AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಪ್ರಸಾದ್ vs ಕೋಟ ಶ್ರೀನಿವಾಸ ಪೂಜಾರಿ: ಮಲಹೊರುವ ಪದ್ಧತಿ ಬಗ್ಗೆ ವಿಧಾನ ಪರಿಷತ್​ನಲ್ಲಿ ಕಾವೇರಿದ ಚರ್ಚೆ

ಸ್ಮಾರ್ಟ್ ಸಿಟಿ ಯೋಜನೆಯ ಎಂಜಿನಿಯರ್ ಈ ಬಗ್ಗೆ ನೀಡಿರುವ ಹೇಳಿಕೆಯಲ್ಲಿ ಈ ಕೆಲಸವು ಒಂದು ಜಾತಿಗೆ ಸೀಮಿತವಾದದ್ದು ಎಂದಿರುವುದನ್ನು ಬಿ.ಕೆ.ಹರಿಪ್ರಸಾದ್ ಆಕ್ಷೇಪಿಸಿದರು.

ಹರಿಪ್ರಸಾದ್ vs ಕೋಟ ಶ್ರೀನಿವಾಸ ಪೂಜಾರಿ: ಮಲಹೊರುವ ಪದ್ಧತಿ ಬಗ್ಗೆ ವಿಧಾನ ಪರಿಷತ್​ನಲ್ಲಿ ಕಾವೇರಿದ ಚರ್ಚೆ
ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 13, 2021 | 5:46 PM

Share

ಬೆಳಗಾವಿ: ಕರ್ನಾಟಕದಲ್ಲಿ ಇಂದಿಗೂ ಚಾಲ್ತಿಯಲ್ಲಿರುವ ತಲೆ ಮೇಲೆ ಮಲಹೊರುವ ಪದ್ಧತಿ ಬಗ್ಗೆ ವಿಧಾನ ಪರಿಷತ್​ನಲ್ಲಿ ಪ್ರತಿಪಕ್ಷ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಪ್ರಸ್ತಾಪಿಸಿದರು. ಸ್ಮಾರ್ಟ್ ಸಿಟಿ ಯೋಜನೆಯ ಎಂಜಿನಿಯರ್ ಈ ಬಗ್ಗೆ ನೀಡಿರುವ ಹೇಳಿಕೆಯಲ್ಲಿ ಈ ಕೆಲಸವು ಒಂದು ಜಾತಿಗೆ ಸೀಮಿತವಾದದ್ದು ಎಂದಿದ್ದಾರೆ. ಇದು ಅವರ ಪ್ರಜ್ಞಾವಂತಿಕೆ ಎಷ್ಟಿದೆ ಎಂದು ತೋರಿಸುತ್ತದೆ. ಇಂಥ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಸೂಕ್ಷ್ಮತೆ ಮರೆತು ಮಾತನಾಡುವವರ ವಿರುದ್ಧ ಸರ್ಕಾರ ಶಿಸ್ತುಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಹರಿಪ್ರಸಾದ್ ಅವರ ಮಾತಿಗೆ ಪ್ರತಿಕ್ರಿಯಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮ್ಯಾನ್ ಹೋಲ್ ಸ್ವಚ್ಛಗೊಳಿಸುವಾಗ ಕಾರ್ಮಿಕರು ಮೃತಪಟ್ಟರೆ ಸಂಬಂಧಿಸಿದ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಮೃತರ ಕುಟುಂಬಸ್ಥರಿಗೆ ₹ 10 ಲಕ್ಷ ಪರಿಹಾರ ನೀಡಲಾಗುತ್ತಿದೆ. ಸ್ಕ್ಯಾವೆಂಜಿಂಗ್ ಪದ್ಧತಿ ನಿರ್ಮೂಲನೆಗಾಗಿ ಕಾನೂನು ರೂಪಿಸಲು ಕ್ರಿಯಾ ಯೋಜನೆ ರೂಪಿಸಿ ಕೊಡಲಾಗಿದೆ ಎಂದರು.

ಈ ವಿಷಯದ ಬಗ್ಗೆ ವಿವರಿಸಿದ ಹರಿಪ್ರಸಾದ್ ಅವರು, ಈವರೆಗೆ ಸುಮಾರು 400 ಮಂದಿ ಮ್ಯಾನ್ಯೂಯಲ್ ಸ್ಕ್ಯಾವೆಂಜಿಂಗ್ ಮಾಡುವಾಗ ಮೃತಪಟ್ಟಿದ್ದಾರೆ. ಆದರೆ ಕೇವಲ 40 ಮಂದಿಗೆ ಮಾತ್ರ ಪರಿಹಾರ ಒದಗಿಸಲಾಗಿದೆ. ಮ್ಯಾನ್ಯೂಯಲ್ ಸ್ಕ್ಯಾವೇಜಿಂಗ್ ಪದ್ಧತಿ ಹೋಗಲಾಡಿಸಲು ಹೊಸ ಮಸೂದೆ ಮಂಡಿಸಲು ಸರ್ಕಾರ ಗಮನಕೊಡಬೇಕು. ನಿಯಮ ಮೀರಿ ಮ್ಯಾನ್ಯೂವಲ್ ಸ್ಕ್ಯಾವೆಂಜಿಂಗ್ ಮಾಡಿಸಿದರೆ ಆ ಗುತ್ತಿಗೆದಾರ ಹಾಗೂ ಸಂಬಂಧಪಟ್ಟ ಅಧಿಕಾರಿ ಮೇಲೆ ಕ್ರಮ ಜರುಗಿಸಬೇಕು, ಜೈಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಗಮನ ಸೆಳೆಯುವ ಸೂಚನೆ ಮೂಲಕ ವಿಷಯ ಪ್ರಸ್ತಾಪಿಸಿದ ಅವರು, 2013ರಲ್ಲಿಯೇ ರಾಜ್ಯದಲ್ಲಿ ತಲೆಮೇಲೆ ಮಲಹೊರುವ ಪದ್ಧತಿ ನಿಷೇಧಿಸಲಾಗಿದೆ. ಹೀಗಿದ್ದರೂ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಪದ್ಧತಿ ಚಾಲ್ತಿಯಲ್ಲಿದೆ. ನಿಷೇಧ ಇದ್ದರೂ ಈ ಪದ್ದತಿ ಹೇಗೆ ಜಾರಿಯಲ್ಲಿದೆ ಎಂದು ಪ್ರಶ್ನಿಸಿದರು. ಭಾರತ ಸರ್ಕಾರವೂ 2013ರಲ್ಲಿ ಮ್ಯೂನ್ಯುವಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ ಜಾರಿಗೆ ತಂದಿದೆ ಎಂದು ವಿವರಿಸಿದರು.

ಕರ್ನಾಟಕದ ಗ್ರಾಮೀಣ ಭಾಗದಲ್ಲಿ 5080 ಜನರು ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಕೆಲಸದಲ್ಲಿ ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಕ್ಯಾವೆಂಜರ್​ಗಳಿಗೆ ಪುನರ್ವಸತಿ ಕಾರ್ಯಕ್ರಮ ಅನುಷ್ಠಾನ ಮಾಡಲಾಗಿದೆ. ಒಂದು ಬಾರಿ ನಗದು ಸಹಾಯವಾಗಿ ₹ 40 ಸಾವಿರವನ್ನು ಭಾರತ ಸರ್ಕಾರ ನೀಡುತ್ತಿದೆ. ಮ್ಯಾನ್​ಹೋಲ್ ಸ್ವಚ್ಛಗೊಳಿಸುವಾಗ ಮೃತಪಟ್ಟರೆ ಸಂಬಂಧಿಸಿದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತಿದೆ. ಮೃತರಿಗೆ ₹ 10 ಲಕ್ಷ ಪರಿಹಾರ ನೀಡಲಾಗುತ್ತಿದೆ. ಸ್ಕ್ಯಾವೆಂಜಿಂಗ್ ಪದ್ಧತಿ ನಿರ್ಮೂಲನೆಗೆ ಅಗತ್ಯ ಕಾನೂನು ರೂಪಿಸಲು ಕ್ರಿಯಾ ಯೋಜನೆ ರೂಪಿಸಿ ಇಲಾಖೆಗೆ ಕೊಡಲಾಗಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಆರಂಭ; ವಿಧಾನಸಭೆ ಕಲಾಪ ನೇರ ಪ್ರಸಾರ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಖಾಸಗಿ ವಿಧೇಯಕ ಮಂಡನೆಗೆ ನಿರ್ಧಾರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ