AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಉದ್ಯಮಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಉದ್ಯಮಿ ವಿರುದ್ಧ 2 ಕೋಟಿ ವಂಚನೆ ಆರೋಪ

ಉದ್ಯಮಿ ರವಿಕಿರಣ್ ಭಟ್ ಬಿಟ್ ಕಾಯಿನ್ನಲ್ಲಿ ಹೂಡಿಕೆ ಮಾಡಿ ಹಣ ದ್ವಿಗುಣ ಮಾಡಿಕೊಡುತ್ತೇನೆ ಅಂತಾ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಮಹಾರಾಷ್ಟ್ರದ ಸಾಂಗ್ಲಿಯ ಕರಮಾಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬೆಳಗಾವಿ ಉದ್ಯಮಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಉದ್ಯಮಿ ವಿರುದ್ಧ 2 ಕೋಟಿ ವಂಚನೆ ಆರೋಪ
ಉದ್ಯಮಿ ರವಿಕಿರಣ್ ಭಟ್, ಖಾಸಗಿ ಬ್ಯಾಂಕ್​ನ ಮಾಜಿ ಮ್ಯಾನೇಜರ್
TV9 Web
| Edited By: sandhya thejappa|

Updated on:Feb 02, 2022 | 8:47 AM

Share

ಬೆಳಗಾವಿ: ಜಿಲ್ಲೆಯಲ್ಲಿ ನಡೆದ ಉದ್ಯಮಿ ಕಿಡ್ನಾಪ್ (Kidnap) ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಿಡ್ನಾಪ್ ಪ್ರಕರಣಕ್ಕೂ, ಬಿಟ್ ಕಾಯಿನ್ (bitcoin) ದಂಧೆಗೂ ಸಂಬಂಧವಿದೆಯಾ ಎಂಬ ಅನುಮಾನ ಮೂಡಿದ್ದು, ಕಿಡ್ನಾಪ್ ಆಗಿದ್ದ ಉದ್ಯಮಿ ರವಿಕಿರಣ್ ಭಟ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮಹಾರಾಷ್ಟ್ರದ (Maharashtra) ಸಾಂಗ್ಲಿಯ ಖಾಸಗಿ ಬ್ಯಾಂಕ್​ನ ಮಾಜಿ ಮ್ಯಾನೇಜರ್ ಆರೋಪಿಸಿ, ಎರಡು ಕೋಟಿ ರೂಪಾಯಿ ಪಡೆದು ವಂಚನೆ ಮಾಡಿದ್ದಾರೆ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಉದ್ಯಮಿ ರವಿಕಿರಣ್ ಭಟ್ ಬಿಟ್ ಕಾಯಿನ್​ನಲ್ಲಿ ಹೂಡಿಕೆ ಮಾಡಿ ಹಣ ದ್ವಿಗುಣ ಮಾಡಿಕೊಡುತ್ತೇನೆ ಅಂತಾ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಮಹಾರಾಷ್ಟ್ರದ ಸಾಂಗ್ಲಿಯ ಕರಮಾಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಲ್ಲದೇ ಕಿಡ್ನಾಪ್ ಮಾಡಿದ್ದ ಪ್ರಮುಖ ಆರೋಪಿಗಳು ಸಾಂಗ್ಲಿ ಮೂಲದವರು. ಆದರೆ ಘಟನೆ ನಡೆದು ಹದಿನೈದು ದಿನ ಕಳೆದರೂ ಆರೋಪಿಗಳ ಸುಳಿವಿಲ್ಲ.

ಸಾಂಗ್ಲಿಯ ಶಹನವಾಜ್ ಚಮನಶೇಖ್, ಅಜ್ಜು ಚಮನಶೇಖ್, ಅಭಿಷೇಕ ಶೆಟ್ಟಿ ಹಾಗೂ ಬೆಳಗಾವಿಯ ಯೂನೂಸ್ ಖಾಜಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪ್ರಕರಣದ ಪ್ರಮುಖ ಆರೋಪಿ ಶಹನವಾಜ್ ಹಾಗೂ ಉದ್ಯಮಿ ರವಿಕಿರಣ್ ಭಟ್ ಇಬ್ಬರೂ ಪರಿಚಯಸ್ಥರು. ರವಿಕಿರಣ್​ಗೆ ರಾಜ್ಯದಲ್ಲಿ ಪ್ರಭಾವಿ ನಾಯಕರ ಸಂಪರ್ಕ ಇರುವ ಹಿನ್ನೆಲೆ ಪೊಲೀಸರು ರವಿಕಿರಣ್ ಭಟ್ನ ವಿಚಾರಣೆ ಮಾಡಿಲ್ಲ ಎಂದು ಹೇಳಲಾಗುತ್ತಿದೆ. ಸದ್ಯ ಉದ್ಯಮಿ ರವಿಕಿರಣ್ ಭಟ್ ಅಪಹರಣ ಪ್ರಕರಣ ಸುತ್ತ ಹಲವು ಸಂಶಯಗಳು ಮೂಡಿವೆ.

ಮೂರು ಕೋಟಿಗೆ ಬೇಡಿಕೆ: ಆರೋಪಿಗಳು ಬೆಳಗಾವಿ ಕೆಎಲ್ಇ ಆಸ್ಪತ್ರೆ ಬಳಿ ಕಾರನ್ನು ತಡೆದಿದ್ದಾರೆ. ಬೈಕ್​ಗೆ ಕಾರು ಟಚ್ ಮಾಡಿ ಎಸ್ಕೇಪ್ ಆಗುತ್ತಿದ್ದೀಯ ಅಂತಾ ನಾಲ್ವರು ವಾಗ್ವಾದ ನಡೆಸಿದ್ದರು. ರವಿಕಿರಣ್ ಜತೆ ಜಗಳವಾಡಿ ಮೂವರು ಕಾರಿನಲ್ಲಿ ಹತ್ತಿದ್ದರು. ಬಳಿಕ ಹಿಂಬದಿಯಿಂದ ರಿವಾಲ್ವರ್ ತೋರಿಸಿ ನಾವು ಹೇಳಿದ ಕಡೆ ಕಾರು ಚಾಲನೆ ಮಾಡುವಂತೆ ಬೆದರಿಕೆ ಹಾಕಿದ್ದಾರೆ. ಅಲ್ಲಿಂದ ನೇರವಾಗಿ ಖಾನಾಪುರ ಬಳಿ ಕೋಳಿ ಫಾರ್ಮ್​ಗೆ ಕರೆದೊಯ್ದಿದ್ದಾರೆ.

ಬಂಧಿತರು ರವಿಕಿರಣ್ನಣ್​ನ ಕುರ್ಚಿ ಮೇಲೆ ಕೂರಿಸಿ ಕೈ, ಕಾಲು ಕಟ್ಟಿ ಹೊಡೆದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಬಳಿಕ ಆತನ ಬಳಿ ಇದ್ದ 55 ಸಾವಿರ ನಗದು, ಆ್ಯಪಲ್ ವಾಚ್, ಮೊಬೈಲ್, ಚಿನ್ನ ಹಾಗೂ ಬೆಳ್ಳಿಯ ನಾಣ್ಯ, 75 ಸಾವಿರ ಮೌಲ್ಯದ ಯುಎಸ್ ಕರೆನ್ಸಿ ಕಿತ್ತುಕೊಂಡಿದ್ದರು. ಬಳಿಕ ರವಿಕಿರಣ್ ಮೊಬೈಲ್​ನಿಂದ ಪತ್ನಿಗೆ ಕರೆ ಮಾಡಿ 3 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ

ಕೈ ತುಂಬ ಸಂಬಳ ತರುವ ಕೆಲಸ ಬಿಟ್ಟು ಒಂದು ವರ್ಷದಲ್ಲಿ ಏಕಾಂಗಿಯಾಗಿ ಬಾವಿ ತೋಡಿ ಬಂಗಾರ ಬೆಳೆದ ಎಂಟೆಕ್ ಪದವೀಧರ!

Horoscope Today- ದಿನ ಭವಿಷ್ಯ; ಈ ರಾಶಿಯವರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ನೀವು ಉತ್ತಮ ಲಾಭ ಗಳಿಸುವಿರಿ

Published On - 8:43 am, Wed, 2 February 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ