AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಮತ್ತೆ ಬಿಜೆಪಿ ನಾಯಕರ ಜನಸಂಕಲ್ಪ ಯಾತ್ರೆ: ನ.9ರಂದು ಬೆಳಗಾವಿಯ ಮೂರು ಕಡೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ

ಎರಡನೇ ಹಂತದ ಜನ ಸಂಪರ್ಕ ಸಭೆ ಬೆಳಗಾವಿ ಜಿಲ್ಲೆಯಲ್ಲಿ 9ರಂದು ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಮೂರು ಕಡೆಗಳಲ್ಲಿ ಸಭೆ ನಡೆಯಲಿದೆ.

ಇಂದಿನಿಂದ ಮತ್ತೆ ಬಿಜೆಪಿ ನಾಯಕರ ಜನಸಂಕಲ್ಪ ಯಾತ್ರೆ: ನ.9ರಂದು ಬೆಳಗಾವಿಯ ಮೂರು ಕಡೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ
ಬಸವರಾಜ ಬೊಮ್ಮಾಯಿ, ಸಿಎಮ್
TV9 Web
| Edited By: |

Updated on:Nov 07, 2022 | 8:03 AM

Share

ಬೆಳಗಾವಿ: ಇಂದಿನಿಂದ ಮತ್ತೆ ಬಿಜೆಪಿ ಜನಸಂಕಲ್ಪ(Jana Sankalpa Yatra) ಯಾತ್ರೆ ಆರಂಭವಾಗಲಿದೆ. ಉಡುಪಿ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai), ಬಿಎಸ್ ಯಡಿಯೂರಪ್ಪ(BS Yediyurappa) ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ. ನ.8ರಿಂದ 11ರವರೆಗೆ ಕಲಬುರಗಿ, ಸಿಂದಗಿ, ದಾವಣಗೆರೆ, ತುಮಕೂರಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯಲ್ಲಿ ಅರುಣ್​ ಸಿಂಗ್​ ಭಾಗಿಯಾಗಲಿದ್ದಾರೆ.

ಇನ್ನು ಎರಡನೇ ಹಂತದ ಜನ ಸಂಪರ್ಕ ಸಭೆ ಬೆಳಗಾವಿ ಜಿಲ್ಲೆಯಲ್ಲಿ 9ರಂದು ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಮೂರು ಕಡೆಗಳಲ್ಲಿ ಸಭೆ ನಡೆಯಲಿದೆ. ಇದಾದ ಬಳಿಕ ಹೆಲಿಕಾಪ್ಟರ್ ಮೂಲಕ ಎರಡು ಗಂಟೆಗೆ ರಾಯಭಾಗಕ್ಕೆ ತೆರಳಿ ಅಲ್ಲಿ ಜನ ಸಂಪರ್ಕ ಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಇದೇ ದಿನ ಸಂಜೆ ಖಾನಾಪುರ ಪಟ್ಟಣದಲ್ಲಿ ಸಭೆ ನಡೆಯಲಿದ್ದು ಬಿಜೆಪಿ ನಾಯಕರೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಒಂದೇ ದಿನ ಮೂರು ಕಡೆ ಸಭೆ ಮಾಡುವುದರ ಮೂಲಕ ಜಿಲ್ಲೆಯ ಬಿಜೆಪಿ ಕಾರ್ಯಕರ್ತರನ್ನ ಒಗ್ಗೂಡಿಸಿ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸಿಎಂ ಸಂದೇಶ ನೀಡಲಿದ್ದಾರೆ. ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡಿದ ಕಾರ್ಯಗಳು, ಯೋಜನೆಗಳನ್ನ ಜನರಿಗೆ ತಲುಪಿಸುವ ಸೂಚನೆ ಕೂಡ ನೀಡಲಿದ್ದಾರೆ. ಇನ್ನೂ ಜನ ಸಂಪರ್ಕ ಸಭೆಗೆ ಜಿಲ್ಲೆಯ ನಾಯಕರು ಕೂಡ ಈಗಾಗಲೇ ಸಿದ್ದತೆಯನ್ನ ನಡೆಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾರ್ಯದಲ್ಲಿ ಆಯುಷ್ಯ ವೃದ್ಧಿ, ಕ್ಯಾನ್ಸರ್ ರೋಗಿಯಲ್ಲಿ ಅಚ್ಚರಿಯ ಬದಲಾವಣೆ

ಬಿಜೆಪಿ ನಾಯಕರ ಜನ ಸಂಕಲ್ಪ ಯಾತ್ರೆ ಮುಂದುವರಿಕೆ

ನಾಳೆಯಿಂದ ಮೂರು ದಿನಗಳ ಕಾಲ ಬೊಮ್ಮಾಯಿ-ಯಡಿಯೂರಪ್ಪ ತಂಡದಿಂದ ಜನ ಸಂಕಲ್ಪ ಯಾತ್ರೆ ನಡೆಯಲಿದೆ. ಉಡುಪಿ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಬೊಮ್ಮಾಯಿ-ಯಡಿಯೂರಪ್ಪ ಜಂಟಿ ಯಾತ್ರೆ ನಡೆಸಲಿದ್ದು ನವೆಂಬರ್ 8 ರಿಂದ 11 ರವರೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಿಂದ ಜನ ಸಂಕಲ್ಪ ಯಾತ್ರೆ ನಡೆಯಲಿದೆ. ಮಂಗಳವಾರ ಗದಗ ಜಿಲ್ಲೆ ಶಿರಹಟ್ಟಿಯಲ್ಲಿ ಬೆಳಗ್ಗೆ 10.30ಕ್ಕೆ ಜನಸಂಕಲ್ಪ ಕಾರ್ಯಕ್ರಮ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 1.30ಕ್ಕೆ ಹಾವೇರಿಯ ಬ್ಯಾಡಗಿ ತಾಲೂಕು ಕ್ರೀಡಾಂಗಣದಲ್ಲಿ ಜನಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಗೂ ಬುಧುವಾರ ಬೆಳಗ್ಗೆ 10.30ಕ್ಕೆ ಬೆಳಗಾವಿಯಲ್ಲಿ ಜನಸಂಕಲ್ಪ ಕಾರ್ಯಕ್ರಮವಿದ್ದು ಮಧ್ಯಾಹ್ನ 1.30ಕ್ಕೆ ಬೆಳಗಾವಿ ಜಿಲ್ಲೆ ರಾಯಭಾಗದಲ್ಲಿ ಕಾರ್ಯಕ್ರಮವಿರಲಿದೆ.

Published On - 8:03 am, Mon, 7 November 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ