AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Border dispute: ನೀತಿಸಂಹಿತೆ ಮಧ್ಯೆಯೂ ಕೊಲ್ಹಾಪುರದಲ್ಲಿ ಪ್ರಭಟನೆಗೆ ಮುಂದಾದ MES, ವಿಕಾಸ್ ಅಘಾಡಿ ದಳ

ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಅಂಟಿಕೊಂಡಿರುವ ಕೊಲ್ಹಾಪುರದ ಶಾಹು ಮಹಾರಾಜ ಸಮಾಧಿ ಸ್ಥಳ ಬಳಿ ಮಹಾರಾಷ್ಟ್ರ ವಿಕಾಸ್ ಅಘಾಡಿ, ಎಂಇಎಸ್​ ಬೃಹತ್​ ಪ್ರತಿಭಟನೆಗೆ ಮುಂದಾಗಿದೆ.

Border dispute: ನೀತಿಸಂಹಿತೆ ಮಧ್ಯೆಯೂ ಕೊಲ್ಹಾಪುರದಲ್ಲಿ ಪ್ರಭಟನೆಗೆ ಮುಂದಾದ MES, ವಿಕಾಸ್ ಅಘಾಡಿ ದಳ
ಗಡಿ ವಿವಾದ ಪ್ರತಿಭಟನೆಗೆ ಸಿದ್ದತೆ ಮಾಡಿಕೊಳ್ಳುತ್ತಿರುವ ಎಮ್​ಇಎಸ್​​ ಮತ್ತು ವಿಕಾಸ ಅಘಾಡಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 10, 2022 | 4:57 PM

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿವಾದ (Karnataka-Maharashtra border dispute) ತೀರ್ವ ಸ್ವರೂಪ ಪಡೆದಿದ್ದು, ಬೆಳಗಾವಿ (Belagavi) ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿಯಲ್ಲಿ ಎಂಇಎಸ್ (MES) ಈ ವಿಚರವಾಗಿ ಆಗಾಗ ತಕರಾರು ತೆಗೆಯುತ್ತಿರುತ್ತದೆ. ಅಲ್ಲದೇ ಕಳೆದ ಕೆಲವು ದಿನಗಳ ಹಿಂದೆ ಕರ್ನಾಟಕದ ಬಸ್​ಗಳಿಗೆ (Karnataka Bus) ಮಸಿ ಬಳಿದು ಕ್ಯಾತೆ ತೆಗೆದಿತ್ತು. ಈಗ ಮತ್ತೆ ಮಹಾರಾಷ್ಟ್ರ ವಿಕಾಸ್ ಅಘಾಡಿ, ಮಹಾರಾಷ್ಟ್ರ ಏಕೀಕರಣ ಸಮಿತಿ ಇಂದು (ಡಿ.10) ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಅಂಟಿಕೊಂಡಿರುವ ಕೊಲ್ಹಾಪುರದ (kollapur) ಶಾಹು ಮಹಾರಾಜ ಸಮಾಧಿ ಸ್ಥಳ ಬಳಿ ಬ್ರಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದವು.

ಇದರಿಂದ ಕರ್ನಾಟಕ ಬಸ್​ಗಳಿಗೆ ಹಾನಿಯಾಗುವ ಸಾಧ್ಯತೆ ಹಿನ್ನೆಲೆ ಸೂಕ್ತ ಭದ್ರತೆ ಒದಗಿಸುವುದಾಗಿ ಪೊಲೀಸ್ ಇಲಾಖೆ ಭರವಸೆ ನೀಡಿದೆ. ಈ ಸಂಬಂಧ ಕೋಗನಹಳ್ಳಿ ಚೆಕ್​ಪೋಸ್ಟ್​​ ಬಳಿ ಪೊಲೀಸ್​ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ.

ಕೋಲ್ಹಾಪುರ ಜಿಲ್ಲೆಯಲ್ಲಿ ನೀತಿಸಂಹಿತೆ ಜಾರಿ

ಆದರೆ ಕೋಲ್ಹಾಪುರ ಜಿಲ್ಲೆಯ 12 ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿಯಾಗಿದೆ. ಇದರಿಂದ ಮಾರಾಠಿಗರ ಪ್ರತಿಭಟನೆಗೆ ಹಿನ್ನಡೆಯಾಗಿದೆ. ಇನ್ನೂ ಡಿಸೆಂಬರ್ 18 ರಂದು ಚುನಾವಣೆ ನಡೆಯಲಿದೆ. ಈ ಸಂಬಂಧ ಡಿ. 9 ರಿಂದ 23 ರವರೆಗೆ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಹೀಗಾಗಿ ಪ್ರತಿಭಟನೆ ನಡೆಸದಂತೆ ಪೊಲೀಸ್ ಇಲಾಖೆ ಖಡಕ್​ ಸೂಚನೆ ನೀಡಿದೆ.

ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಹಾರಾಷ್ಟ್ರ ಪೊಲೀಸ್ ಅಧಿನಿಯಮ 1951 ಪ್ರಕಾರ ಕೋಲ್ಹಾಪುರ ಪೊಲೀಸ್ ಇಲಾಖೆ ಖಡಕ್ ಆದೇಶ ಜಾರಿಗೊಳಿಸಿದೆ. ಖಡಕ್ ಆದೇಶದ ಮಧ್ಯೆಯೂ ಮರಾಠಿಗರು ಪ್ರತಿಭಟನೆ ತಯಾರಿಯಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್