AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Border dispute: ನೀತಿಸಂಹಿತೆ ಮಧ್ಯೆಯೂ ಕೊಲ್ಹಾಪುರದಲ್ಲಿ ಪ್ರಭಟನೆಗೆ ಮುಂದಾದ MES, ವಿಕಾಸ್ ಅಘಾಡಿ ದಳ

ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಅಂಟಿಕೊಂಡಿರುವ ಕೊಲ್ಹಾಪುರದ ಶಾಹು ಮಹಾರಾಜ ಸಮಾಧಿ ಸ್ಥಳ ಬಳಿ ಮಹಾರಾಷ್ಟ್ರ ವಿಕಾಸ್ ಅಘಾಡಿ, ಎಂಇಎಸ್​ ಬೃಹತ್​ ಪ್ರತಿಭಟನೆಗೆ ಮುಂದಾಗಿದೆ.

Border dispute: ನೀತಿಸಂಹಿತೆ ಮಧ್ಯೆಯೂ ಕೊಲ್ಹಾಪುರದಲ್ಲಿ ಪ್ರಭಟನೆಗೆ ಮುಂದಾದ MES, ವಿಕಾಸ್ ಅಘಾಡಿ ದಳ
ಗಡಿ ವಿವಾದ ಪ್ರತಿಭಟನೆಗೆ ಸಿದ್ದತೆ ಮಾಡಿಕೊಳ್ಳುತ್ತಿರುವ ಎಮ್​ಇಎಸ್​​ ಮತ್ತು ವಿಕಾಸ ಅಘಾಡಿ
TV9 Web
| Edited By: |

Updated on: Dec 10, 2022 | 4:57 PM

Share

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿವಾದ (Karnataka-Maharashtra border dispute) ತೀರ್ವ ಸ್ವರೂಪ ಪಡೆದಿದ್ದು, ಬೆಳಗಾವಿ (Belagavi) ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿಯಲ್ಲಿ ಎಂಇಎಸ್ (MES) ಈ ವಿಚರವಾಗಿ ಆಗಾಗ ತಕರಾರು ತೆಗೆಯುತ್ತಿರುತ್ತದೆ. ಅಲ್ಲದೇ ಕಳೆದ ಕೆಲವು ದಿನಗಳ ಹಿಂದೆ ಕರ್ನಾಟಕದ ಬಸ್​ಗಳಿಗೆ (Karnataka Bus) ಮಸಿ ಬಳಿದು ಕ್ಯಾತೆ ತೆಗೆದಿತ್ತು. ಈಗ ಮತ್ತೆ ಮಹಾರಾಷ್ಟ್ರ ವಿಕಾಸ್ ಅಘಾಡಿ, ಮಹಾರಾಷ್ಟ್ರ ಏಕೀಕರಣ ಸಮಿತಿ ಇಂದು (ಡಿ.10) ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಅಂಟಿಕೊಂಡಿರುವ ಕೊಲ್ಹಾಪುರದ (kollapur) ಶಾಹು ಮಹಾರಾಜ ಸಮಾಧಿ ಸ್ಥಳ ಬಳಿ ಬ್ರಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದವು.

ಇದರಿಂದ ಕರ್ನಾಟಕ ಬಸ್​ಗಳಿಗೆ ಹಾನಿಯಾಗುವ ಸಾಧ್ಯತೆ ಹಿನ್ನೆಲೆ ಸೂಕ್ತ ಭದ್ರತೆ ಒದಗಿಸುವುದಾಗಿ ಪೊಲೀಸ್ ಇಲಾಖೆ ಭರವಸೆ ನೀಡಿದೆ. ಈ ಸಂಬಂಧ ಕೋಗನಹಳ್ಳಿ ಚೆಕ್​ಪೋಸ್ಟ್​​ ಬಳಿ ಪೊಲೀಸ್​ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ.

ಕೋಲ್ಹಾಪುರ ಜಿಲ್ಲೆಯಲ್ಲಿ ನೀತಿಸಂಹಿತೆ ಜಾರಿ

ಆದರೆ ಕೋಲ್ಹಾಪುರ ಜಿಲ್ಲೆಯ 12 ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿಯಾಗಿದೆ. ಇದರಿಂದ ಮಾರಾಠಿಗರ ಪ್ರತಿಭಟನೆಗೆ ಹಿನ್ನಡೆಯಾಗಿದೆ. ಇನ್ನೂ ಡಿಸೆಂಬರ್ 18 ರಂದು ಚುನಾವಣೆ ನಡೆಯಲಿದೆ. ಈ ಸಂಬಂಧ ಡಿ. 9 ರಿಂದ 23 ರವರೆಗೆ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಹೀಗಾಗಿ ಪ್ರತಿಭಟನೆ ನಡೆಸದಂತೆ ಪೊಲೀಸ್ ಇಲಾಖೆ ಖಡಕ್​ ಸೂಚನೆ ನೀಡಿದೆ.

ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಹಾರಾಷ್ಟ್ರ ಪೊಲೀಸ್ ಅಧಿನಿಯಮ 1951 ಪ್ರಕಾರ ಕೋಲ್ಹಾಪುರ ಪೊಲೀಸ್ ಇಲಾಖೆ ಖಡಕ್ ಆದೇಶ ಜಾರಿಗೊಳಿಸಿದೆ. ಖಡಕ್ ಆದೇಶದ ಮಧ್ಯೆಯೂ ಮರಾಠಿಗರು ಪ್ರತಿಭಟನೆ ತಯಾರಿಯಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!