AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belgavi Session: ಪಂಚರಾಜ್ಯಗಳಿಗೆ ಎಟಿಎಂ ಆಗಿದ್ದ ಸರ್ಕಾರ ರೈತರಿಗೆ ಏಕೆ ಎಟಿಎಂ ಆಗಿಲ್ಲ? ಜಿಟಿ ದೇವೇಗೌಡ ಪ್ರಶ್ನೆ

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಬಿಜೆಪಿ, ATM ಸರ್ಕಾರ ಎಂದೇ ಆರೋಪಿಸುತ್ತಲೇ ಬಂದಿದೆ. ವಿಧಾನಸಭೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಪಂಚರಾಜ್ಯಗಳಿಗೆ ಎಟಿಎಂ ಆಗಿದ್ದ ಸರ್ಕಾರ ರೈತರಿಗೆ ಏಕೆ ಎಟಿಎಂ ಆಗಿಲ್ಲ ಎಂದು ಪ್ರಶ್ನಿಸಿದ್ದಾರೆ. ಕೇಂದ್ರದ ಪರ ಬ್ಯಾಟಿಂಗ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

Belgavi Session: ಪಂಚರಾಜ್ಯಗಳಿಗೆ ಎಟಿಎಂ ಆಗಿದ್ದ ಸರ್ಕಾರ ರೈತರಿಗೆ ಏಕೆ ಎಟಿಎಂ ಆಗಿಲ್ಲ? ಜಿಟಿ ದೇವೇಗೌಡ ಪ್ರಶ್ನೆ
ಶಾಸಕ ಜಿ.ಟಿ.ದೇವೇಗೌಡ
ಕಿರಣ್​ ಹನಿಯಡ್ಕ
| Edited By: |

Updated on: Dec 07, 2023 | 8:26 PM

Share

ಬೆಳಗಾವಿ, ಡಿಸೆಂಬರ್​​ 07: ಪ್ರಧಾನಿ ನರೇಂದ್ರ ಮೋದಿ ಅವರೇ ರಾಜ್ಯಕ್ಕೆ ಬಂದು ಕಾಂಗ್ರೆಸ್‌ನ್ನು ಎಟಿಎಂ ಎಂದಿದ್ದಾರೆ. ಪಂಚರಾಜ್ಯಗಳಿಗೆ ಎಟಿಎಂ ಆಗಿದ್ದ ಸರ್ಕಾರ ರೈತರಿಗೆ ಏಕೆ ಎಟಿಎಂ ಆಗಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ (GT Devegowda) ಕಿಡಿಕಾರಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮೇಲೆ ಸಿಎಂ ಸಿದ್ದರಾಮಯ್ಯಗೆ ಪ್ರೀತಿ ಇರಬೇಕು. ಅದು ಬಿಟ್ಟು ಪ್ರಧಾನಿರನ್ನ ಟೀಕೆ ಮಾಡಿದರೆ ಸರೀನಾ? ಕೇಂದ್ರ ಸರ್ಕಾರದ ಜೊತೆ ರಾಜ್ಯ ಸರ್ಕಾರ ಉತ್ತಮ ಸಂಬಂಧ ಇರಬೇಕು ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಬಿಜೆಪಿ, ATM ಸರ್ಕಾರ ಎಂದೇ ಆರೋಪಿಸುತ್ತಲೇ ಬರುತ್ತದೆ.

ಶಿವಲಿಂಗೇಗೌಡ ಚರ್ಚೆ ವೇಳೆ ಜೆಡಿಎಸ್ ಶಾಸಕರಿಂದ ಆಕ್ಷೇಪ

ನಿಯಮ 69ರಡಿ ಬರ ಪರಿಸ್ಥಿತಿ ಮೇಲೆ ಕೇಂದ್ರ ಸರ್ಕಾರದ ವಿರುದ್ಧ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ  ಟೀಕೆ ಮಾಡಿದ್ದು, ಜೆಡಿಎಸ್ ಶಾಸಕರಿಂದ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿ ಶಾಸಕರಿಂದ ಕೂಡ ತೀವ್ರ ವಿರೋಧ ವ್ಯಕ್ತವಾಗಿದೆ. ಕೆಲವು ಹೊತ್ತು ಬಿಜೆಪಿ ಶಾಸಕರು ಮತ್ತು ಡೆಪ್ಯುಟಿ ಸ್ಪೀಕರ್ ನಡುವೆ ಮಾತಿನ ಚಕಮಕಿ ಉಂಟಾಯಿತು. ಆಕ್ಷೇಪ ವ್ಯಕ್ತಪಡಿಸಿದ ಚನ್ನರಾಯಪಟ್ಟಣ ಶಾಸಕ ಸಿ.ಎನ್. ಬಾಲಕೃಷ್ಣಗೆ ನೀನೂ ಎಷ್ಟು ಅಸೂಯೆ ಪಡ್ತಿಯಲೇ ಸುಮ್ನಿರು ಎಂದಿದ್ದಾರೆ ಶಿವಲಿಂಗೇಗೌಡ.

ಇದನ್ನೂ ಓದಿ: Belgavi Session: ಸುವರ್ಣಸೌಧದ ಬಳಿ ರೈತರಿಂದ ಪ್ರತಿಭಟನೆ: ಓಡೋಡಿ ಬಂದ ಸಚಿವ ಶಿವಾನಂದ ಪಾಟೀಲ್

ಶಿವಲಿಂಗೇಗೌಡ ಎತ್ತಿನಹೊಳೆ ಯೋಜನೆ ಪ್ರಸ್ತಾಪಿಸಿದ ವೇಳೆ ಬಿಜೆಪಿಯವರು ಎತ್ತಿನ ಹೊಳೆಗೆ ವಿರೋಧ ಮಾಡಿದರು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಅಂದು ನಮ್ಮ ಜೊತೆ ಪ್ರತಿಭಟನೆಯಲ್ಲಿ‌ ನೀವೂ ಇದ್ರಿ ಎಂದು ದಕ್ಷಿಣ ಕನ್ನಡ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮತ್ತು ಹರೀಶ್ ಪೂಂಜ. ಈ ವೇಳೆ ಶಾಸಕ ಅಶೋಕ್ ರೈ ಸೈಲೆಂಟ್ ಆಗಿ ಕುಳಿತುಕೊಂಡರು.

ಇದನ್ನೂ ಓದಿ: Belgavi Session: ಸದನದಲ್ಲಿ ಮಾರ್ದನಿಸಿದ ಬಿಜೆಪಿ ಮುಖಂಡನ ಹಲ್ಲೆ ಪ್ರಕರಣ; ಸರ್ಕಾರ, ಬಿಜೆಪಿ ಜಟಾಪಟಿ

ಮಂಗಳೂರಿನವರು ಮೂರ್ನಾಲ್ಕು ಜನ ಸೇರಿಕೊಂಡಿದ್ದಾರೆ, ಅವರಿಗೆ ಬೇರೆ ಏನೂ ಕೆಲಸ ಇಲ್ಲ. ಮಾತಾಡಿದಾಗ ಅಡ್ಡಿ ಮಾಡುವುದು ಎಂದು ಶಿವಲಿಂಗೇಗೌಡ ಕಿಡಿಕಾರಿದ್ದು, ನೀವು ನಮ್ಮ ನೋಡಿಕೊಂಡು ಮಾತಾಡಬೇಡಿ, ಸ್ಪೀಕರ್ ನೋಡಿ ಮಾತಾಡಿ ಎಂದು ಶಿವಲಿಂಗೇಗೌಡಗೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Kiran Haniyadka
Kiran Haniyadka
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ