ಸಿಟಿ ರವಿ ಅಶ್ಲೀಲ ಪದ ಬಳಕೆ: ಸದನದಲ್ಲಿ ನಡೆದಿದ್ದೇನು? ಹೆಬ್ಬಾಳ್ಕರ್ ಹೇಳಿದ್ದಿಷ್ಟು
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಗುರುವಾರ ವಿಧಾನ ಪರಿಷತ್ ಸಭೆಯನ್ನು 10 ನಿಮಿಷ ಮುಂದೂಡಿದ ಬಳಿಕ ಮತ್ತು ನಡೆದ ಘಟನೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಳಗಾವಿ, ಡಿಸೆಂಬರ್ 20: ಎಂಎಲ್ಸಿ ಸಿಟಿ ರವಿ (CT Ravi) ಅಶ್ಲೀಲ ಪದ ಬಳಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಅವರು ಸುದ್ದಿಗೋಷ್ಠಿ ನಡೆಸಿ ಗುರುವಾರ ಪರಿಷತ್ನಲ್ಲಿ ನಡೆದ ಘಟನೆ ಬಗ್ಗೆ ವಿವರಿಸಿದ್ದಾರೆ. “ಬಿಆರ್ ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ವಿರೋಧಿಸಿ ಪರಿಷತ್ನಲ್ಲಿ ಧರಣಿ ಮಾಡಿ ಕುಳಿತುಕೊಂಡ್ವಿ. ಸಭಾಪತಿಗಳು ಅಧಿವೇಶನವನ್ನು 10 ನಿಮಿಷ ಮುಂದೂಡಿದರು. ಈ ವೇಳೆ ಸಿಟಿ ರವಿಯವರು ರಾಹುಲ್ ಗಾಂಧಿ ಅವರಿಗೆ ಡ್ರಗ್ ಎಡಿಕ್ಟ್ ರಾಹುಲ್ ಗಾಂಧಿ ಅಂತ 3-4 ಬಾರಿ ಹೇಳಿದರು. ಅದಕ್ಕೆ ನಾನು, ಸಿಟಿ ರವಿ ಕೊಲೆಗಾರ ಅಂದೆ. ಇದಕ್ಕೆ ಪ್ರತಿಯಾಗಿ ಸಿಟಿ ರವಿಯವರು ಅಶ್ಲೀಲ ಪದ ಬಳಸಿದರು. ಸಿ.ಟಿ.ರವಿ ಒಮ್ಮೆಯಲ್ಲ, 10 ಬಾರಿ ಹೇಳಿ ತೇಜೋವಧೆ ಮಾಡಿದರು” ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಆ ಕೆಟ್ಟ ಪದವನ್ನು ನನ್ನ ಬಾಯಿಯಿಂದ ಹೇಳುವುದಕ್ಕೆ ಕಷ್ಟ ಆಗುತ್ತಿದೆ. ಅಶ್ಲೀಲ ಪದವನ್ನು ಬಿಜೆಪಿಯವರೇ ಕೇಳಿಸಿಕೊಂಡಿದ್ದರು. ಅಶ್ಲೀಲ ಪದ ಕೇಳಿಸಿಕೊಂಡು ಕೆಲವರು ಕಿವಿಯಲ್ಲಿ ಸಾರಿ ಹೇಳಿದರು. ನಾನು ಇನ್ನೂ ಆಘಾತದಲ್ಲಿ ಇದ್ದೇನೆ ಎಂದು ಕಣ್ಣೀರು ಹಾಕಿದರು.
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

