AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 2 ವರ್ಷಗಳ ಬಳಿಕ ಭರತ ಹುಣ್ಣಿಮೆ ಸಂಭ್ರಮ: 3 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿ

ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ಬೃಹತ್​ ಜಾತ್ರೆ ನಡೆಯಿತು. ಎತ್ತಿನಗಾಡಿ, ಕಾರು, ಬಸ್​ಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದರು.

ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 2 ವರ್ಷಗಳ ಬಳಿಕ ಭರತ ಹುಣ್ಣಿಮೆ ಸಂಭ್ರಮ: 3 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿ
ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಪಾಳಿಯಲ್ಲಿ ನಿಂತ ಭಕ್ತರು.
TV9 Web
| Edited By: |

Updated on: Feb 16, 2022 | 10:07 PM

Share

ಬೆಳಗಾವಿ: ಸವದತ್ತಿ ಪಟ್ಟಣದ ಹೊರವಲಯದಲ್ಲಿರುವ ಯಲ್ಲಮ್ಮ ದೇವಸ್ಥಾನದಲ್ಲಿ ಎರಡು ವರ್ಷಗಳ ಬಳಿಕ ಬುಧವಾರ (ಫೆ 16) ಭರತ ಹುಣ್ಣಿಮೆ ಸೇವೆ ಸಡಗರ ಸಂಭ್ರಮದಿಂದ ನಡೆಯಿತು. ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ನೆರೆಯ ಮಹಾರಾಷ್ಟ್ರ ಮತ್ತು ಗೋವಾದಿಂದ ಭಕ್ತರು ಬೃಹತ್ ಸಂಖ್ಯೆಯಲ್ಲಿ ಆಗಮಿಸಿದ್ದರು. ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ಬೃಹತ್​ ಜಾತ್ರೆ ನಡೆಯಿತು. ಎತ್ತಿನಗಾಡಿ, ಕಾರು, ಬಸ್​ಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದರು. ಉಗರಗೋಳ, ಜೋಗುಳಬಾವಿ, ನೂಲಿನ ಗಿರಣಿ ಮಾರ್ಗದಲ್ಲಿ ಬ್ಯಾರಿಕೇಡ್​ ಹಾಕಿ ಪೊಲೀಸರು ಜನದಟ್ಟಣೆ ನಿಯಂತ್ರಿಸಿದರು. 55 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

ಪ್ರತಿವರ್ಷವೂ ಭರತ ಹುಣ್ಣಿಮೆ ಎಂದರೆ ಶ್ರೀ ಕ್ಷೇತ್ರ ಯಲ್ಲಮ್ಮ ದೇವಸ್ಥಾನದಲ್ಲಿ ಜಾತ್ರೆಯ ಸಂಭ್ರಮ ಮನೆ ಮಾಡುವುದು ವಾಡಿಕೆ. ಭರತ ಹುಣ್ಣಿಮೆ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ಮಾತ್ರ ಅವಕಾಶವಿತ್ತು. ಕೊರೊನಾ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಭರತ ಹುಣ್ಣಿಮೆ ಪ್ರಯುಕ್ತ ನಡೆಯಬೇಕಿದ್ದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದಿರಲಿಲ್ಲ. ಕಳೆದ ವರ್ಷವೂ ಜನರ ಪ್ರವೇಶಕ್ಕೆ ನಿರ್ಬಂಧವಿತ್ತು. ಅಕ್ಕಪಕ್ಕದ ವಿವಿಧ ರಾಜ್ಯಗಳಿಂದಲೂ ಭಕ್ತರು ಶ್ರೀಕ್ಷೇತ್ರಕ್ಕೆ ಬಂದಿದ್ದರು. ಆದರೆ ದೇವಿಯ ದರ್ಶನ ಹೊರತುಪಡಿಸಿ ಬೇರೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಇರಲಿಲ್ಲ.

ಎತ್ತಿನಗಾಡಿಗಳ ಮೂಲಕವೇ ಭಕ್ತರು ಕ್ಷೇತ್ರಕ್ಕೆ ಬಂದು ಬಿಡಾರ ಹೂಡಿದ್ದರು. ಭಕ್ತರು ಒಲೆ ಹೂಡಿ ತಾವು ತಂದ ಅಡುಗೆ ಪದಾರ್ಥಗಳಿಂದ ಕ್ಷೇತ್ರದ ಆವರಣದಲ್ಲಿಯೇ ಕರಿಕಡಬು, ತರಕಾರಿ ಅನ್ನ ಸೇರಿದಂತೆ ಅಡುಗೆ ಮಾಡಿಕೊಂಡ ಪಡ್ಡಲಗಿ ಮೂಲಕ ನೈವೇದ್ಯ ಅರ್ಪಿಸಿದರು. ಕರ್ಪೂರದ ಆರತಿ ಬೆಳಗಿ ದೇವಿಯ ದರ್ಶನ ಪಡೆದು, ಕೈಮುಗಿದು ನಮಿಸಿದರು. ಕುಂಕುಮವನ್ನೇ ಭಂಡಾರವೆಂದು ಪ್ರಸಾದವಾಗಿ ನೀಡುವುದು ಯಲ್ಲಮ್ಮ ದೇಗುಲವ ವಿಶೇಷ. ಕಳೆದ ಎರಡು ವರ್ಷಗಳಿಂದ ದೇಗುಲ ಆವರಣದಲ್ಲಿ ಜಾತ್ರೆ ನಡೆಯದ ಕಾರಣ ದೇಗುಲ ಆವರಣದ ವ್ಯಾಪಾರಿಗಳು ಕಳಾಹೀನರಾಗಿದ್ದರು. ದೇಗುಲದ ಆದಾಯವೂ ಕುಸಿದಿತ್ತು. ಆದರೆ ಈ ಬಾರಿ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ವ್ಯಾಪಾರಿಗಳು ಉತ್ತಮ ವ್ಯಾಪಾರ ಆಗಬಹುದು ಎಂಬ ನಿರೀಕ್ಷೆ ಇರಿಸಿಕೊಂಡಿದ್ದಾರೆ.

ರೇಣುಕಾ ಯಲ್ಲಮ್ಮ ದೇಗುಲದ ಹುಂಡಿಯಲ್ಲಿ ಸೌದಿ ಅರೇಬಿಯಾದ ನೋಟು ಪತ್ತೆ

ಸವದತ್ತಿ ಪಟ್ಟಣದ ಹೊರವಲಯದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿಯಲ್ಲಿ 1.18 ಕೋಟಿ ಹಣ, ₹17 ಲಕ್ಷ ಮೌಲ್ಯದ ಚಿನ್ನ, ₹2 ಲಕ್ಷ ಮೌಲ್ಯದ ಬೆಳ್ಳಿ ಸಂಗ್ರಹ; ಹುಂಡಿಯಲ್ಲಿ ಬ್ಯಾನ್ ಆಗಿರುವ ನೋಟ್‌ಗಳು, ವಿದೇಶಿ ಕರೆನ್ಸಿ ಕೂಡ ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿ ಎಣಿಕೆ. ಈ ಬಾರಿಯೂ ಹುಂಡಿ ಎಣಿಕೆಯಲ್ಲಿ ದಾಖಲೆ ಮೊತ್ತದ ಹಣ ಸಂಗ್ರಹ. ಯಲ್ಲಮ್ಮನ ಹುಂಡಿಯಲ್ಲಿ ಸೌದಿ ಅರೇಬಿಯಾದ ಒಂದು ಕರೆನ್ಸಿ ನೋಟು ಪತ್ತೆ. 1.18ಕೋಟಿ ರೂ., 17ಲಕ್ಷ ಮೌಲ್ಯದ ಚಿನ್ನ, 2ಲಕ್ಷ ಮೌಲ್ಯದ ಬೆಳ್ಳಿ ಸಂಗ್ರಹ.

ಬೆಳಗಾವಿಯ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿ ಎಣಿಕೆ. ಈ ಬಾರಿಯೂ ಹುಂಡಿ ಎಣಿಕೆಯಲ್ಲಿ ದಾಖಲೆ ಮೊತ್ತದ ಹಣ ಸಂಗ್ರಹ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ಯಲ್ಲಮ್ಮನ ಗುಡ್ಡ. ಯಲ್ಲಮ್ಮನ ಹುಂಡಿಯಲ್ಲಿ ಸೌದಿ ಅರೇಬಿಯಾದ ಒಂದು ಕರೆನ್ಸಿ ನೋಟು ಸೇರಿ. ಬ್ಯಾನ್ ಆದ ಐದನೂರು, ಸಾವಿರ ಮುಖ ಬೆಲೆಯ ನೋಟು ಹುಂಡಿಗೆ ಹಾಕಿರುವ ಭಕ್ತರು. ನವೆಂಬರ್ 2021ರಲ್ಲಿ 1.18 ಕೋಟಿ ಹಣ, 17 ಲಕ್ಷ ಮೌಲ್ಯದ ಚಿನ್ನ, 2 ಲಕ್ಷ ಮೌಲ್ಯದ ಬೆಳ್ಳಿ ಸಂಗ್ರಹಗೊಂಡಿದೆ. ಇಂದಿನಿಂದ ಭಕ್ತರಿಗೆ ಯಲ್ಲಮ್ಮ ದೇವಿ ದರ್ಶನಕ್ಕೆ ನಿಷೇಧವಿದೆ.

ಇದನ್ನೂ ಓದಿ: ಸವದತ್ತಿ ಯಲ್ಲಮ್ಮನ ಕ್ಷೇತ್ರದ ಭಕ್ತಾದಿಗಳ ಬಹುದಿನಗಳ ಬೇಡಿಕೆಗೆ ಸ್ಪಂದನೆ; ಸಾರಿಗೆ ಇಲಾಖೆಯಿಂದ ಬಸ್ ವ್ಯವಸ್ಥೆ

ಇದನ್ನೂ ಓದಿ: Temple Tour: ಸಂತಾನ ಭಾಗ್ಯ ಕರುಣಿಸುವ ತಾಯಿ ಸವದತ್ತಿ ಯಲ್ಲಮ್ಮ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ