AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಗೂ ಕಾಲಿಟ್ಟ ಮಸೀದಿ – ಮಂದಿರ ವಿವಾದ; ನ್ಯಾಯ ಸಿಗುವವರೆಗೂ ಸುಮ್ಮನೆ ಕೂರಲ್ಲ ಎಂದ ಬಿಜೆಪಿ ಶಾಸಕ ಅಭಯ್ ಪಾಟೀಲ್

ಶಾಹಿ ಮಸೀದಿ ಬಗ್ಗೆ ಕಲೆ ಹಾಕುತ್ತಿದ್ದೇನೆ ಎಂದು ತಿಳಿಸಿದ ಶಾಸಕ ಅಭಯ್ ಪಾಟೀಲ್, ಶಾಹಿ ಮಸೀದಿ ಸರ್ವೆ ಮಾಡುವಂತೆ ಬೆಳಗಾವಿ ಡಿಸಿಗೆ ಹೇಳಿದ್ದೇನೆ. ಶಾಹಿ ಮಸೀದಿ ಪಕ್ಕದಲ್ಲಿ ಹನುಮಾನ್ ಮಂದಿರವಿದೆ.

ಬೆಳಗಾವಿಗೂ ಕಾಲಿಟ್ಟ ಮಸೀದಿ - ಮಂದಿರ ವಿವಾದ; ನ್ಯಾಯ ಸಿಗುವವರೆಗೂ ಸುಮ್ಮನೆ ಕೂರಲ್ಲ ಎಂದ ಬಿಜೆಪಿ ಶಾಸಕ ಅಭಯ್ ಪಾಟೀಲ್
ಶಾಹಿ ಮಸೀದಿ ಒಳಗೆ ದೇವಸ್ಥಾನದ ಕಂಬ ಇರುವಂತೆ ಗೋಚರವಾಗುತ್ತಿದೆ
TV9 Web
| Edited By: |

Updated on:May 29, 2022 | 8:40 AM

Share

ಬೆಳಗಾವಿ: ಮಂಗಳೂರು ಮಳಲಿ ಮಸೀದಿ (Malali Masjid) ಬಳಿ ಮಂದಿರವಿದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಜಿಲ್ಲೆಗೂ ಮಸೀದಿ ವರ್ಸಸ್ ಮಂದಿರ ವಿವಾದ ಕಾಲಿಟ್ಟಿದೆ. ರಾಮದೇವ ಗಲ್ಲಿಯ ಶಾಹಿ ಮಸೀದಿ ಈ ಹಿಂದೆ ಮಂದಿರವಾಗಿತ್ತು ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ (MLA Abhay Patil) ಹೇಳಿಕೆ ನೀಡಿದ್ದಾರೆ. ಶಾಹಿ ಮಸೀದಿಯಲ್ಲಿ ದೇಗುಲದ ಗರ್ಭಗುಡಿಯ ಬಾಗಿಲು ಇದೆ. ಸಣ್ಣ ಬಾಗಿಲು ದೇವಸ್ಥಾನಗಳ ಹೊರತು ಬೇರೆ ಕಡೆ ಇರುವುದಿಲ್ಲ. ದೇವಾಲಯವನ್ನು ಶಾಹಿ ಮಸೀದಿಯಾಗಿ ಪರಿವರ್ತಿಸಲಾಗಿದೆ. ಶಾಹಿ ಮಸೀದಿ ಬಗ್ಗೆ ಹಿರಿಯರು ನನ್ನ ಗಮನಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.

ಶಾಹಿ ಮಸೀದಿ ಬಗ್ಗೆ ಕಲೆ ಹಾಕುತ್ತಿದ್ದೇನೆ ಎಂದು ತಿಳಿಸಿದ ಶಾಸಕ ಅಭಯ್ ಪಾಟೀಲ್, ಶಾಹಿ ಮಸೀದಿ ಸರ್ವೆ ಮಾಡುವಂತೆ ಬೆಳಗಾವಿ ಡಿಸಿಗೆ ಹೇಳಿದ್ದೇನೆ. ಶಾಹಿ ಮಸೀದಿ ಪಕ್ಕದಲ್ಲಿ ಹನುಮಾನ್ ಮಂದಿರವಿದೆ. ಹನುಮಾನ್ ಮಂದಿರದ ಪಕ್ಕದಲ್ಲಿದ್ದ ದೇಗುಲದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗಳನ್ನ ಭೇಟಿ ಮಾಡುತ್ತೇನೆ. ಶಾಹಿ ಮಸೀದಿ ಸರ್ವೆ ಮಾಡಿ ವರದಿ ನೀಡುವಂತೆ ಹೇಳುತ್ತೇನೆ. ಶಾಹಿ ಮಸೀದಿ ಬಗ್ಗೆ ಎಲ್ಲಾ ಸಂಘಟನೆಗಳ ಗಮನಕ್ಕೂ ತರುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Trending: ಸ್ಟೋನ್‌ಹೆಂಜ್ ನಿರ್ಮಿಸಿದ ಜನರು ತಿನ್ನುತ್ತಿದ್ದ ಪರಾವಲಂಬಿ ಹುಳುಗಳ ಮೊಟ್ಟೆಗಳನ್ನು ಪತ್ತೆಹಚ್ಚಿದ ಪುರಾತತ್ತ್ವ ಶಾಸ್ತ್ರಜ್ಞರು

ಇದನ್ನೂ ಓದಿ
Image
Mango Recipe: ಕೇವಲ ಹತ್ತೇ ನಿಮಿಷದಲ್ಲಿ ಮಾವಿನ ಹಣ್ಣಿನಿಂದ ಈ ರೆಸಿಪಿ ಮಾಡಿ
Image
Literature: ಅನುಸಂಧಾನ; ‘ನನ್ನ ಕತೆಗಳಲ್ಲಿ ಈ ದೇಹ ಆನಂದದ ತಾಣವಾಗುವ ಬಗೆಯನ್ನು ತೋರಿಸಲು ಬಯಸುತ್ತೇನೆ’ ಬೆಲ್ ಆಲಿಡ್
Image
ಪಾರ್ಟಿಯಲ್ಲಿ ಸಲ್ಮಾನ್​ ಖಾನ್​ ಕಂಡು ಗಂಡನಿಂದಲೇ ಅಂತರ ಕಾಯ್ದುಕೊಂಡ ಐಶ್ವರ್ಯಾ ರೈ?
Image
Lay Offs: ಮೇ ತಿಂಗಳಲ್ಲಿ ಜಾಗತಿಕವಾಗಿ 15000 ಟೆಕ್ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್

ಎಲ್ಲಾ ಪ್ರಮುಖರ ಜತೆ ಜಿಲ್ಲಾಧಿಕಾರಿಗಳನ್ನ ಭೇಟಿ ಮಾಡುತ್ತೇನೆ. ಸತ್ಯ ಹೊರಬಂದು ನ್ಯಾಯ ಸಿಗುವವರೆಗೂ ಸುಮ್ಮನೆ ಕೂರಲ್ಲ ಅಂತನೂ ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಹಿಂದೂ ಸಂಘಟನೆಗಳ ಗಮನಕ್ಕೆ ತಂದು ಮಾಡಬೇಕಾಗುತ್ತೆ ಒಬ್ಬ ವ್ಯಕ್ತಿಯಿಂದ ಇದನ್ನ ಮಾಡುವುದಕ್ಕೆ ಆಗಲ್ಲ. ನಾನೊಬ್ಬನೆ ಡಿಸಿ ಬಳಿ ಹೋಗಲ್ಲ. ಜಿಲ್ಲಾಡಳಿತ ನಾವು ಸರ್ವೇ ಮಾಡುವುದಿಲ್ಲ ಅಂದರೆ ಆ ನಂತರ ಉಳಿದ ಪ್ರಶ್ನೆಗಳಿಗೆ ಉತ್ತರ ಬರುತ್ತದೆ ಎಂದು ಅಭಯ್ ಪಾಟೀಲ್ ಹೇಳಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:34 am, Sun, 29 May 22

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ