AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಒಪ್ಪಿಗೆ

ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ಬೆಳಗಾವಿ ನಡುವೆ ಹೊಸ ವಂದೇ ಭಾರತ್ ರೈಲಿಗೆ ಅನುಮತಿ ನೀಡಿದ್ದಾರೆ. ಸಚಿವ ವಿ. ಸೋಮಣ್ಣ ಅವರು ಈ ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ. ರೈಲಿನ ನಿಖರ ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದಿದ್ದಾರೆ. ಈ ರೈಲು ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದಗಳು ಎಂದು ಸಚಿವರು ಹೇಳಿದ್ದಾರೆ.

ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಒಪ್ಪಿಗೆ
ವಂದೇ ಭಾರತ್​ ರೈಲು
ವಿವೇಕ ಬಿರಾದಾರ
| Edited By: |

Updated on:Apr 30, 2025 | 7:18 AM

Share

ಬೆಂಗಳೂರು, ಏಪ್ರಿಲ್​ 29: ಬೆಂಗಳೂರು-ಬೆಳಗಾವಿ (Bengaluru-Belagavi) ನಡುವೆ ನೂತನ ವಂದೇ ಭಾರತ್ ರೈಲು (Vande Bharath Train) ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮತಿ ನೀಡಿದ್ದಾರೆ. ಈ ರೈಲು ಸಂಚಾರದ ಅಧಿಕೃತ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ತಿಳಿಸಲಾಗುವುದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ (V Somanna) ಟ್ವೀಟ್​ ಮಾಡಿದ್ದಾರೆ.

ಈ ಕರಿತು ಟ್ವೀಟ್​ ಮಾಡಿದ ಅವರು “ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಬೇಕೆಂದು ಮಾನ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಉತ್ತರ ಕರ್ನಾಟ ಭಾಗದ ಜನದಟ್ಟಣೆಯನ್ನು ಅರಿತು ಅಶ್ವಿನಿ ವೈಷ್ಣವ್ ಅವರು ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ಈ ರೈಲು ಸಂಚಾರದ ಅಧಿಕೃತ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ತಿಳಿಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ
Image
ಶುಭ ಸುದ್ದಿ ನೀಡಿದ ರೈಲ್ವೆ: ಈ ನಿಲ್ದಾಣದಲ್ಲಿ ವಂದೇ ಭಾರತ್ ನಿಲುಗಡೆಗೆ ಆದೇಶ
Image
ಬೆಂಗಳೂರು ಬೆಳಗಾವಿ ವಂದೇ ಭಾರತ್ ರೈಲು ಶೀಘ್ರ: ಅಶ್ವಿನಿ ವೈಷ್ಣವ್ ಸಮ್ಮತಿ
Image
ಮೆಟ್ರೋ ಬರೆ: ಪ್ರಯಾಣಿಕರ ಆಕ್ರೋಶ ಬೆನ್ನಲ್ಲೇ ದರ ಇಳಿಸುವಂತೆ ಬಿಜೆಪಿ ಮನವಿ
Image
ನಮ್ಮ ಮೆಟ್ರೋ ಟಿಕೆಟ್ ದರ ಓನ್​ ಟು ಡಬಲ್ ಏರಿಕೆ ಮಾಡಲಾಗಿದ್ಯಾ?

ಸೋಮಣ್ಣ ಟ್ವೀಟ್​

“ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿರುವ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಹಾಗೂ ಅಶ್ವಿನಿ ವೈಷ್ಣವ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ರೈಲ್ವೆ: ಈ ನಿಲ್ದಾಣದಲ್ಲಿ ವಂದೇ ಭಾರತ್ ನಿಲುಗಡೆಗೆ ಆದೇಶ

ಈಗಾಗಲೇ ಕರ್ನಾಟಕದಲ್ಲಿ ಬೆಂಗಳೂರು ಟು ಧಾರವಾಡ, ಬೆಂಗಳೂರು ಕಂಟೋನ್ಮೆಂಟ್​ ಟು ಕೊಯಮತ್ತೂರು, ಮೈಸೂರು ಟು ಚೆನೈ, ಯಶವಂತಪುರ ಟು ಕಾಚಿಗುಡ ಮತ್ತು ಮಂಗಳೂರು ಸೆಂಟ್ರೆಲ್ ಟು ಮಡಗಾಂವ್​ಗೆ​​ ವಂದೇ ಭಾರತ್ ರೈಲುಗಳು ಸಂಚಾರ ಮಾಡುತ್ತಿವೆ.

ಸಚಿವ ಪ್ರಲ್ಹಾದ್​ ಜೋಶಿ ಟ್ವೀಟ್

ಇನ್ನು ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಕೂಡ ಟ್ವೀಟ್ ಮಾಡಿದ್ದು, ಬೆಂಗಳೂರು – ಬೆಳಗಾವಿ ವಂದೇ ಭಾರತ್ ರೈಲಿಗೆ ನನ್ನ ಕೋರಿಕೆಯ ಮೇರಿಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ವಂದೇ ಭಾರತ್ ರೈಲು ಸಂಪರ್ಕದಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಉತ್ತೇಜನ ಸಿಗಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 pm, Tue, 29 April 25

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ