AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ಬೆಳಗಾವಿ ಕೇಂದ್ರ ಕಾರಾಗೃಹ ಸ್ಪೋಟಿಸುವುದಾಗಿ ಕರೆ ಮಾಡಿದ್ದ ಆರೋಪಿ ಸುಳಿವು ಪತ್ತೆ

ಬೆಳಗಾವಿ ಹಿಂಡಲಗಾ ಜೈಲು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುತ್ತೇವೆ. ಅಲ್ಲದೆ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. ಸದ್ಯ ಆರೋಪಿ ಕಿರಣ್ ಮೋಷಿ‌ ಬೆಂಗಳೂರಲ್ಲಿ ತಲೆಮರೆಸಿಕೊಂಡಿದ್ದಾನೆ.

ಬೆಂಗಳೂರು, ಬೆಳಗಾವಿ ಕೇಂದ್ರ ಕಾರಾಗೃಹ ಸ್ಪೋಟಿಸುವುದಾಗಿ ಕರೆ ಮಾಡಿದ್ದ ಆರೋಪಿ ಸುಳಿವು ಪತ್ತೆ
ಆರೋಪಿ ಕಿರಣ ಮೋಷಿ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on: Oct 10, 2023 | 10:32 AM

Share

ಬೆಂಗಳೂರು/ಬೆಳಗಾವಿ ಅ.10: ಬೆಂಗಳೂರು ಕೇಂದ್ರ ಕಾರಾಗೃಹ (Bengaluru Central Jail), ಬೆಳಗಾವಿ ಹಿಂಡಲಗಾ ಜೈಲು (Hindalaga Jail) ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯ ಸಳಿವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಹುಕ್ಕೇರಿ ನಿವಾಸಿ ಕಿರಣ ಮೋಷಿ (48) ಬೆದರಿಕೆ ಹಾಕಿದ ಆರೋಪಿ.

ಆರೋಪಿ ಕಿರಣ ಮೋಷಿ 2022 ರಲ್ಲಿ ಬೇರೆಯವರ ಅಕೌಂಟ್​ ಹ್ಯಾಕ್​ ಮಾಡಿ ಶ್ಲೀಲ್​ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದನು. ಈ ಹಿನ್ನೆಲೆಯಲ್ಲಿ ಸೈಬರ್​ ಕ್ರೈಮ್​ ಆರೋಪದಡಿ ಬಂಧನವಾಗಿ 10 ದಿನಗಳ ಕಾಲ ಹಿಂಡಲಗಾ ಜೈಲಿನಲ್ಲಿದ್ದನು. ಇದೀಗ ಆರೋಪಿ ಕಿರಣ ಮೋಷಿ ಜಸ್ಟ್ ಡಯಲ್​ನಲ್ಲಿ ಸರ್ಕಾರಿ ಅಧಿಕಾರಿಗಳ ನಂಬರ್ ಪಡೆದು, ಪತ್ನಿ ಹೆಸರಿನಲ್ಲಿ ಇರುವ ಸೀಮ್​ನಿಂದ ಕರೆ ಮಾಡಿದ್ದನು.

ಇದನ್ನೂ ಓದಿ: ಹಾಸನದ ಜಿಲ್ಲಾ ಕಾರಾಗೃಹದ ಕೈದಿಗಳಿಗೆ ಗಾಂಜಾ ಸಪ್ಲೈ ಮಾಡಲು ಸೇಬು, ಮೋಸಂಬಿ ತಂದಿದ್ದ ಮೂವರು ಆರೋಪಿಗಳು ಅರೆಸ್ಟ್

ಬೆಳಗಾವಿ ಹಿಂಡಲಗಾ ಜೈಲು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುತ್ತೇವೆ. ಅಲ್ಲದೆ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. ಸದ್ಯ ಆರೋಪಿ ಕಿರಣ್ ಮೋಷಿ‌ ಬೆಂಗಳೂರಲ್ಲಿ ತಲೆಮರೆಸಿಕೊಂಡಿದ್ದಾನೆ.

ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷಗೆ ಬೆದರಿಕೆ ಕರೆ

ಆರೋಪಿ ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರ ಸರ್ಕಾರಿ ನಂಬರ್‌ಗೆ ಕರೆ ಮಾಡಿ, “ನನಗೆ ಹಿಂಡಲಗಾ ಜೈಲಿನ ಹೆಡ್ ವಾರ್ಡನ್​ಗಳಾದ ಜಗದೀಶ್ ಗಸ್ತಿ, ಎಸ್.ಎಂ.ಗೋಟೆ ಪರಿಚಯವಿದ್ದಾರೆ. ಅಲ್ಲದೆ ಭೂಗತ ಪಾತಕಿ ಬನ್ನಂಜೆ ರಾಜಾ ಕೂಡ ನನಗೆ ಗೊತ್ತು. ನಾನು ಜೈಲಿನಲ್ಲಿದ್ದಾಗ ಆತನಿಗೆ ನಾನು ಸಹಾಯ ಮಾಡಿದ್ದೇನೆ. ಹಿಂಡಲಗಾ ಜೈಲಿನಲ್ಲಿ ಗಲಭೆ ಸೃಷ್ಟಿಸಿ ನಿಮ್ಮ ಮೇಲೆ ಹಲ್ಲೆ ಮಾಡಲಾಗುವುದು. ತಾವು ವಾಸಿಸುವ ವಸತಿಗೃಹವನ್ನೂ ಸ್ಫೋಟಿಸುವುದಾಗಿ” ಬೆದರಿಕೆ ಕರೆ ಹಾಕಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!