AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.4ರಂದು ಅಧಿವೇಶನದ ಮೊದಲ ದಿನವೇ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ: ಕೊಡಿಹಳ್ಳಿ ಚಂದ್ರಶೇಖರ್

ಡಿಸೆಂಬರ್ 4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಆದ್ರೆ, ಇತ್ತ ಕರ್ನಾಟಕ ರಾಜ್ಯ ರೈತ ಸಂಘ, ಅಧಿವೇಶನ ಆರಂಭದ ದಿನವೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಡಿ.4ರಂದು ಅಧಿವೇಶನದ ಮೊದಲ ದಿನವೇ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ: ಕೊಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
ಸಹದೇವ್​ ಮಾನೆ
| Edited By: |

Updated on: Dec 02, 2023 | 3:47 PM

Share

ಬೆಳಗಾವಿ, ಡಿಸೆಂಬರ್ 02): ಇದೇ ಡಿಸೆಂಬರ್ 4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ (Belagavi Winter Session) ಶುರುವಾಗಲಿದೆ. ಆದ್ರೆ, ಇತ್ತ ಕರ್ನಾಟಕ ರಾಜ್ಯ ರೈತ ಸಂಘ, ಅಧಿವೇಶನ ಆರಂಭದ ದಿನವೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್(Kodihalli chandrashekar), ಅಧಿವೇಶನದ ಮೊದಲ ದಿನ ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಹೋಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ.

ರೈತರ ವಿವಿಧ ಬೇಡಿಕೆ ಗಳ ಈಡೇರಿಸಲು ಒತ್ತಾಯಿಸಿ ಪಾದಯಾತ್ರೆ ಮೂಲಕ ತೆರಳಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಜಾರಿಗೊಳಿಸಿ ಬಳಿಕ ಅದನ್ನು ವಾಪಸ್ ಪಡೆದಿದೆ. ಆದ್ರೆ, ರಾಜ್ಯ ಸರ್ಕಾರ ಕೃಷಿ ಕಾಯ್ದೆ ವಾಪಸ್ ಪಡೆದಿಲ್ಲ. ಆದ್ರೆ, ಬಿಜೆಪಿಯವರು ತಂದಿರುವ ಕೃಷಿ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿ ಎಂದು ಕಿಡಿಕಾರಿದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟ: ಬಿಜೆಪಿಯ ಅಸ್ತ್ರಗಳನ್ನು ಬಿಚ್ಚಿಟ್ಟ ಅಶೋಕ್

ಈ ಹಿಂದೆ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬೆಂಬಲಿಸಿದ್ದರು. ಕಳೆದ ಅಧಿವೇಶನದಲ್ಲಿ ಸಚಿವ ಶಿವಾನಂದ ಪಾಟೀಲ್ ಕೃಷಿ ಕಾಯ್ದೆ ವಾಪಸ್ ಪಡೆಯುವ ಬಿಲ್ ಮಂಡಿಸಲು ಮುಂದಾದ್ರು. ಆಗ ವಿಪಕ್ಷದವರು ವಿರೋಧಿಸಿದ್ದರು. ಬಿಜೆಪಿಯವರು ತಂದಿರೋ ಕೃಷಿ ಕಾಯ್ದೆ ಯಥಾವತ್ತಾಗಿ ಜಾರಿಗೊಳಿಸಲು ಸರ್ಕಾದ ಮುಂದಾಗಿದೆ. ಬಿಜೆಪಿ ಜಾರಿ ತಂದ ಭೂಸುಧಾರಣಾ ಕಾಯ್ದೆಯನ್ನ ಅನುಷ್ಠಾನಗೊಳಿಸುವ ಕೆಲಸವನ್ನ ಕಾಂಗ್ರೆಸ್ ಅಚ್ಚುಕಟ್ಟಾಗಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಹೈನುಗಾರಿಕೆ ಯೋಜನೆಯಲ್ಲಿ ಸರ್ಕಾರ ರೈತರಿಂದ 4 ರೂಪಾಯಿ ಹಗಲು ದರೋಡೆ ಮಾಡುತ್ತಿದೆ. ಬರಗಾಲದಿಂದ ರೈತರು ತತ್ತರಿಸಿದ್ದರೂ ಈವರೆಗೂ ಪರಿಹಾರ ಬಂದಿಲ್ಲ. ಮೋದಿ ಸರ್ಕಾರ ರೈತರಿಗೆ 2 ಸಾವಿರ ಕೊಡುತ್ತಿತ್ತು. ಇದಕ್ಕೆ ರಾಜ್ಯ ಬಿಜೆಪಿ ಸರ್ಕಾರ 2 ಸಾವಿರ ಸೇರಿಸಿ ಕೊಡುತ್ತಿತ್ತು. ಆದ್ರೆ, ಈಗ ಕಾಂಗ್ರೆಸ್ ಸರ್ಕಾರ ಆ 2 ಸಾವಿರ ರೂಪಾಯಿ ಕಟ್ ಮಾಡಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಒಂದೇ ಒಂದು ರೈತ ಪರ ಯೋಜನೆ ಮಾಡಿಲ್ಲ.ಕಬ್ಬು ಬೆಳೆಗಾರರಿಗೆ ಈವರೆಗೂ ಸೂಕ್ತ ದರ ಸಿಗುತ್ತಿಲ್ಲ. ಯಾವುದೇ ಕಾರ್ಖಾನೆಗಳು ರೈತರಿಗೆ ಸೂಕ್ತ ದರ ನೀಡುತ್ತಿಲ್ಲ. ಹಾವೇರಿ ರೈತರಿಗೆ ಒಂದ ದರ, ಹುಬ್ಬಳ್ಳಿ ಧಾರವಾಡ, ಕಾರವಾರದ ರೈತರಿಗೆ ಮತ್ತೊಂದು ದರ ಕೊಡುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್