AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ಬೆಳಗಾವಿ ಕೇಂದ್ರ ಕಾರಾಗೃಹ ಸ್ಪೋಟಿಸುವುದಾಗಿ ಕರೆ ಮಾಡಿದ್ದ ಆರೋಪಿ ಸುಳಿವು ಪತ್ತೆ

ಬೆಳಗಾವಿ ಹಿಂಡಲಗಾ ಜೈಲು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುತ್ತೇವೆ. ಅಲ್ಲದೆ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. ಸದ್ಯ ಆರೋಪಿ ಕಿರಣ್ ಮೋಷಿ‌ ಬೆಂಗಳೂರಲ್ಲಿ ತಲೆಮರೆಸಿಕೊಂಡಿದ್ದಾನೆ.

ಬೆಂಗಳೂರು, ಬೆಳಗಾವಿ ಕೇಂದ್ರ ಕಾರಾಗೃಹ ಸ್ಪೋಟಿಸುವುದಾಗಿ ಕರೆ ಮಾಡಿದ್ದ ಆರೋಪಿ ಸುಳಿವು ಪತ್ತೆ
ಆರೋಪಿ ಕಿರಣ ಮೋಷಿ
Sahadev Mane
| Edited By: |

Updated on: Oct 10, 2023 | 10:32 AM

Share

ಬೆಂಗಳೂರು/ಬೆಳಗಾವಿ ಅ.10: ಬೆಂಗಳೂರು ಕೇಂದ್ರ ಕಾರಾಗೃಹ (Bengaluru Central Jail), ಬೆಳಗಾವಿ ಹಿಂಡಲಗಾ ಜೈಲು (Hindalaga Jail) ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯ ಸಳಿವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಹುಕ್ಕೇರಿ ನಿವಾಸಿ ಕಿರಣ ಮೋಷಿ (48) ಬೆದರಿಕೆ ಹಾಕಿದ ಆರೋಪಿ.

ಆರೋಪಿ ಕಿರಣ ಮೋಷಿ 2022 ರಲ್ಲಿ ಬೇರೆಯವರ ಅಕೌಂಟ್​ ಹ್ಯಾಕ್​ ಮಾಡಿ ಶ್ಲೀಲ್​ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದನು. ಈ ಹಿನ್ನೆಲೆಯಲ್ಲಿ ಸೈಬರ್​ ಕ್ರೈಮ್​ ಆರೋಪದಡಿ ಬಂಧನವಾಗಿ 10 ದಿನಗಳ ಕಾಲ ಹಿಂಡಲಗಾ ಜೈಲಿನಲ್ಲಿದ್ದನು. ಇದೀಗ ಆರೋಪಿ ಕಿರಣ ಮೋಷಿ ಜಸ್ಟ್ ಡಯಲ್​ನಲ್ಲಿ ಸರ್ಕಾರಿ ಅಧಿಕಾರಿಗಳ ನಂಬರ್ ಪಡೆದು, ಪತ್ನಿ ಹೆಸರಿನಲ್ಲಿ ಇರುವ ಸೀಮ್​ನಿಂದ ಕರೆ ಮಾಡಿದ್ದನು.

ಇದನ್ನೂ ಓದಿ: ಹಾಸನದ ಜಿಲ್ಲಾ ಕಾರಾಗೃಹದ ಕೈದಿಗಳಿಗೆ ಗಾಂಜಾ ಸಪ್ಲೈ ಮಾಡಲು ಸೇಬು, ಮೋಸಂಬಿ ತಂದಿದ್ದ ಮೂವರು ಆರೋಪಿಗಳು ಅರೆಸ್ಟ್

ಬೆಳಗಾವಿ ಹಿಂಡಲಗಾ ಜೈಲು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುತ್ತೇವೆ. ಅಲ್ಲದೆ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. ಸದ್ಯ ಆರೋಪಿ ಕಿರಣ್ ಮೋಷಿ‌ ಬೆಂಗಳೂರಲ್ಲಿ ತಲೆಮರೆಸಿಕೊಂಡಿದ್ದಾನೆ.

ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಬೆದರಿಕೆ ಕರೆ

ಆರೋಪಿ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರ ಸರ್ಕಾರಿ ನಂಬರ್‌ಗೆ ಕರೆ ಮಾಡಿ, “ನನಗೆ ಹಿಂಡಲಗಾ ಜೈಲಿನ ಹೆಡ್ ವಾರ್ಡನ್​ಗಳಾದ ಜಗದೀಶ್ ಗಸ್ತಿ, ಎಸ್.ಎಂ.ಗೋಟೆ ಪರಿಚಯವಿದ್ದಾರೆ. ಅಲ್ಲದೆ ಭೂಗತ ಪಾತಕಿ ಬನ್ನಂಜೆ ರಾಜಾ ಕೂಡ ನನಗೆ ಗೊತ್ತು. ನಾನು ಜೈಲಿನಲ್ಲಿದ್ದಾಗ ಆತನಿಗೆ ನಾನು ಸಹಾಯ ಮಾಡಿದ್ದೇನೆ. ಹಿಂಡಲಗಾ ಜೈಲಿನಲ್ಲಿ ಗಲಭೆ ಸೃಷ್ಟಿಸಿ ನಿಮ್ಮ ಮೇಲೆ ಹಲ್ಲೆ ಮಾಡಲಾಗುವುದು. ತಾವು ವಾಸಿಸುವ ವಸತಿಗೃಹವನ್ನೂ ಸ್ಫೋಟಿಸುವುದಾಗಿ” ಬೆದರಿಕೆ ಕರೆ ಹಾಕಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ