AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: 15 ದಿನಗಳ ಕಾಲ ರಾಜಹಂಸಗಡ ಕೋಟೆ ಪ್ರವೇಶಕ್ಕೆ ನಿಷೇಧ

ರಾಜಹಂಸಗಡದ ಕೋಟೆ ಆವರಣದಲ್ಲಿ ಗ್ರಾನೈಟ್ ಕಲ್ಲು ಹಾಸು ಕಾಮಗಾರಿ ನಡೆಯುತ್ತಿದ್ದು, ಸಾರ್ವಜನಿಕರ ಪ್ರವೇಶದಿಂದ ಕಾಮಗಾರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ‌ಕೋಟೆ ಪ್ರವೇಶಕ್ಕೆ ಸಾರ್ವಜನಿಕರಿಗೆ 15 ದಿನಗಳ ಕಾಲ ಅಂದರೆ ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೆಕ್ಷನ್ 144(3) ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಬೆಳಗಾವಿ: 15 ದಿನಗಳ ಕಾಲ ರಾಜಹಂಸಗಡ ಕೋಟೆ ಪ್ರವೇಶಕ್ಕೆ ನಿಷೇಧ
ರಾಜಸಂಗಡ ಕೋಟೆಗೆ 15 ದಿನಗಳ ನಿಷೇಧ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Mar 21, 2023 | 11:25 AM

ಬೆಳಗಾವಿ: ರಾಜಹಂಸಗಡದ ಕೋಟೆ ಆವರಣದಲ್ಲಿ ಗ್ರಾನೈಟ್ ಕಲ್ಲು ಹಾಸು ಕಾಮಗಾರಿ ನಡೆಯುತ್ತಿದ್ದು, ಸಾರ್ವಜನಿಕರ ಪ್ರವೇಶದಿಂದ ಕಾಮಗಾರಿಗೆ ತೊಂದರೆ ಹಿನ್ನೆಲೆಯಲ್ಲಿ ‌ಕೋಟೆ ಪ್ರವೇಶಕ್ಕೆ ಸಾರ್ವಜನಿಕರಿಗೆ 15 ದಿನ ನಿಷೇಧ ಹೇರಲಾಗಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಸೆಕ್ಷನ್ 144(3) ಅನ್ವಯ ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವ ಮೊದಲೆ ರಾಜಕೀಯ ಲಾಭಕ್ಕೆ ಶಿವಾಜಿ ಮೂರ್ತಿ ಅನಾವರಣಗೊಳಿಸಲಾಗಿದೆ. ಮಾರ್ಚ್ 2ರಂದು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಆ ಬಳಿಕ ಮಾರ್ಚ್ 5 ರಂದು ಶಾಸಕಿ‌ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಅನಾವರಣ ನಡೆಯಿತು. ಇದಾದ ಮೇಲೆ ಮಾರ್ಚ್ 19 ರಂದು ಎಂಇಎಸ್ ಸಂಘಟನೆ ಪ್ರತಿಮೆ ಶುಚಿಗೊಳಿಸಿತು.

ಶಿವಾಜಿ ಮೂರ್ತಿ ಉದ್ಘಾಟನೆ ಕುರಿತು ಶುರುವಾಗಿತ್ತು ಕ್ರೆಡಿಟ್ ವಾರ್​

ಹೌದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಿವಾಜಿ ಮೂರ್ತಿ ಉದ್ಘಾಟನೆ ಕ್ರೆಡಿಟ್​ಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಬಿಗ್​ ಫೈಟ್ ನಡೆದಿತ್ತು. ಸಾಹುಕಾರ್ ರಮೇಶ್​ ಜಾರಕಿಹೊಳಿ ಮಾರ್ಚ್ 2ರಂದು ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಕರೆಯಿಸಿ ಸರ್ಕಾರದಿಂದ ಕಾರ್ಯಕ್ರಮ ಮಾಡಿಸಿದ್ದರು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ರಮೇಶ್​ಗೆ ತಿರುಗೇಟು ನೀಡಲು ಮಾ.5ರಂದು ಮತ್ತೊಮ್ಮೆ ಉದ್ಘಾಟನೆ ಮಾಡಿದ್ದರು. ಚುನಾವಣೆಗೂ ಮುನ್ನವೇ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪಕ್ಷಕ್ಕಿಂತ ಹೆಚ್ಚಾಗಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವರ್ಸಸ್ ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ನಡುವೆ ನೇರಾ ನೇರ ಕ್ರೆಡಿಟ್ ಪೈಟ್ ಆರಂಭವಾಗಿತ್ತು. ಗ್ರಾಮೀಣ ಕ್ಷೇತ್ರದಲ್ಲಿ ಜಿದ್ದಿಗೆ ಬಿದ್ದು ಅತೀ ಹೆಚ್ಚು ಮತದಾರರಿರುವ ಮರಾಠಿಗರನ್ನ ಸೆಳೆಯಲು ನಾನಾ ಕಸರತ್ತು ಮಾಡುತ್ತಿದ್ದಾರೆ.

ಇದನ್ನೂ ಓದಿ:ಬೆಳಗಾವಿ: ಆ ಐದು ಕ್ಷೇತ್ರದ ಸ್ವಪಕ್ಷೀಯ ನಾಯಕರಿಗೆ ತಲೆನೋವಾದ ರಮೇಶ್ ಜಾರಕಿಹೊಳಿ; ಅಷ್ಟಕ್ಕೂ ಏನಿದು? ಯಾವುದು ಆ ಕ್ಷೇತ್ರಗಳು ಅಂತೀರಾ ಸ್ಟೋರಿ ನೋಡಿ

ರಾಜಹಂಸಗಡ ಕೋಟೆಯಲ್ಲಿ ನಿರ್ಮಾಣವಾಗಿರುವ ಶಿವಾಜಿ ಮೂರ್ತಿಯನ್ನ ನಾವೇ ಮಾಡಿದ್ದೇವೆ ಎಂದು ಬಿಂಬಿಸಿ ಮರಾಠಿಗರ ಓಲೈಕೆ ಮಾಡಲು ಮುಂದಾಗಿದ್ದ ಹೆಬ್ಬಾಳ್ಕರ್​ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದರು. ಇನ್ನು ಅದಕ್ಕೆ ಹೆಬ್ಬಾಳ್ಕರ್ ಕೂಡ ಪ್ಲ್ಯಾನ್ ಮಾಡಿ ಮಾರ್ಚ್ 5ರಂದು ದಿನಾಂಕ ನಿಗದಿ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರನ್ನ ಕರೆತಂದು ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ