AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ರಾಜಕೀಯ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ಜಿದ್ದಿಗೆ ಬಿದ್ದ ಸಾಹುಕಾರ್

ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಮತದಾರರನ್ನು ಸೆಳೆಯುತ್ತಿದ್ದಾರೆ.

ಬೆಳಗಾವಿ: ರಾಜಕೀಯ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ಜಿದ್ದಿಗೆ ಬಿದ್ದ ಸಾಹುಕಾರ್
ರಮೇಶ್​ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್​
TV9 Web
| Edited By: |

Updated on: Dec 05, 2022 | 9:15 AM

Share

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಫುಲ್ ಆ್ಯಕ್ಟೀವ್ ಆಗಿದ್ದು. ಲಕ್ಷ್ಮೀ ಹೆಬ್ಬಾಳ್ಕರ್​ನ್ನು ಸೋಲಿಸಲು ಪಣ ತೊಟ್ಟಂತೆ ಕಾಣುತ್ತಿದೆ. ಬಡಸದ ಕೆ.ಹೆಚ್ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಯುವಕ ಮಂಡಳಿ ಉದ್ಘಾಟನೆ ಮಾಡುವ ಮೂಲಕ ಮರಾಠಾ ಸಮುದಾಯದ ಓಲೈಕೆಗೆ ರಮೇಶ್ ಜಾರಕಿಹೊಳಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಇನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮರಾಠಾ ಸಮುದಾಯದ ಮತಗಳು ನಿರ್ಣಾಯಕವಾಗಲಿದೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಆ್ಯಕ್ಟೀವ್ ವಿಚಾರವಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ಮೈದಾನ್ ಓಪನ್ ಹೈ, ಖುಲ್ಲಾ ಹೈ, ಹಮ್ ಬಿ ತಯಾರ್ ಹೈ, ಆಪ್ ಬೀ ಖುದೋ ಮೈದಾನ್ ಮೇ (ಅಖಾಡ ತೆರೆದಿದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ) ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ ಮಾಡಿದ್ದಾರೆ.

ನಾನು ಎಲೆಕ್ಷನ್ ಗೆದ್ದ ಮಾರನೇ ದಿನದಿಂದ ಮುಂದಿನ ಎಲೆಕ್ಷನ್‌‌ಗೆ ತಯಾರಿ ನಡೆಸಿದ್ದೇನೆ. ಈಗ ಚುನಾವಣೆಗೆ 90 ದಿನ ಇದೆ ಎಂದು ತಯಾರಿ ನಡೆಸಿಲ್ಲ. ಈಗ ಬಂದು ನಾನು ಬಿಲ್ಲು, ಬಾಣ, ಬತ್ತಲಿಕೆ ಅಂತೆಲ್ಲ ಇಲ್ಲ. ಚುನಾವಣೆ ಗೆದ್ದ ಮಾರನೇ ದಿನವೇ ನನಗೆ ಪುನರ್ಜನ್ಮ ಕೊಟ್ಟ ಕ್ಷೇತ್ರ ಎಂದು ನನ್ನ ಹುಟ್ಟಿದ ದಿನಾಂಕ ಮತದಾರರಿಗೊಸ್ಕರ ಚೇಂಜ್ ಮಾಡಿಕೊಂಡೆ. ಜನರ ಮನಸ್ಸು ಯಾವ ರೀತಿ ಗೆಲ್ಲಬೇಕೆಂದು ನಾಲ್ಕೂವರೆ ವರ್ಷಗಳಿಂದ ಕೆಲಸ ಮಾಡಿಕೊಂಡು ಬಂದಿದ್ದೇನೆ. ಗ್ರಾಮೀಣ ಕ್ಷೇತ್ರದ ಮೇಲೆ ಹಲವರ ಕಣ್ಣು ಹಾಕಿದ್ದಾರೆ ಎಂದು ಭವಿಷ್ಯ ಅಂತೂ ನಾನು ಹೇಳಲ್ಲ. ಮುಂದೆ ನೀವೇ ನೋಡ್ತಿರಿಲ್ಲ ಎಲೆಕ್ಷನ್ ರಿಸಲ್ಟ್, ಇನ್ನೂ ಕಾವು ಏರಬೇಕು ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.

ಇನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತ್ತೆ ರಮೇಶ್ ಜಾರಕಿಹೊಳಿ ಆ್ಯಕ್ಟೀವ್ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಪಾರ್ಟ್ ಟೈಮ್ ಪ್ಲೇಯರ್ ಎಂದಿದ್ದಾರೆ. ಅಕ್ಕ ಲಕ್ಷ್ಮೀ ಹೆಬ್ಬಾಳ್ಕರ್​ ಪಾರ್ಟ್ ಟೈಮ್ ಪ್ಲೇಯರ್ ಅಲ್ಲ, ಫುಲ್ ಟೈಮ್ ಪ್ಲೇಯರ್. ನಮ್ಮ ಅಕ್ಕ ಹೋರಾಟದಿಂದ ರಾಜಕೀಯಕ್ಕೆ ಬಂದವರು. ನಿತ್ಯ ಜನರ ಕಷ್ಟಗಳಿಗೆ ಸ್ಪಂದನೆ ಮಾಡುವ ಕೆಲಸಗಾರರು. ದಿನವೂ ಜನರಿಗೆ ಸಿಗುತ್ತಾರೆ, ಕೆಲಸ ಮಾಡುತ್ತಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅಂತ ಅಷ್ಟೇ ಅಲ್ಲ ರಾಜ್ಯದಲ್ಲಿ ಕೆಲಸಗಾರರಿಗೆ ಯಾವತ್ತೂ ಸೋಲಿಲ್ಲ.

ಇದನ್ನೂ ಓದಿ:Belagavi: ಕುಂದಾನಗರಿಯಲ್ಲಿ ಗಿಫ್ಟ್ ಪಾಲಿಟಿಕ್ಸ್ ; ಚುನಾವಣೆಗೂ ಮುನ್ನವೇ ಬೆಳಗಾವಿಯಲ್ಲಿ ಜೋರಾಯ್ತು ಓಲೈಕೆ ರಾಜಕಾರಣ

ಈ ಪಾರ್ಟ್ ಟೈಮ್ ಪ್ಲೇಯರ್ಸ್‌ದ್ದೆ ಸಮಸ್ಯೆ ನಮ್ಮ ಪಕ್ಷದ ಕೆಲಸ ನಾವು ಮಾಡುತ್ತಿದ್ದೇವೆ, ಅವರ ಪಕ್ಷದ ಕೆಲಸ ಅವರು ಮಾಡುತ್ತಿದ್ದಾರೆ. ಅದಕ್ಕೆ ಅವರ ಪಕ್ಷದ ನಾಯಕರು ಚಿಂತನೆ ಮಾಡಲಿ. ರಾಜಕೀಯದಲ್ಲಿ ಯಾವತ್ತು ಶಿಸ್ತಿನಿಂದ ರಾಜಕೀಯ ಮಾಡಬೇಕು. ಅವರ ಶಿಸ್ತಿನಿಂದ ಅವರು ರಾಜಕೀಯ ಮಾಡಲಿ, ನಮ್ಮ ಶಿಸ್ತಿನಿಂದ ನಾವು ರಾಜಕೀಯ ಮಾಡುತ್ತಿವಿ. ಆ ಶಿಸ್ತು ಎಲ್ಲಾದರೂ ಏನಾದರೂ ಆದಾಗ ನಾವು ಉತ್ತರ ಕೊಡುತ್ತೆವೆ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಟಾಂಗ್ ಕೊಟ್ಟಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!