಹೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ. ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿರುವುದರಿಂದ ಮತ್ತೊಮ್ಮೆ ಸರ್ಕಾರಿ ವಸತಿ ನಿಲಯಗಳ ಗುಣಮುಟ್ಟದ ಕುರಿತು ಪ್ರಶ್ನೆಗಳು ಉದ್ಭವವಾಗಿವೆ. ಇದರ ಕುರಿತು ಹಲವು ಬಾರಿ ವಾರ್ಡನ್ ಗೆ ದೂರು ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ವಿದ್ಯಾರ್ಥಿಗಳು ಅದೇ ಕಳಪೆ ಆಹಾರ ಸೇವಿಸುತ್ತಿದ್ದಾರೆ ಎಂಬುದು ತಿಳಿದು ಬಂದಿದೆ.

ಮೂರು ವರ್ಷದ ಹಿಂದೆ ಎರಡು ಕೋಟಿ ವೆಚ್ಚದಲ್ಲಿ ನಿರ್ಮಿಸಿಲಾದ ವಸತಿ ನಿಲಯವು ಸೋರಿಕೆಯಾಗುತ್ತಿದ್ದು, ಕಟ್ಟಡ ಉದ್ಘಾಟನೆಯಾಗಿ ಕೇವಲ ಒಂದೂವರೆ ವರ್ಷದಲ್ಲಿ ಈ ಸ್ಥಿತಿ ಎದುರಾಗಿದೆ. ನೆಲದ ಟೈಲ್ಸ್​ಗಳು ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಗ್ರಂಥಾಲಯವೂ ಸೋರಿಕೆಯಾಗುತ್ತಿದೆ. ವಸತಿ ನಿಯಲದ ವ್ಯವಸ್ಥೆಯು ತೀರಾ ಕಳಪೆಯಾಗಿದ್ದು, ವಿದ್ಯಾರ್ಥಿಗಳು ವಾರ್ಡನ್ ಲಕ್ಷ್ಮಣ ಸದಲಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಸತಿ ನಿಲಯದ ಅರಾಜಕತೆಯ ವಿರುದ್ಧ ಹಲವು ಬಾರಿ ಪ್ರಶ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಈ ಕುರಿತು ವಿದ್ಯಾರ್ಥಿಗಳು ತಹಶೀಲ್ದಾರ್ ಕಚೇರಿಗೆ ದೂರು ಸಲ್ಲಿಸಿದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಹಾಸ್ಟೆಲ್​​ನ ಸಮಸ್ಯೆಗಳು ಮುನ್ನೆಲೆಗೆ ಬಾರದಂತೆ ಬೈಲಹೊಂಗಲದ ಕಾಂಗ್ರೆಸ್ ಶಾಸಕ ಶಿವಾನಂದ್ ಮಹಂತೇಶ ಕೌಜಲಗಿ ತಡೆ ಹಿಡಿದಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ.

ಇದನ್ನೂ ಓದಿ: ಬೆಂಗಳೂರು: 100ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ ಎಂದು ಘೋಷಣೆ; ಕೃಷಿ ಸಚಿವ ಎನ್ ಚಲುವರಾಯಸ್ವಾಮಿ

ಬೆಳಗಾವಿ ಮಾತ್ರವಲ್ಲದೆ ಚಿತ್ರದುರ್ಗದಲ್ಲಿಯೂ ಈ ರೀತಿ ಘಟನೆಗಳು ನಡೆದಿವೆ. ವಸತಿ ನಿಲಯದ ಕೊರತೆಯನ್ನು ಚಿತ್ರದುರ್ಗದ ಶಾಸಕ ಕೆಸಿ ವಿರೇಂದ್ರ ಅವರಿಗೆ ತಿಳಿಸಿದಾಗ, ಕಾನೂನು ವಿದ್ಯಾರ್ಥಿಗೆ ವಸತಿ ನಿಲಯದ ಆಹಾರದಲ್ಲಿ ಏರುಪೇರಾದರೆ ನಿಲಯ ಪಾಲಕನಿಗೆ ಹೊಡೆದು ಬುದ್ಧಿಕಲಿಸಿ ಎಂದಿದ್ದಾರೆ. ಈ ಕುರಿತು ವಿಡಿಯೋ ವೈರಲ್ ಆಗಿದ್ದು, ‘ನೀವೇನು ಭಯಪಡಬೇಡಿ, ನಾವಿದ್ದೇವೆ. ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ. ಇನ್ನೊಮ್ಮೆ ಹೀಗಾಗದಂತೆ ಮಾಡಲು ವಾರ್ಡನ್​​ಗೆ ಹೊಡೆಯುವುದೊಂದೆ ಮಾರ್ಗ’ ಎಂದು ಅವರು ಹೇಳಿರುವುದು ವೈರಲ್ ವಿಡಿಯೋದಲ್ಲಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ