AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.4ರಂದು ಅಧಿವೇಶನದ ಮೊದಲ ದಿನವೇ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ: ಕೊಡಿಹಳ್ಳಿ ಚಂದ್ರಶೇಖರ್

ಡಿಸೆಂಬರ್ 4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಆದ್ರೆ, ಇತ್ತ ಕರ್ನಾಟಕ ರಾಜ್ಯ ರೈತ ಸಂಘ, ಅಧಿವೇಶನ ಆರಂಭದ ದಿನವೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಡಿ.4ರಂದು ಅಧಿವೇಶನದ ಮೊದಲ ದಿನವೇ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ: ಕೊಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
Sahadev Mane
| Edited By: |

Updated on: Dec 02, 2023 | 3:47 PM

Share

ಬೆಳಗಾವಿ, ಡಿಸೆಂಬರ್ 02): ಇದೇ ಡಿಸೆಂಬರ್ 4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ (Belagavi Winter Session) ಶುರುವಾಗಲಿದೆ. ಆದ್ರೆ, ಇತ್ತ ಕರ್ನಾಟಕ ರಾಜ್ಯ ರೈತ ಸಂಘ, ಅಧಿವೇಶನ ಆರಂಭದ ದಿನವೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್(Kodihalli chandrashekar), ಅಧಿವೇಶನದ ಮೊದಲ ದಿನ ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಹೋಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ.

ರೈತರ ವಿವಿಧ ಬೇಡಿಕೆ ಗಳ ಈಡೇರಿಸಲು ಒತ್ತಾಯಿಸಿ ಪಾದಯಾತ್ರೆ ಮೂಲಕ ತೆರಳಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಜಾರಿಗೊಳಿಸಿ ಬಳಿಕ ಅದನ್ನು ವಾಪಸ್ ಪಡೆದಿದೆ. ಆದ್ರೆ, ರಾಜ್ಯ ಸರ್ಕಾರ ಕೃಷಿ ಕಾಯ್ದೆ ವಾಪಸ್ ಪಡೆದಿಲ್ಲ. ಆದ್ರೆ, ಬಿಜೆಪಿಯವರು ತಂದಿರುವ ಕೃಷಿ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿ ಎಂದು ಕಿಡಿಕಾರಿದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟ: ಬಿಜೆಪಿಯ ಅಸ್ತ್ರಗಳನ್ನು ಬಿಚ್ಚಿಟ್ಟ ಅಶೋಕ್

ಈ ಹಿಂದೆ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬೆಂಬಲಿಸಿದ್ದರು. ಕಳೆದ ಅಧಿವೇಶನದಲ್ಲಿ ಸಚಿವ ಶಿವಾನಂದ ಪಾಟೀಲ್ ಕೃಷಿ ಕಾಯ್ದೆ ವಾಪಸ್ ಪಡೆಯುವ ಬಿಲ್ ಮಂಡಿಸಲು ಮುಂದಾದ್ರು. ಆಗ ವಿಪಕ್ಷದವರು ವಿರೋಧಿಸಿದ್ದರು. ಬಿಜೆಪಿಯವರು ತಂದಿರೋ ಕೃಷಿ ಕಾಯ್ದೆ ಯಥಾವತ್ತಾಗಿ ಜಾರಿಗೊಳಿಸಲು ಸರ್ಕಾದ ಮುಂದಾಗಿದೆ. ಬಿಜೆಪಿ ಜಾರಿ ತಂದ ಭೂಸುಧಾರಣಾ ಕಾಯ್ದೆಯನ್ನ ಅನುಷ್ಠಾನಗೊಳಿಸುವ ಕೆಲಸವನ್ನ ಕಾಂಗ್ರೆಸ್ ಅಚ್ಚುಕಟ್ಟಾಗಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಹೈನುಗಾರಿಕೆ ಯೋಜನೆಯಲ್ಲಿ ಸರ್ಕಾರ ರೈತರಿಂದ 4 ರೂಪಾಯಿ ಹಗಲು ದರೋಡೆ ಮಾಡುತ್ತಿದೆ. ಬರಗಾಲದಿಂದ ರೈತರು ತತ್ತರಿಸಿದ್ದರೂ ಈವರೆಗೂ ಪರಿಹಾರ ಬಂದಿಲ್ಲ. ಮೋದಿ ಸರ್ಕಾರ ರೈತರಿಗೆ 2 ಸಾವಿರ ಕೊಡುತ್ತಿತ್ತು. ಇದಕ್ಕೆ ರಾಜ್ಯ ಬಿಜೆಪಿ ಸರ್ಕಾರ 2 ಸಾವಿರ ಸೇರಿಸಿ ಕೊಡುತ್ತಿತ್ತು. ಆದ್ರೆ, ಈಗ ಕಾಂಗ್ರೆಸ್ ಸರ್ಕಾರ ಆ 2 ಸಾವಿರ ರೂಪಾಯಿ ಕಟ್ ಮಾಡಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಒಂದೇ ಒಂದು ರೈತ ಪರ ಯೋಜನೆ ಮಾಡಿಲ್ಲ.ಕಬ್ಬು ಬೆಳೆಗಾರರಿಗೆ ಈವರೆಗೂ ಸೂಕ್ತ ದರ ಸಿಗುತ್ತಿಲ್ಲ. ಯಾವುದೇ ಕಾರ್ಖಾನೆಗಳು ರೈತರಿಗೆ ಸೂಕ್ತ ದರ ನೀಡುತ್ತಿಲ್ಲ. ಹಾವೇರಿ ರೈತರಿಗೆ ಒಂದ ದರ, ಹುಬ್ಬಳ್ಳಿ ಧಾರವಾಡ, ಕಾರವಾರದ ರೈತರಿಗೆ ಮತ್ತೊಂದು ದರ ಕೊಡುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ