ಬೆಳಗಾವಿ: ರಾಮನವಮಿ ಮೆರವಣಿಗೆಯಲ್ಲಿ ಕನ್ನಡ ಧ್ವಜ ಹಿಡಿದುಬಂದ ಯುವಕನ ಮೇಲೆ ಹಲ್ಲೆ

ನಿನ್ನೆ(ಮಾ.30) ದೇಶದಾದ್ಯಂತ ರಾಮನವಮಿಯನ್ನ ಅದ್ದೂರಿಯಾಗಿ ಆಚರಿಸಲಾಗಿದೆ. ಅದೇ ರೀತಿ ನಿನ್ನೆ ಬೆಳಗಾವಿಯಲ್ಲಿಯೂ ಕೂಡ ಅದ್ದೂರಿಯಾಗಿ ರಾಮನವಮಿ(Ramnavami) ಆಚರಿಸಲಾಗಿದ್ದು. ಇದೇ ವೇಳೆ ಮೆರವಣಿಗೆಯಲ್ಲಿ ಕನ್ನಡ ಧ್ವಜ ಹಾರಿಸಿದ್ದಕ್ಕೆ ಮಂಜುನಾಥ್​ ಎಂಬ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಬೆಳಗಾವಿ: ರಾಮನವಮಿ ಮೆರವಣಿಗೆಯಲ್ಲಿ ಕನ್ನಡ ಧ್ವಜ ಹಿಡಿದುಬಂದ ಯುವಕನ ಮೇಲೆ ಹಲ್ಲೆ
ಬೆಳಗಾವಿ ರಾಮನವಮಿ ಹಲ್ಲೆ
Follow us
|

Updated on:Mar 31, 2023 | 2:21 PM

ಬೆಳಗಾವಿ: ನಿನ್ನೆ(ಮಾ.30) ದೇಶದಾದ್ಯಂತ ರಾಮನವಮಿಯನ್ನ ಅದ್ದೂರಿಯಾಗಿ ಆಚರಿಸಲಾಗಿದೆ. ಅದೇ ರೀತಿ ನಿನ್ನೆ ಬೆಳಗಾವಿಯಲ್ಲಿಯೂ ಕೂಡ ಅದ್ದೂರಿಯಾಗಿ ರಾಮನವಮಿ(Ramnavami) ಆಚರಿಸಲಾಗಿದ್ದು. ಇದೇ ವೇಳೆ ಮೆರವಣಿಗೆಯಲ್ಲಿ ಕನ್ನಡ ಧ್ವಜಹಾರಿಸಿದ್ದಕ್ಕೆ ಮಂಜುನಾಥ್​ ಎಂಬ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದ ಟಿಳಕ ಚೌಕ ಬಳಿಯಿರುವ ಶಿವಸೇನಾ ಕಚೇರಿಯ ಮುಂದೆ ನಡೆದಿದೆ. ಹೌದು ಚುನಾವಣೆ ಹೊಸ್ತಿಲಲ್ಲಿರುವಾಗ ಮತ್ತೆ ಮರಾಠಿಗರು ಪುಂಡಾಟಿಕೆ ಶುರು ಮಾಡಿದ್ದಾರೆ. ಇದೀಗ ಹಲ್ಲೆ ಮಾಡಿದ ಕಿಡಿಗೇಡಿಗಳ ಮೇಲೆ ಕನ್ನಡಪರ ಹೋರಾಟಗಾರರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ನೀತಿ‌ ಸಂಹಿತೆ ಜಾರಿ ಇದ್ದರೂ ಡಿಜೆಗೆ ಅವಕಾಶ ಕೊಟ್ಟು ಎಡವಟ್ಟು ಮಾಡಿದ್ರಾ ಪೊಲೀಸರು

ಹೌದು ಇದೀಗ ಚುನಾವಣೆ ದಿನಾಂಕವನ್ನ ಚುನಾವಣಾ ಆಯೋಗ ನಿಗದಿ ಮಾಡಿದ್ದು, ನೀತಿ‌ ಸಂಹಿತೆ ಜಾರಿಯಾಗಿದೆ. ಇದರ ಬೆನ್ನಲ್ಲೇ ರಾಮನವಮಿಯಂದು ಡಿಜೆಗೆ ಅವಕಾಶ ಕೊಟ್ಟು ಪೊಲೀಸರು ಎಡವಟ್ಟು ಮಾಡಿದ್ರಾ ಎಂಬ ಮಾತು ಕೇಳಿ ಬರುತ್ತಿದೆ. ಇದರ ಜೊತೆಗೆ ಗಲಾಟೆಯಾಗುತ್ತಿದ್ದರೂ ಅದನ್ನ ನಿಭಾಯಿಸುವಲ್ಲಿ ನಗರ ಪೊಲೀಸರು ವಿಫಲವಾದ ಕಾರಣ ಅವರ ವಿರುದ್ಧ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಡೆಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ರಾಮನವಮಿ ಆಚರಣೆ ವೇಳೆ 2 ಗುಂಪುಗಳ ನಡುವೆ ಮಾರಾಮಾರಿ; ಅಪ್ರಾಪ್ತ ಬಾಲಕರಿಗೆ ಚಾಕು ಇರಿತ

ಹಾಸನ: ದೇಶದಾದ್ಯಂತ  ರಾಮನವಮಿ ಅದ್ದೂರಿಯಾಗಿ ಜರುಗಿದೆ. ಅದರಂತೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ರಾಮನವಮಿ‌ ಹಿನ್ನೆಲೆ ಮೆರವಣೆಗೆ ಹಮ್ಮಿಕೊಳ್ಳಲಾಗಿದ್ದು. ಇದೇ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ಶುರುವಾಗಿದೆ. ಈ ಸಂದರ್ಭದಲ್ಲಿ ಅನ್ಯಕೋಮಿನ ಯುವಕರ ಗುಂಪೊಂದು ಇಬ್ಬರು ಅಪ್ರಾಪ್ತ ಬಾಲಕರಿಗೆ ಚಾಕುವಿನಿಂದ ಇರಿದಿರುವ ಘಟನೆ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ನಡೆದಿದೆ. ಗಾಯಗೊಂಡ ಮುರಳಿ, ಹರ್ಷಗೆ ಎಂಬ ಬಾಲಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 am, Fri, 31 March 23

ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ