AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮಹಿಳೆಯರ ನಗ್ನ ವಿಡಿಯೋ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್​ಮೇಲ್​!

ಮುಂಬೈ ಕ್ರೈಂ ಬ್ರ್ಯಾಂಚ್, ಗುಪ್ತಚರ ಇಲಾಖೆಯಿಂದ ಕರೆ ಮಾಡುತ್ತಿದ್ದೇವೆ ಅಂತ ವಿಡಿಯೋ ಕಾಲ್​ ಮಾಡಿ, ಮಹಿಳೆಯರ ನಗ್ನ ದೇಹವನ್ನು ರೆಕಾರ್ಡ್​ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್​ ಮೇಲ್​ ಮಾಡಿರುವ ಬಗ್ಗೆ ಬೆಳಗಾವಿ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಳಗಾವಿಯಲ್ಲಿ ಮಹಿಳೆಯರ ನಗ್ನ ವಿಡಿಯೋ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್​ಮೇಲ್​!
ಪೊಲೀಸ್ ಆಯುಕ್ತ ಯಡಾ ಮಾರ್ಟಿನ್
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on: Sep 08, 2024 | 9:17 AM

Share

ಬೆಳಗಾವಿ, ಸೆಪ್ಟೆಂಬರ್​ 08: ಮುಂಬೈ ಕ್ರೈಂ ಬ್ರ್ಯಾಂಚ್, ಗುಪ್ತಚರ ಇಲಾಖೆಯಿಂದ ಕರೆ ಮಾಡುತ್ತಿದ್ದೇವೆ ಅಂತ ವಿಡಿಯೋ ಕಾಲ್​ ಮಾಡಿ, ಮಹಿಳೆಯರ ನಗ್ನ ದೇಹವನ್ನು ರೆಕಾರ್ಡ್​ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್​ ಮೇಲ್​ ಮಾಡಿರುವ ಬಗ್ಗೆ ಬೆಳಗಾವಿ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (CEN) ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳಗಾವಿಯಲ್ಲಿ (Belagavi) ಒಟ್ಟು ಮೂರು ಪ್ರಕರಣಗಳು ನಡೆದಿವೆ.

ಬ್ಲ್ಯಾಕ್​ಮೇಲ್​ ಹೇಗೆ ನಡೆಯುತ್ತೆ?

ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾತನಾಡಿ, ಹೊಸ ಮಾದರಿಯ ಸೈಬರ್ ಕ್ರೈಮ್ ಬೆಳಕಿಗೆ ಬಂದಿದೆ. ಮಹಿಳೆಯರಿಗೆ ಮೇಲ್, ಮೆಸೇಜ್, ಕರೆ ಅಥವಾ ವಾಟ್ಸಪ್ ಮೂಲಕ ಒಂದು ಸಂದೇಶ ಬರುತ್ತೆ. ಕ್ರೈಮ್ ಬ್ರ್ಯಾಂಚ್​ದಿಂದ ಕರೆ ಮಾಡಿದ್ದೇವೆ ಎಂದು ಹೇಳುತ್ತಾರೆ. ಒಂದು ಅಪರಾಧ ಪ್ರಕರಣದಲ್ಲಿ ನಿಮ್ಮ ಹೆಸರು ತಳಕು ಹಾಕಿಕೊಂಡಿದೆ ಎಂದು ಹೆದರಿಸುತ್ತಾರೆ. ಹೀಗಾಗಿ, ನೀವು ನಮ್ಮ ಹತ್ತಿರ ಬಂದು, ಯಾಕೆ ಈ ರೀತಿ ಮಾಡಿದೀರಿ ಅಂತ ವಿವರಣೆ ನೀಡಬೇಕೆಂದು ಹೆದರಿಸುತ್ತಾರೆ.

ಇದನ್ನೂ ಓದಿ: ಪೆನ್​ಡ್ರೈವ್ ವಿಡಿಯೋಗಳ ಇಟ್ಕೊಂಡು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡುತ್ತಿರುವ ಖತರ್ನಾಕ್ ತಂಡ

ನಾವೀಗ ನಿಮ್ಮನ್ನು ವಿಚಾರಣೆ ಮಾಡಬೇಕು ಕ್ಯಾಮೆರಾ ಮುಂದೆ ಬನ್ನಿ ಎಂದು ಹೇಳುತ್ತಾರೆ. ಒಂದು ವೇಳೆ ನೀವು ಈ ವಿಚಾರ ಹೊರಗಡೆ ಗೊತ್ತಾದರೆ ನಿಮ್ಮ ಅಪರಾಧದ ಬಗ್ಗೆ ನಿಮ್ಮ ಕುಟುಂಬದವರಿಗೆ ಹೇಳುತ್ತೇವೆ ಅಂತ ಹೆದರಿಸುತ್ತಾರೆ. ಹೇಗೆ ಅಪರಾಧ ಕೃತ್ಯ ಎಸಗಿದ್ದೀರಿ ಅಂಥ ನಿಮ್ಮ ದೇಹವನ್ನು ಪರಿಶೀಲಿಸಬೇಕು, ಹೀಗಾಗಿ ಬಟ್ಟೆ ಬಿಚ್ಚಿ ಅಂತ ಹೇಳುತ್ತಾರೆ. ನಂತರ, ಮಹಿಳೆಯರು ನಗ್ನವಾಗಿ ಕ್ಯಾಮೆರಾ ಮುಂದೆ ಬಂದಾಗ, ಸ್ಕ್ರೀನ್​ ರೆಕಾರ್ಡ್​ ಮಾಡಿಕೊಳ್ಳುತ್ತಾರೆ. ನಂತರ, ಈ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್​ ಮಾಡುತ್ತಾರೆ. ಈ ರೀತಿ ಸುಳ್ಳು ಹೇಳಿ, ಮಹಿಳೆಯರನ್ನು ನಂಬಿಸಿ ಹಣ ದೋಚುವ ಪ್ರಕರಣ ಬೆಳಗಿಗೆ ಬಂದಿವೆ.

ಈ ರೀತಿ ಮೂರು ಪ್ರಕರಣಗಳು ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿವೆ. ಒಂದು ವೇಳೆ ಈ ರೀತಿ ಕರೆಗಳು ಬಂದರೇ ಕೂಡಲೇ ಪೊಲೀಸರ ಗಮನಕ್ಕೆ ತನ್ನಿ ಎಂದು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್