AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಗೂ ಕಾಲಿಟ್ಟ ಮಸೀದಿ – ಮಂದಿರ ವಿವಾದ; ನ್ಯಾಯ ಸಿಗುವವರೆಗೂ ಸುಮ್ಮನೆ ಕೂರಲ್ಲ ಎಂದ ಬಿಜೆಪಿ ಶಾಸಕ ಅಭಯ್ ಪಾಟೀಲ್

ಶಾಹಿ ಮಸೀದಿ ಬಗ್ಗೆ ಕಲೆ ಹಾಕುತ್ತಿದ್ದೇನೆ ಎಂದು ತಿಳಿಸಿದ ಶಾಸಕ ಅಭಯ್ ಪಾಟೀಲ್, ಶಾಹಿ ಮಸೀದಿ ಸರ್ವೆ ಮಾಡುವಂತೆ ಬೆಳಗಾವಿ ಡಿಸಿಗೆ ಹೇಳಿದ್ದೇನೆ. ಶಾಹಿ ಮಸೀದಿ ಪಕ್ಕದಲ್ಲಿ ಹನುಮಾನ್ ಮಂದಿರವಿದೆ.

ಬೆಳಗಾವಿಗೂ ಕಾಲಿಟ್ಟ ಮಸೀದಿ - ಮಂದಿರ ವಿವಾದ; ನ್ಯಾಯ ಸಿಗುವವರೆಗೂ ಸುಮ್ಮನೆ ಕೂರಲ್ಲ ಎಂದ ಬಿಜೆಪಿ ಶಾಸಕ ಅಭಯ್ ಪಾಟೀಲ್
ಶಾಹಿ ಮಸೀದಿ ಒಳಗೆ ದೇವಸ್ಥಾನದ ಕಂಬ ಇರುವಂತೆ ಗೋಚರವಾಗುತ್ತಿದೆ
Follow us
TV9 Web
| Updated By: sandhya thejappa

Updated on:May 29, 2022 | 8:40 AM

ಬೆಳಗಾವಿ: ಮಂಗಳೂರು ಮಳಲಿ ಮಸೀದಿ (Malali Masjid) ಬಳಿ ಮಂದಿರವಿದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಜಿಲ್ಲೆಗೂ ಮಸೀದಿ ವರ್ಸಸ್ ಮಂದಿರ ವಿವಾದ ಕಾಲಿಟ್ಟಿದೆ. ರಾಮದೇವ ಗಲ್ಲಿಯ ಶಾಹಿ ಮಸೀದಿ ಈ ಹಿಂದೆ ಮಂದಿರವಾಗಿತ್ತು ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ (MLA Abhay Patil) ಹೇಳಿಕೆ ನೀಡಿದ್ದಾರೆ. ಶಾಹಿ ಮಸೀದಿಯಲ್ಲಿ ದೇಗುಲದ ಗರ್ಭಗುಡಿಯ ಬಾಗಿಲು ಇದೆ. ಸಣ್ಣ ಬಾಗಿಲು ದೇವಸ್ಥಾನಗಳ ಹೊರತು ಬೇರೆ ಕಡೆ ಇರುವುದಿಲ್ಲ. ದೇವಾಲಯವನ್ನು ಶಾಹಿ ಮಸೀದಿಯಾಗಿ ಪರಿವರ್ತಿಸಲಾಗಿದೆ. ಶಾಹಿ ಮಸೀದಿ ಬಗ್ಗೆ ಹಿರಿಯರು ನನ್ನ ಗಮನಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.

ಶಾಹಿ ಮಸೀದಿ ಬಗ್ಗೆ ಕಲೆ ಹಾಕುತ್ತಿದ್ದೇನೆ ಎಂದು ತಿಳಿಸಿದ ಶಾಸಕ ಅಭಯ್ ಪಾಟೀಲ್, ಶಾಹಿ ಮಸೀದಿ ಸರ್ವೆ ಮಾಡುವಂತೆ ಬೆಳಗಾವಿ ಡಿಸಿಗೆ ಹೇಳಿದ್ದೇನೆ. ಶಾಹಿ ಮಸೀದಿ ಪಕ್ಕದಲ್ಲಿ ಹನುಮಾನ್ ಮಂದಿರವಿದೆ. ಹನುಮಾನ್ ಮಂದಿರದ ಪಕ್ಕದಲ್ಲಿದ್ದ ದೇಗುಲದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗಳನ್ನ ಭೇಟಿ ಮಾಡುತ್ತೇನೆ. ಶಾಹಿ ಮಸೀದಿ ಸರ್ವೆ ಮಾಡಿ ವರದಿ ನೀಡುವಂತೆ ಹೇಳುತ್ತೇನೆ. ಶಾಹಿ ಮಸೀದಿ ಬಗ್ಗೆ ಎಲ್ಲಾ ಸಂಘಟನೆಗಳ ಗಮನಕ್ಕೂ ತರುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Trending: ಸ್ಟೋನ್‌ಹೆಂಜ್ ನಿರ್ಮಿಸಿದ ಜನರು ತಿನ್ನುತ್ತಿದ್ದ ಪರಾವಲಂಬಿ ಹುಳುಗಳ ಮೊಟ್ಟೆಗಳನ್ನು ಪತ್ತೆಹಚ್ಚಿದ ಪುರಾತತ್ತ್ವ ಶಾಸ್ತ್ರಜ್ಞರು

ಇದನ್ನೂ ಓದಿ
Image
Mango Recipe: ಕೇವಲ ಹತ್ತೇ ನಿಮಿಷದಲ್ಲಿ ಮಾವಿನ ಹಣ್ಣಿನಿಂದ ಈ ರೆಸಿಪಿ ಮಾಡಿ
Image
Literature: ಅನುಸಂಧಾನ; ‘ನನ್ನ ಕತೆಗಳಲ್ಲಿ ಈ ದೇಹ ಆನಂದದ ತಾಣವಾಗುವ ಬಗೆಯನ್ನು ತೋರಿಸಲು ಬಯಸುತ್ತೇನೆ’ ಬೆಲ್ ಆಲಿಡ್
Image
ಪಾರ್ಟಿಯಲ್ಲಿ ಸಲ್ಮಾನ್​ ಖಾನ್​ ಕಂಡು ಗಂಡನಿಂದಲೇ ಅಂತರ ಕಾಯ್ದುಕೊಂಡ ಐಶ್ವರ್ಯಾ ರೈ?
Image
Lay Offs: ಮೇ ತಿಂಗಳಲ್ಲಿ ಜಾಗತಿಕವಾಗಿ 15000 ಟೆಕ್ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್

ಎಲ್ಲಾ ಪ್ರಮುಖರ ಜತೆ ಜಿಲ್ಲಾಧಿಕಾರಿಗಳನ್ನ ಭೇಟಿ ಮಾಡುತ್ತೇನೆ. ಸತ್ಯ ಹೊರಬಂದು ನ್ಯಾಯ ಸಿಗುವವರೆಗೂ ಸುಮ್ಮನೆ ಕೂರಲ್ಲ ಅಂತನೂ ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಹಿಂದೂ ಸಂಘಟನೆಗಳ ಗಮನಕ್ಕೆ ತಂದು ಮಾಡಬೇಕಾಗುತ್ತೆ ಒಬ್ಬ ವ್ಯಕ್ತಿಯಿಂದ ಇದನ್ನ ಮಾಡುವುದಕ್ಕೆ ಆಗಲ್ಲ. ನಾನೊಬ್ಬನೆ ಡಿಸಿ ಬಳಿ ಹೋಗಲ್ಲ. ಜಿಲ್ಲಾಡಳಿತ ನಾವು ಸರ್ವೇ ಮಾಡುವುದಿಲ್ಲ ಅಂದರೆ ಆ ನಂತರ ಉಳಿದ ಪ್ರಶ್ನೆಗಳಿಗೆ ಉತ್ತರ ಬರುತ್ತದೆ ಎಂದು ಅಭಯ್ ಪಾಟೀಲ್ ಹೇಳಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:34 am, Sun, 29 May 22

ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್