AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜಾಂಟಿ ರೋಡ್ಸ್ ಜಾಲಿ ರೈಡ್! ಟ್ಯಾಕ್ಸಿ ಚಾಲಕನ ಸಲಹೆಗೆ ಕೃತಜ್ಞ ಎಂದಿದ್ದೇಕೆ ಖ್ಯಾತ ಮಾಜಿ ಕ್ರಿಕೆಟಿಗ?

ಬೆಂಗಳೂರು ಟ್ರಾಫಿಕ್ ಜಾಮ್​ ಬಿಸಿಯಿಂದ ಪಾರಾಗಲು ಸಮೀಪದ ಹೋಟೆಲ್​ಗೆ ತೆರಳುವಂತೆ ಟ್ಯಾಕ್ಸಿ ಚಾಲಕ ಜಾಂಟಿ ಅವರಿಗೆ ಸಲಹೆ ನೀಡಿದ್ದರು. ಅದರಂತೆ, ವಿಮಾನ ನಿಲ್ದಾಣ ಮಾರ್ಗದಲ್ಲಿರುವ ಹೋಟೆಲ್​ಗೆ ತೆರಳಿ ಮೈಸೂರು ಮಸಾಲದೋಸೆ, ಮಂಗಳೂರು ಬನ್ಸ್ ತಿಂದು, ಮಸಾಲ ಚಹಾ ಸವಿದಿದ್ದಾರೆ.

ಬೆಂಗಳೂರಿನಲ್ಲಿ ಜಾಂಟಿ ರೋಡ್ಸ್ ಜಾಲಿ ರೈಡ್! ಟ್ಯಾಕ್ಸಿ ಚಾಲಕನ ಸಲಹೆಗೆ ಕೃತಜ್ಞ ಎಂದಿದ್ದೇಕೆ ಖ್ಯಾತ ಮಾಜಿ ಕ್ರಿಕೆಟಿಗ?
ಮೈಸೂರು ಮಸಾಲೆ ದೋಸೆ, ಮಂಗಳೂರು ಬನ್ಸ್ ಸವಿದ ಜಾಂಟಿ ರೋಡ್ಸ್
TV9 Web
| Updated By: Ganapathi Sharma|

Updated on: Nov 21, 2023 | 8:14 PM

Share

ಬೆಂಗಳೂರು, ನವೆಂಬರ್ 21: ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ, ಫೀಲ್ಡಿಂಗ್ ದಂತಕಥೆ ಜಾಂಟಿ ರೋಡ್ಸ್​​ (Jonty Rhodes) ಅವರ ಭಾರತ ಪ್ರೀತಿ ಬಗ್ಗೆ ಹೇಳಬೇಕಿಲ್ಲ. ಚುರುಕಿನ ಫೀಲ್ಡಿಂಗ್ ಮೂಲಕ ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಜಾಂಟಿ ರೋಡ್ಸ್ ಇದೀಗ ಬೆಂಗಳೂರಿನ ಹೋಟೆಲೊಂದರ (Bengaluru Veg Restaurant) ಮೈಸೂರು ಮಸಾಲೆ ದೋಸೆ, ಮಂಗಳೂರು ಬನ್ಸ್ ರುಚಿಗೆ ಮಾರುಹೋಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಅಲ್ಲದೆ, ಇಂಥ ರುಚಿಕರ ಆಹಾರ ದೊರೆಯಲು ಕಾರಣರಾದ ಟ್ಯಾಕ್ಸಿ ಚಾಲಕನಿಗೆ ಧನ್ಯವಾದ ತಿಳಿಸಿದ್ದಾರೆ.

ಬೆಂಗಳೂರು ಟ್ರಾಫಿಕ್ ಜಾಮ್​ ಬಿಸಿಯಿಂದ ಪಾರಾಗಲು ಸಮೀಪದ ಹೋಟೆಲ್​ಗೆ ತೆರಳುವಂತೆ ಟ್ಯಾಕ್ಸಿ ಚಾಲಕ ಜಾಂಟಿ ಅವರಿಗೆ ಸಲಹೆ ನೀಡಿದ್ದರು. ಅದರಂತೆ, ವಿಮಾನ ನಿಲ್ದಾಣ ಮಾರ್ಗದಲ್ಲಿರುವ ಹೋಟೆಲ್​ಗೆ ತೆರಳಿ ಮೈಸೂರು ಮಸಾಲದೋಸೆ, ಮಂಗಳೂರು ಬನ್ಸ್ ತಿಂದು, ಮಸಾಲ ಚಹಾ ಸವಿದಿದ್ದಾರೆ. ಬಳಿಕ ಹೋಟೆಲ್ ಸಿಬ್ಬಂದಿ ಜತೆ ಫೊಟೋ ತೆಗೆಸಿಕೊಂಡು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರಕಟಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವಾಗ ಟ್ರಾಫಿಕ್​ ಜಾಮ್ ಬಿಸಿ ಅರಿತ ಟ್ಯಾಕ್ಸಿ ಚಾಲಕನು ತನ್ನ ನೆಚ್ಚಿನ ರೆಸ್ಟೋರೆಂಟ್‌ ಬಗ್ಗೆ ಮಾಹಿತಿ ನೀಡಿ, ಕಾಯುವ ಹೊತ್ತಿನಲ್ಲಿ ಅಲ್ಲಿಗೆ ತೆರಳುವಂತೆ ಸಲಹೆ ನೀಡಿದರು. ಕೃತಜ್ಞರಾಗಿ ನಾನು ಅವರ ಸಲಹೆಯನ್ನು ತೆಗೆದುಕೊಂಡೆ. ಅಲ್ಲಿನ ಮೈಸೂರು ಮಸಾಲೆ ದೋಸೆ, ಮಂಗಳೂರು ಬನ್ಸ್ ಹಾಗೂ ಮಸಾಲ ಚಹಾ ಅದ್ಭುತವಾಗಿತ್ತು. #loveIndia ಎಂಬ ಹ್ಯಾಷ್​ಟ್ಯಾಗ್​​ನೊಂದಿಗೆ ಜಾಂಟಿ ರೋಡ್ಸ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನ ಭಗಿನಿ ವೆಜ್ ರೆಸ್ಟೋರೆಂಟ್​ನ ಸಿಬ್ಬಂದಿ ಜತೆ ನಿಂತಿರುವ ಫೋಟೊವನ್ನೂ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್​​ ನಿವಾರಣೆಗೆ ಕೃತಕ ಬುದ್ಧಿಮತ್ತೆ ಮೊರೆ ಹೋಗಲಿದ್ದಾರೆ ಪೊಲೀಸರು: ಏನಿದರ ಪ್ರಯೋಜನ? ಇಲ್ಲಿದೆ ವಿವರ

ಭಾರತದ ಜೊತೆ ಜಾಂಟಿ ರೋಡ್ಸ್ ವಿಶೇಷವಾದ ಸಂಬಂಧವನ್ನು ಹೊಂದಿದ್ದಾರೆ. ಅವರು ತಮ್ಮ ಮಗಳಿಗೆ ‘ಇಂಡಿಯಾ’ ಎಂದು ನಾಮಕರಣ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್