AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BUDA Scam: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಅಕ್ರಮ; ಸರ್ಕಾರಕ್ಕೆ ಕೋಟ್ಯಂತರ ನಷ್ಟ

Site Auction: ಇ-ಹರಾಜಿನಲ್ಲಿ ಸೈಟ್‌ಗಳ ಹಂಚಿಕೆ ಮಾಡಿದ ಮಾರನೇ ದಿನವೇ ಯಾವುದೇ ಪ್ರಕಟಣೆ ಹೊರಡಿಸಿದೆ ಮ್ಯಾನ್ಯುವಲ್ ಆಗಿ ಮತ್ತೊಂದು ಸುತ್ತು ನಿವೇಶನ ಹಂಚಿಕೆ ಮಾಡಲಾಗಿದೆ.

BUDA Scam: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಅಕ್ರಮ; ಸರ್ಕಾರಕ್ಕೆ ಕೋಟ್ಯಂತರ ನಷ್ಟ
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ
TV9 Web
| Edited By: |

Updated on:Jan 24, 2023 | 11:31 AM

Share

ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (Belagavi Urban Development Authority – BUDA) ಇತ್ತೀಚೆಗೆ ಮಾಡಿರುವ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿ ಬಂದಿವೆ. ಕೆಲ ಅಧಿಕಾರಿಗಳು ತಮ್ಮ ಸ್ವ-ಹಿತಾಸಕ್ತಿ, ಹಣದಾಸೆಗಾಗಿ ಮಾಡಿರುವ ಕೆಲಸದಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಇ-ಹರಾಜು ಪ್ರಕ್ರಿಯೆಯಲ್ಲಿ ನಿವೇಶನಗಳ ಹಂಚಿಕೆ ನಡೆಯಬೇಕು ಎಂಬ ನಿಯಮವನ್ನು ಗಾಳಿಗೆ ತೂರಲಾಗಿದೆ. ಇ-ಹರಾಜಿನಲ್ಲಿ ಸೈಟ್‌ಗಳ ಹಂಚಿಕೆ ಮಾಡಿದ ಮಾರನೇ ದಿನವೇ ಯಾವುದೇ ಪ್ರಕರಣೆ ಹೊರಡಿಸಿದೆ ಮ್ಯಾನ್ಯುವಲ್ ಆಗಿ ಮತ್ತೊಂದು ಸುತ್ತು ನಿವೇಶನ ಹಂಚಿಕೆ ಮಾಡಲಾಗಿದೆ. ಮೂಲೆ ನಿವೇಶನ ಹಾಗೂ ವಾಣಿಜ್ಯ ಮೌಲ್ಯದ ಬಿಡಿ ನಿವೇಶನಗಳನ್ನು ಮಾರುಕಟ್ಟೆ ಮೌಲ್ಯಕ್ಕಿಂತಲೂ ಕಡಿಮೆ ಬೆಲೆಗೆ ಮಾರಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ.

ತಪ್ಪಿನ ಹೊಣೆಗಾರಿಕೆಯನ್ನು ಬುಡಾ ಆಯುಕ್ತ ಪ್ರೀತಮ್ ನಸಲಾಪುರೆ, ಬುಡಾ ಅಧ್ಯಕ್ಷ ಸಂಜಯ್ ಬೆಳಗಾಂವಕರ ಅವರೇ ಹೊರಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಳೆದ ಮಾರ್ಚ್ 16, 17ರಂದು ಪ್ರಕಟಣೆ ಹೊರಡಿಸಿದ್ದ ಬುಡಾ ಇ-ಹರಾಜು ಮೂಲಕ ನಿವೇಶನಗಳನ್ನು ಮಾರಾಟ ಮಾಡಿತ್ತು. ಈ ವೇಳೆ ಪ್ರತಿ ಚದರ ಅಡಿಗೆ ₹ 1,800ರಿಂದ ₹ 2,500 ದರ ನಿಗದಿಪಡಿಸಲಾಗಿತ್ತು. ಮೂಲೆ ನಿವೇಶನಗಳು ಪ್ರತಿ ಅಡಿಗೆ ₹ 2,500ರಿಂದ ₹ 6,000 ದವರೆಗೂ ಮಾರಾಟವಾದವು. ಸರ್ಕಾರದ ನಿಗದಿ ಪಡಿಸಿದ ದರಕ್ಕಿಂತ ಮೂರು ಪಟ್ಟು ಹೆಚ್ಚಿನ ಮೊತ್ತಕ್ಕೆ ಈ ನಿವೇಶನಗಳು ಮಾರಾಟವಾಗಿದ್ದವು. ಇ-ಹರಾಜು ನಡೆದ ಮಾರನೇ ದಿನವೇ 112 ನಿವೇಶನಗಳನ್ನು ಮ್ಯಾನುವಲ್ ರೀತಿಯಲ್ಲಿ ಹರಾಜು ಮಾಡಲಾಯಿತು. ಆ ಸಂದರ್ಭದಲ್ಲಿ ದರ ನಿಗದಿಪಡಿಸುವ ವಿಚಾರದಲ್ಲಿ ಅಕ್ರಮ ನಡೆದಿದೆ ಎನ್ನುವುದು ಸಾರ್ವಜನಿಕರ ಆರೋಪವಾಗಿದೆ.

ಬೆಳಗಾವಿಯ ಸಹ್ಯಾದಿ ನಗರದಲ್ಲಿ 24, ಕುಮಾರಸ್ವಾಮಿ ಬಡಾವಣೆಯಲ್ಲಿ 13, ರಾಮತೀರ್ಥ ನಗರ ಬಡಾವಣೆಯಲ್ಲಿ 42, ದೇವರಾಜ ಅರಸ್ ಬಡಾವಣೆಯಲ್ಲಿ 33 ನಿವೇಶನಗಳನ್ನು ಮ್ಯಾನುವಲ್ ಆಗಿ ಮಾರಲಾಗಿದೆ. ಈ ವೇಳೆ ಮಾರಾಟವಾದ ಬಹುತೇಕ ನಿವೇಶನಗಳು ಕಾರ್ನರ್ ಸೈಟ್​ಗಳೇ ಆಗಿರುವುದು ವಿಶೇಷ. ಆನ್​ಲೈನ್​ನಲ್ಲಿ ನಿಗದಿಪಡಿಸಿದ ಕನಿಷ್ಠ ದರಕ್ಕಿಂತಲೂ ಪ್ರತಿ ಚದರ ಅಡಿಗೆ ₹ 705 ದಿಂದ ₹ 1,700ರ ವರೆಗೆ ದರ ಹೆಚ್ಚಿಸಿ ಈ ನಿವೇಶನಗಳಿಗೆ ದರ ನಿಗದಿಪಡಿಸಲಾಗಿತ್ತು.

ಇದನ್ನೂ ಓದಿ: ಬೆಳಗಾವಿ ಗ್ರಾಮೀಣ ಮತ ಬ್ಯಾಂಕ್​ಗೆ ಲಗ್ಗೆ: ಕುಕ್ಕರ್ ಗಿಫ್ಟ್ ಬೇಡಾ, ನಾನು 10 ಕೋಟಿ ಖರ್ಚು ಮಾಡುವೆ ಬನ್ನೀ- ರಮೇಶ್ ಜಾರಕಿಹೊಳಿ

Published On - 11:30 am, Tue, 24 January 23

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ