AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಖಾಸಗಿ ಸಾರಿಗೆ ಬಂದ್; ಬೆಂಬಲ ಸೂಚಿಸಿದ ಓಲಾ, ಉಬರ್ ಚಾಲಕರು

ಸೋಮವಾರ ಖಾಸಗಿ ಸಾರಿಗೆ ಸಂಘಟನೆ ಬಂದ್​ಗೆ ಸಂಬಂಧಿಸಿದಂತೆ ಓಲಾ, ಉಬರ್ ಚಾಲಕರು ಮತ್ತು ಮಾಲೀಕರ ಸಂಘದಿಂದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಧ್ಯಕ್ಷ ತನ್ವೀರ್ ಪಾಷಾ ‘ರ್ಯಾಪಿಡೋ ವಿಚಾರದಲ್ಲಿ ನಮಗೆ ಸಾಕಷ್ಟು ನೋವಿದೆ. ಹೀಗಾಗಿ ನಾವು ಬಂದ್​ಗೆ ಬೆಂಬಲ ಕೊಡುತ್ತಿದ್ದೇವೆ. ಆದ್ರೆ, ಯಾರಿಗೂ ಒತ್ತಡ ಹೇರುವ ಕೆಲಸ ಮಾಡುತ್ತಿಲ್ಲ ಎಂದಿದ್ದಾರೆ.

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಖಾಸಗಿ ಸಾರಿಗೆ ಬಂದ್; ಬೆಂಬಲ ಸೂಚಿಸಿದ ಓಲಾ, ಉಬರ್ ಚಾಲಕರು
ಪ್ರಾತಿನಿಧಿಕ ಚಿತ್ರ
Vinayak Hanamant Gurav
| Edited By: |

Updated on:Sep 09, 2023 | 2:43 PM

Share

ಬೆಂಗಳೂರು, ಸೆ.09: ಕಾಂಗ್ರೆಸ್​ ನೀಡಿದ್ದ 5 ಗ್ಯಾರೆಂಟಿಗಳಲ್ಲೊಂದಾದ ಶಕ್ತಿ ಯೋಜನೆಗೆ ರಾಜ್ಯದ್ಯಾಂತ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಆದರೆ, ಆಟೋ (Auto), ಟ್ಯಾಕ್ಸಿ(Taxi), ಕ್ಯಾಬ್​​ ವಾಹನಗಳಿಗೆ ನಷ್ಟವಾಗಿದೆ. ಈ ಹಿನ್ನಲೆ ಸೋಮವಾರ(ಸೆ.11) ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ವಾಹನಗಳ ಸಂಘದಿಂದ ಬಂದ್​ಗೆ ಕರೆ ನೀಡಲಾಗಿದೆ. ಇನ್ನು ಈ ಹೋರಾಟಕ್ಕೆ ಓಲಾ, ಉಬರ್ ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ಕೂಡ ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದೇವೆ ಎಂದಿದ್ದಾರೆ.

ಬಂದ್​ಗೆ ಬೆಂಬಲ ಸೂಚಿಸಿದ ಓಲಾ, ಉಬರ್

ಸೋಮವಾರ ಖಾಸಗಿ ಸಾರಿಗೆ ಸಂಘಟನೆ ಬಂದ್​ಗೆ ಸಂಬಂಧಿಸಿದಂತೆ ಓಲಾ, ಉಬರ್ ಚಾಲಕರು ಮತ್ತು ಮಾಲೀಕರ ಸಂಘದಿಂದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಧ್ಯಕ್ಷ ತನ್ವೀರ್ ಪಾಷಾ ‘ಹಲವು ಸಂಘಟನೆ ಒಕ್ಕೂಟದ ಮುಖಾಂತರ ಸೋಮವಾರ ಬೆಂಗಳೂರು ಬಂದ್ ಗೆ ಕರೆ ನೀಡಿದ್ದಾರೆ. ಸಾವಿರಾರು ಆಟೋ ಕಮ್ ಟ್ಯಾಕ್ಸಿ ಇರುವ ಕ್ಯೂಟ್ ವಾಹನ ಸಂಸ್ಥೆ. ಆಟೋ ಘಟಕ, ಓಲಾ ಉಬರ್, MNC ಚಾಲಕರ ಸಂಘ ಇಲ್ಲಿದೆ. ಮುಖ್ಯವಾಗಿ ಈ ಬಂದ್​ಗೆ ನಮ್ಮ ಬೆಂಬಲ ಇದೆ ಎಂದಿದ್ದಾರೆ.

ಇದನ್ನೂ ಓದಿ:ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್​ಗೆ ಕರೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ರ್ಯಾಪಿಡೋ ವಿಚಾರದಲ್ಲಿ ಸಾಕಷ್ಟು ನೋವಿದೆ

ರ್ಯಾಪಿಡೋ ವಿಚಾರದಲ್ಲಿ ನಮಗೆ ಸಾಕಷ್ಟು ನೋವಿದೆ. ಹೀಗಾಗಿ ನಾವು ಬಂದ್​ಗೆ ಬೆಂಬಲ ಕೊಡುತ್ತಿದ್ದೇವೆ. ಆದ್ರೆ, ಯಾರಿಗೂ ಒತ್ತಡ ಹೇರುವ ಕೆಲಸ ಮಾಡುತ್ತಿಲ್ಲ. ಸೇವೆ ನೀಡೋದು ಬಿಡೋದು ಅವರಿಗೆ ಬಿಟ್ಟಿರುವ ವಿಚಾರ. ಅನಧಿಕೃತವಾಗಿ ರನ್ ಆಗುತ್ತಿರುವ ರ್ಯಾಪಿಡೋ ಬ್ಯಾನ್ ಬೇಡಿಕೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸುದ್ದಿಗೋಷ್ಠಿಯಲ್ಲಿ ಬೆಂಬಲ ಸೂಚಿಸಿದ್ದಾರೆ.

ಇನ್ನು ಖಾಸಗಿ ವಾಹನಗಳ ಬೇಡಿಕೆಗಳು ಈ ಕೆಳಗಿನಂತಿದೆ.

1) ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಧನ

2) ರ್ಯಾಪಿಡ್ ಬೈಕ್ ಟ್ಯಾಕ್ಸಿಗಳ ಸಂಪೂರ್ಣ ನಿಷೇಧ

3) ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ಸೌಲಭ್ಯ ಯೋಜನೆಯಡಿ ಆಟೋ, ಟ್ಯಾಕ್ಸಿ ಚಾಲಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಬೇಕು

4)ವೈಟ್ ಬೋರ್ಡ್ ವಾಹನದಲ್ಲಿ ಬಾಡಿಗೆ ಮಾಡೋದಕ್ಕೆ ಬ್ರೇಕ್

5) ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ

6) ಓಲಾ, ಊಬರ್ ಆಪ್ ಆಧಾರಿತ ಸೇವೆಗಳ ನಿರ್ಬಂಧ

7) ಖಾಸಗಿ ಬಸ್​ಗಳಿಗೂ ಶಕ್ತಿ ಯೋಜನೆ ಅಡಿ ಸೇವೆಗೆ ಅವಕಾಶ

8) ಖಾಸಗಿ ವಾಹನಗಳನ್ನ ಕಿ.ಮೀ ಆಧಾರದಲ್ಲಿ ಸರ್ಕಾರ ಬಾಡಿಗೆಗೆ ಪಡೆಯುವುದು

9) ನಿಯಮ ಬಾಹಿರವಾಗಿ ವಾಹನ ವಶಕ್ಕೆ ಪಡೆಯುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಬೇಕು

ಇನ್ನಿತರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬಂದ್​ಗೆ ಕರೆ ನೀಡಲಾಗಿದೆ. ಇನ್ನು ಸೆಪ್ಟೆಂಬರ್ 10 ರ ಮಧ್ಯರಾತ್ರಿಯಿಂದಲೇ ಬಂದ್ ಶುರುವಾಗಲಿದೆ. ಈ ಹಿನ್ನಲೆ ಇಂದು ಬಂದ್​ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Sat, 9 September 23

Follow Us
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು