AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ಮುಷ್ಕರಕ್ಕೆ ಕುಮ್ಮಕ್ಕು ನೀಡಿದ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಯಲ್ಲಿ ಪೊಲೀಸರ ವಶಕ್ಕೆ

Bus Strike Kodihalli Chandrashekar Arrested ಬೆಳಗಾವಿಯ ಸುವರ್ಣಸೌಧ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಸಭೆಗೆ ನಿರ್ಧರಿಸಿದ್ದರು. ಆದರೆ ಸಭೆಗೂ ಮುನ್ನವೇ ಖಾಸಗಿ ಹೋಟೆಲ್‌ನಲ್ಲಿದ್ದ ಕೋಡಿಹಳ್ಳಿ ಚಂದ್ರಶೇಖರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬೆಳಗಾವಿಯ ಹಿರೇಬಾಗೇವಾಡಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಬಸ್ ಮುಷ್ಕರಕ್ಕೆ ಕುಮ್ಮಕ್ಕು ನೀಡಿದ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಯಲ್ಲಿ ಪೊಲೀಸರ ವಶಕ್ಕೆ
ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶ
ಆಯೇಷಾ ಬಾನು
|

Updated on:Apr 10, 2021 | 12:01 PM

Share

ಬೆಳಗಾವಿ: ಇಂದು ರೈತ ಮುಖಂಡರು, ಸಾರಿಗೆ ನೌಕರರ ಜತೆ ಸಭೆ ನಡೆಸಲಿದ್ದ ಕೋಡಿಹಳ್ಳಿ ಚಂದ್ರಶೇಖರನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಸುವರ್ಣಸೌಧ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಸಭೆಗೆ ನಿರ್ಧರಿಸಿದ್ದರು. ಆದರೆ ಸಭೆಗೂ ಮುನ್ನವೇ ಖಾಸಗಿ ಹೋಟೆಲ್‌ನಲ್ಲಿದ್ದ ಕೋಡಿಹಳ್ಳಿ ಚಂದ್ರಶೇಖರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬೆಳಗಾವಿಯ ಹಿರೇಬಾಗೇವಾಡಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಸತತ ನಾಲ್ಕನೇ ದಿನವೂ ಕರ್ನಾಟಕದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ. ಸರ್ಕಾರಕ್ಕೆ ಮತ್ತಷ್ಟು ಬಿಸಿ ಮುಟ್ಟಿಸಲು ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರವನ್ನು ಮತ್ತಷ್ಟು ತೀವ್ರಗೊಳಿಸಲು ತಯಾರಿ ನಡೆಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್ 10 ಅಂದರೆ ಇಂದು ಬೆಳಗಾವಿಗೆ ಕೋಡಿಹಳ್ಳಿ ಚಂದ್ರಶೇಖರ್ ಪ್ರಯಾಣ ಬೆಳೆಸಿದ್ದು ಬೆಳಗಾವಿ ಹಾಗೂ ಗುಲ್ಬರ್ಗದಲ್ಲಿ ಸಾರಿಗೆ ಮುಖಂಡರು ಹಾಗೂ ನೌಕರರ ಸಭೆ ನಡೆಸಲಿದ್ದರು. ಆದರೆ ಮುಂಜಾಗ್ರತಾ ಕ್ರಮವಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಬಾರದೆಂದು ಬೆಳಗಾವಿ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರನ್ನು ವಶಕ್ಕೆ ಪಡೆದಿದ್ದಾರೆ.

ಸರ್ಕಾರ ಚಳವಳಿಗಳನ್ನು ಹತ್ತಿಕ್ಕುವ ನೀತಿ ಅನುಸರಿಸುತ್ತಿದೆ ಇನ್ನು ಬಂಧನಕ್ಕೊಳಗಾದ ಬಳಿಕ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನನ್ನು ವಶಕ್ಕೆ ಪಡೆದಿರುವುದು ತಪ್ಪು. ನನ್ನನ್ನು ಅಕ್ರಮವಾಗಿ ಬಂಧಿಸಿದ್ದಾರೆ. ಸರ್ಕಾರ ಚಳವಳಿಗಳನ್ನು ಹತ್ತಿಕ್ಕುವ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಸಾರಿಗೆ ನಿಗಮಗಳ ಯಾವ ನೌಕರರು ಆತ್ಮಹತ್ಯೆ ಮಾಡಿಕೊಳ್ಳಬಾರದು: ಕೋಡಿಹಳ್ಳಿ ಚಂದ್ರಶೇಖರ್ (Bus Strike Kodihalli Chandrashekar Arrested in Belagavi)

Published On - 11:47 am, Sat, 10 April 21

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು