AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಮತ್ತೆ ಬಿಜೆಪಿ ನಾಯಕರ ಜನಸಂಕಲ್ಪ ಯಾತ್ರೆ: ನ.9ರಂದು ಬೆಳಗಾವಿಯ ಮೂರು ಕಡೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ

ಎರಡನೇ ಹಂತದ ಜನ ಸಂಪರ್ಕ ಸಭೆ ಬೆಳಗಾವಿ ಜಿಲ್ಲೆಯಲ್ಲಿ 9ರಂದು ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಮೂರು ಕಡೆಗಳಲ್ಲಿ ಸಭೆ ನಡೆಯಲಿದೆ.

ಇಂದಿನಿಂದ ಮತ್ತೆ ಬಿಜೆಪಿ ನಾಯಕರ ಜನಸಂಕಲ್ಪ ಯಾತ್ರೆ: ನ.9ರಂದು ಬೆಳಗಾವಿಯ ಮೂರು ಕಡೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ
ಬಸವರಾಜ ಬೊಮ್ಮಾಯಿ, ಸಿಎಮ್
TV9 Web
| Updated By: ಆಯೇಷಾ ಬಾನು|

Updated on:Nov 07, 2022 | 8:03 AM

Share

ಬೆಳಗಾವಿ: ಇಂದಿನಿಂದ ಮತ್ತೆ ಬಿಜೆಪಿ ಜನಸಂಕಲ್ಪ(Jana Sankalpa Yatra) ಯಾತ್ರೆ ಆರಂಭವಾಗಲಿದೆ. ಉಡುಪಿ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai), ಬಿಎಸ್ ಯಡಿಯೂರಪ್ಪ(BS Yediyurappa) ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ. ನ.8ರಿಂದ 11ರವರೆಗೆ ಕಲಬುರಗಿ, ಸಿಂದಗಿ, ದಾವಣಗೆರೆ, ತುಮಕೂರಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯಲ್ಲಿ ಅರುಣ್​ ಸಿಂಗ್​ ಭಾಗಿಯಾಗಲಿದ್ದಾರೆ.

ಇನ್ನು ಎರಡನೇ ಹಂತದ ಜನ ಸಂಪರ್ಕ ಸಭೆ ಬೆಳಗಾವಿ ಜಿಲ್ಲೆಯಲ್ಲಿ 9ರಂದು ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಮೂರು ಕಡೆಗಳಲ್ಲಿ ಸಭೆ ನಡೆಯಲಿದೆ. ಇದಾದ ಬಳಿಕ ಹೆಲಿಕಾಪ್ಟರ್ ಮೂಲಕ ಎರಡು ಗಂಟೆಗೆ ರಾಯಭಾಗಕ್ಕೆ ತೆರಳಿ ಅಲ್ಲಿ ಜನ ಸಂಪರ್ಕ ಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಇದೇ ದಿನ ಸಂಜೆ ಖಾನಾಪುರ ಪಟ್ಟಣದಲ್ಲಿ ಸಭೆ ನಡೆಯಲಿದ್ದು ಬಿಜೆಪಿ ನಾಯಕರೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಒಂದೇ ದಿನ ಮೂರು ಕಡೆ ಸಭೆ ಮಾಡುವುದರ ಮೂಲಕ ಜಿಲ್ಲೆಯ ಬಿಜೆಪಿ ಕಾರ್ಯಕರ್ತರನ್ನ ಒಗ್ಗೂಡಿಸಿ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸಿಎಂ ಸಂದೇಶ ನೀಡಲಿದ್ದಾರೆ. ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡಿದ ಕಾರ್ಯಗಳು, ಯೋಜನೆಗಳನ್ನ ಜನರಿಗೆ ತಲುಪಿಸುವ ಸೂಚನೆ ಕೂಡ ನೀಡಲಿದ್ದಾರೆ. ಇನ್ನೂ ಜನ ಸಂಪರ್ಕ ಸಭೆಗೆ ಜಿಲ್ಲೆಯ ನಾಯಕರು ಕೂಡ ಈಗಾಗಲೇ ಸಿದ್ದತೆಯನ್ನ ನಡೆಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾರ್ಯದಲ್ಲಿ ಆಯುಷ್ಯ ವೃದ್ಧಿ, ಕ್ಯಾನ್ಸರ್ ರೋಗಿಯಲ್ಲಿ ಅಚ್ಚರಿಯ ಬದಲಾವಣೆ

ಬಿಜೆಪಿ ನಾಯಕರ ಜನ ಸಂಕಲ್ಪ ಯಾತ್ರೆ ಮುಂದುವರಿಕೆ

ನಾಳೆಯಿಂದ ಮೂರು ದಿನಗಳ ಕಾಲ ಬೊಮ್ಮಾಯಿ-ಯಡಿಯೂರಪ್ಪ ತಂಡದಿಂದ ಜನ ಸಂಕಲ್ಪ ಯಾತ್ರೆ ನಡೆಯಲಿದೆ. ಉಡುಪಿ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಬೊಮ್ಮಾಯಿ-ಯಡಿಯೂರಪ್ಪ ಜಂಟಿ ಯಾತ್ರೆ ನಡೆಸಲಿದ್ದು ನವೆಂಬರ್ 8 ರಿಂದ 11 ರವರೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಿಂದ ಜನ ಸಂಕಲ್ಪ ಯಾತ್ರೆ ನಡೆಯಲಿದೆ. ಮಂಗಳವಾರ ಗದಗ ಜಿಲ್ಲೆ ಶಿರಹಟ್ಟಿಯಲ್ಲಿ ಬೆಳಗ್ಗೆ 10.30ಕ್ಕೆ ಜನಸಂಕಲ್ಪ ಕಾರ್ಯಕ್ರಮ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 1.30ಕ್ಕೆ ಹಾವೇರಿಯ ಬ್ಯಾಡಗಿ ತಾಲೂಕು ಕ್ರೀಡಾಂಗಣದಲ್ಲಿ ಜನಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಗೂ ಬುಧುವಾರ ಬೆಳಗ್ಗೆ 10.30ಕ್ಕೆ ಬೆಳಗಾವಿಯಲ್ಲಿ ಜನಸಂಕಲ್ಪ ಕಾರ್ಯಕ್ರಮವಿದ್ದು ಮಧ್ಯಾಹ್ನ 1.30ಕ್ಕೆ ಬೆಳಗಾವಿ ಜಿಲ್ಲೆ ರಾಯಭಾಗದಲ್ಲಿ ಕಾರ್ಯಕ್ರಮವಿರಲಿದೆ.

Published On - 8:03 am, Mon, 7 November 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!