AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.4ರಂದು ಅಧಿವೇಶನದ ಮೊದಲ ದಿನವೇ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ: ಕೊಡಿಹಳ್ಳಿ ಚಂದ್ರಶೇಖರ್

ಡಿಸೆಂಬರ್ 4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಆದ್ರೆ, ಇತ್ತ ಕರ್ನಾಟಕ ರಾಜ್ಯ ರೈತ ಸಂಘ, ಅಧಿವೇಶನ ಆರಂಭದ ದಿನವೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಡಿ.4ರಂದು ಅಧಿವೇಶನದ ಮೊದಲ ದಿನವೇ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ: ಕೊಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
Sahadev Mane
| Edited By: |

Updated on: Dec 02, 2023 | 3:47 PM

Share

ಬೆಳಗಾವಿ, ಡಿಸೆಂಬರ್ 02): ಇದೇ ಡಿಸೆಂಬರ್ 4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ (Belagavi Winter Session) ಶುರುವಾಗಲಿದೆ. ಆದ್ರೆ, ಇತ್ತ ಕರ್ನಾಟಕ ರಾಜ್ಯ ರೈತ ಸಂಘ, ಅಧಿವೇಶನ ಆರಂಭದ ದಿನವೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್(Kodihalli chandrashekar), ಅಧಿವೇಶನದ ಮೊದಲ ದಿನ ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಹೋಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ.

ರೈತರ ವಿವಿಧ ಬೇಡಿಕೆ ಗಳ ಈಡೇರಿಸಲು ಒತ್ತಾಯಿಸಿ ಪಾದಯಾತ್ರೆ ಮೂಲಕ ತೆರಳಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಜಾರಿಗೊಳಿಸಿ ಬಳಿಕ ಅದನ್ನು ವಾಪಸ್ ಪಡೆದಿದೆ. ಆದ್ರೆ, ರಾಜ್ಯ ಸರ್ಕಾರ ಕೃಷಿ ಕಾಯ್ದೆ ವಾಪಸ್ ಪಡೆದಿಲ್ಲ. ಆದ್ರೆ, ಬಿಜೆಪಿಯವರು ತಂದಿರುವ ಕೃಷಿ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿ ಎಂದು ಕಿಡಿಕಾರಿದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟ: ಬಿಜೆಪಿಯ ಅಸ್ತ್ರಗಳನ್ನು ಬಿಚ್ಚಿಟ್ಟ ಅಶೋಕ್

ಈ ಹಿಂದೆ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬೆಂಬಲಿಸಿದ್ದರು. ಕಳೆದ ಅಧಿವೇಶನದಲ್ಲಿ ಸಚಿವ ಶಿವಾನಂದ ಪಾಟೀಲ್ ಕೃಷಿ ಕಾಯ್ದೆ ವಾಪಸ್ ಪಡೆಯುವ ಬಿಲ್ ಮಂಡಿಸಲು ಮುಂದಾದ್ರು. ಆಗ ವಿಪಕ್ಷದವರು ವಿರೋಧಿಸಿದ್ದರು. ಬಿಜೆಪಿಯವರು ತಂದಿರೋ ಕೃಷಿ ಕಾಯ್ದೆ ಯಥಾವತ್ತಾಗಿ ಜಾರಿಗೊಳಿಸಲು ಸರ್ಕಾದ ಮುಂದಾಗಿದೆ. ಬಿಜೆಪಿ ಜಾರಿ ತಂದ ಭೂಸುಧಾರಣಾ ಕಾಯ್ದೆಯನ್ನ ಅನುಷ್ಠಾನಗೊಳಿಸುವ ಕೆಲಸವನ್ನ ಕಾಂಗ್ರೆಸ್ ಅಚ್ಚುಕಟ್ಟಾಗಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಹೈನುಗಾರಿಕೆ ಯೋಜನೆಯಲ್ಲಿ ಸರ್ಕಾರ ರೈತರಿಂದ 4 ರೂಪಾಯಿ ಹಗಲು ದರೋಡೆ ಮಾಡುತ್ತಿದೆ. ಬರಗಾಲದಿಂದ ರೈತರು ತತ್ತರಿಸಿದ್ದರೂ ಈವರೆಗೂ ಪರಿಹಾರ ಬಂದಿಲ್ಲ. ಮೋದಿ ಸರ್ಕಾರ ರೈತರಿಗೆ 2 ಸಾವಿರ ಕೊಡುತ್ತಿತ್ತು. ಇದಕ್ಕೆ ರಾಜ್ಯ ಬಿಜೆಪಿ ಸರ್ಕಾರ 2 ಸಾವಿರ ಸೇರಿಸಿ ಕೊಡುತ್ತಿತ್ತು. ಆದ್ರೆ, ಈಗ ಕಾಂಗ್ರೆಸ್ ಸರ್ಕಾರ ಆ 2 ಸಾವಿರ ರೂಪಾಯಿ ಕಟ್ ಮಾಡಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಒಂದೇ ಒಂದು ರೈತ ಪರ ಯೋಜನೆ ಮಾಡಿಲ್ಲ.ಕಬ್ಬು ಬೆಳೆಗಾರರಿಗೆ ಈವರೆಗೂ ಸೂಕ್ತ ದರ ಸಿಗುತ್ತಿಲ್ಲ. ಯಾವುದೇ ಕಾರ್ಖಾನೆಗಳು ರೈತರಿಗೆ ಸೂಕ್ತ ದರ ನೀಡುತ್ತಿಲ್ಲ. ಹಾವೇರಿ ರೈತರಿಗೆ ಒಂದ ದರ, ಹುಬ್ಬಳ್ಳಿ ಧಾರವಾಡ, ಕಾರವಾರದ ರೈತರಿಗೆ ಮತ್ತೊಂದು ದರ ಕೊಡುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ