ಬೆಳಗಾವಿ: ಕಾಂಗ್ರೆಸ್​-ಬಿಜೆಪಿಯಿಂದ ಶಿವಾಜಿ ಪ್ರತಿಮೆ ಉದ್ಘಾಟನೆ, ಪ್ರತಿಮೆಯ ಶುದ್ಧೀಕರಣಕ್ಕೆ ಮುಂದಾದ ಎಂಇಎಸ್

ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆ ಕುರಿತು ಬಿಜೆಪಿ, ಕಾಂಗ್ರೆಸ್​ ಕ್ರೆಡಿಟ್ ಫೈಟ್ ವಿಚಾರವಾಗಿ ಇದೀಗ ನಾಡದ್ರೋಹಿ ಎಂಇಎಸ್ ಎಂಟ್ರಿಕೊಟ್ಟಿದ್ದು, ಶಿವಾಜಿ ಮಹಾರಾಜರ ಪ್ರತಿಮೆಯನ್ನು ರಾಜಕೀಯ ಉದ್ದೇಶಕ್ಕೆ ಎರಡು ಪಕ್ಷಗಳು ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ, ಮಾರ್ಚ್ 19ರಂದು ಶಿವಾಜಿ ಪ್ರತಿಮೆಯನ್ನ ಶುದ್ಧಗೊಳಿಸಲು ಮುಂದಾಗಿದೆ.

ಬೆಳಗಾವಿ: ಕಾಂಗ್ರೆಸ್​-ಬಿಜೆಪಿಯಿಂದ ಶಿವಾಜಿ ಪ್ರತಿಮೆ ಉದ್ಘಾಟನೆ, ಪ್ರತಿಮೆಯ ಶುದ್ಧೀಕರಣಕ್ಕೆ ಮುಂದಾದ ಎಂಇಎಸ್
ಶಿವಾಜಿ ಪ್ರತಿಮೆಯ ಶುದ್ಧೀಕರಣಕ್ಕೆ ಮುಂದಾದ ಎಂಇಎಸ್
ಕಿರಣ್ ಹನುಮಂತ್​ ಮಾದಾರ್

Updated on: Mar 21, 2023 | 10:49 AM

ಬೆಳಗಾವಿ: ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆ ಕುರಿತು ಬಿಜೆಪಿ, ಕಾಂಗ್ರೆಸ್​ ಕ್ರೆಡಿಟ್ ಫೈಟ್ ವಿಚಾರವಾಗಿ ಇದೀಗ ನಾಡದ್ರೋಹಿ ಎಂಇಎಸ್ (MES)ಎಂಟ್ರಿಕೊಟ್ಟಿದೆ. ರಾಜಕೀಯ ಪ್ರತಿಷ್ಠೆಗಾಗಿ ಎರಡು ಪಕ್ಷಗಳು ಒಂದೇ ಮೂರ್ತಿಯನ್ನು ಎರಡು ಸಲ ಉದ್ಘಾಟನೆ ಮಾಡಿದ್ದು, ಶಿವಾಜಿ ಮಹಾರಾಜರ ಪ್ರತಿಮೆಯನ್ನು ರಾಜಕೀಯ ಉದ್ದೇಶಕ್ಕೆ ಕಾಂಗ್ರೆಸ್, ಬಿಜೆಪಿ ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ,. ಇದೀಗ ಎಂಇಎಸ್​ ಮಾರ್ಚ್ 19ರಂದು ಶಿವಾಜಿ ಪ್ರತಿಮೆಯನ್ನ ಶುದ್ಧಗೊಳಿಸಲು ಮುಂದಾಗಿದೆ.

ಇನ್ನು ಪ್ರತಿಮೆ ಶುದ್ಧೀಕರಣ ಅಂಗವಾಗಿ ಪಾದಪೂಜೆ, ಪಂಚಾಮೃತ ಅಭಿಷೇಕ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದ್ದು,
ಮಹಾರಾಷ್ಟ್ರದ ವಿವಿಧ ಕೋಟೆಗಳಿಂದ ಶಿವಜ್ಯೋತಿ ತಂದು ನಗರದಲ್ಲಿ ಮೆರವಣಿಗೆ ಮಾಡಲಿದೆ. ಮೆರವಣಿಗೆ ಬಳಿಕ ರಾಜಹಂಸಗಡಕ್ಕೆ ಜ್ಯೋತಿ ತೆಗೆದುಕೊಂಡು ಹೋಗಲಾಗುವುದು ಎಂದು ನಿರ್ಧರಿಸಲಾಗಿದೆ. ಇದರಿಂದ ಶಿವಾಜಿ ಪ್ರತಿಮೆ ಶುದ್ಧೀಕರಣದ ಮೂಲಕ ಬೆಳಗಾವಿಯಲ್ಲಿ ಎಂಇಎಸ್ ಮತಭೇಟೆ ಆರಂಭವಾಗಲಿದೆ. ಕಾಂಗ್ರೆಸ್, ಬಿಜೆಪಿಗೆ ದೊಡ್ಡ ಪೆಟ್ಟು ನೀಡಲು ಒಳಗೊಳಗೆ ಸಿದ್ದತೆ ಮಾಡಿಕೊಳುತ್ತಿರುವ ಎಂಇಎಸ್, ಬೆಳಗಾವಿ ದಕ್ಷಿಣ ಹಾಗೂ ಬೆಳಗಾವಿ ಗ್ರಾಮೀಣದಲ್ಲಿ ಸ್ಪರ್ಧೆಗೆ ಈಗಾಗಲೇ ಸಿದ್ದತೆ ಮಾಡಿಕೊಂಡಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣಕ್ಕೆ 11 ಕೋಟಿ ರೂ. ಬಿಡುಗಡೆ ಮಾಡಿದ್ದು ನಾನು: ಗಾಲಿ ಜನಾರ್ಧನ ರೆಡ್ಡಿ, ಕೆಆರ್ ಪಿಪಿ ಅಧ್ಯಕ್ಷ

ಇನ್ನು ರಾಜಹಂಸಗಡ ಕೋಟೆಯಲ್ಲಿನ ಶಿವಾಜಿ ಮೂರ್ತಿ ಲೋಕಾರ್ಪಣೆ ವಿಚಾರವಾಗಿ ಬೆಳಗಾವಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಜಿದ್ದಾಜಿದ್ದಿ ಫೈಟ್​ ನಡೆದು ಕೊನೆಗೂ ಎರಡು ಪಕ್ಷಗಳು ಒಂದೇ ಮೂರ್ತಿಯನ್ನ ಎರಡು ಬಾರಿ ಉದ್ಘಾಟನೆಯನ್ನ ಮಾಡಿವೆ.ಮಾರ್ಚ್ 2ರಂದು ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಪ್ರತಿಮೆ ಲೋಕಾರ್ಪಯಾದರೆ, ಇದಕ್ಕೆ ಸೆಡ್ಡು ಹೊಡೆದು ಮಾರ್ಚ್ 5ರಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಪ್ರತಿಮೆ ಉದ್ಘಾಟನೆ ಮಾಡಲಾಗಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ 2 ತಿಂಗಳು ಬಾಕಿ ಇರುವಾಗಲೇ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್​ ಜಾರಕಿಹೊಳಿ ವರ್ಸಸ್ ಲಕ್ಷ್ಮೀ ಹೆಬ್ಬಾಳ್ಕರ್ ಫೈಟ್ ತಾರಕಕ್ಕೇದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತ್ತೊಮ್ಮೆ ಗೆಲ್ಲಲು ಹೆಬ್ಬಾಳ್ಕರ್ ಮರಾಠಿಗರ ಓಲೈಕೆಗೆ ನಿಂತರೆ, ಇತ್ತ ರಮೇಶ್ ಜಾರಕಿಹೊಳಿ ಕೂಡ ಹೆಬ್ಬಾಳ್ಕರ್ ಸೋಲಿಸಲು ಮರಾಠಿಗರನ್ನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಈ ಮಧ್ಯೆ ಇದೀಗ ಅಕಾಡಕ್ಕೆ ಎಂಇಎಸ್ ಎಂಟ್ರಿ ಕೊಟ್ಟಿದೆ.

ಇದನ್ನೂ ಓದಿ:ಬೆಳಗಾವಿ ರಾಜಕೀಯದಲ್ಲಿ ಶಿವಾಜಿ ಮೂರ್ತಿ ಸಂಘರ್ಷ, ರಮೇಶ್ ಜಾರಕಿಹಜೊಳಿ ತಂತ್ರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್​ ಪ್ರತಿತಂತ್ರ
ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ, ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಕಿತ್ತಾಟದ ನಡುವೆ ಇದೀಗ ಎಂಇಎಸ್​ ಕೂಡ ಎಂಟ್ರಿಯಾಗಿದ್ದು, ಎರಡು ಪಕ್ಷದ ಲೋಪದೋಷಗಳನ್ನ ಇಟ್ಟುಕೊಂಡು ಕ್ಷೇತ್ರದಲ್ಲಿ ರಾಜಕೀಯ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎಂಬುದು ಚುನಾವಣಾ ಬಳಿಕವೇ ಗೊತ್ತಾಗಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:53 am, Fri, 10 March 23

Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us