ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು; ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹ

ಮುಖ್ಯಮಂತ್ರಿ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಕರ್ನಾಟಕ ಕಾಂಗ್ರೆಸ್​ನಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಒಕ್ಕಲಿಗ ಸ್ವಾಮೀಜಿಯೊಬ್ಬರು ಆಗ್ರಹಿಸಿದ್ದು, ಆದರೆ ಬೆನ್ನಲ್ಲೇ ಇದೀಗ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕೆಂದು ಶ್ರೀಶೈಲ ಜಗದ್ಗುರುಗಳು ಒತ್ತಾಯಿಸಿದ್ದಾರೆ.

ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು; ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹ
ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ
Follow us
| Updated By: ಗಣಪತಿ ಶರ್ಮ

Updated on: Jun 28, 2024 | 1:13 PM

ಚಿಕ್ಕೋಡಿ, ಜೂನ್ 28: ಡಿಸಿಎಂ ಡಿಕೆ ಶಿವಕುಮಾರ್​​ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಬೆನ್ನಲ್ಲೇ ಇದೀಗ ವಿವಿಧ ಸಮುದಾಯಗಳ ಸ್ವಾಮೀಜಿಗಳು ಆ ಬಗ್ಗೆ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ಇದೀಗ, ಪಂಚ ಪೀಠದಿಂದ ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಮಾತನಾಡಿದ ಶ್ರೀಶೈಲ ಜಗದ್ಗುರುಗಳು, ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನ ಹೆಚ್ಚುವರಿ ಮಾಡಿದರೆ ಲಿಂಗಾಯತರಿಗೆ ಸ್ಥಾನ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ. ಎಂಬಿ ಪಾಟೀಲ್, ಈಶ್ವರ ಖಂಡ್ರೆ, ಎಸ್ಎಸ್ ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ನೀಡಬೇಕು. ಕಾಶಿ, ಉಜ್ಜಯಿನಿ ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ ಎಂದರು.

ಮುಂದುವರಿದು, ಒಂದು ವೇಳೆ ಆರಂಭದಲ್ಲಿ ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಒಂಡಂಬಡಕೆ ಮಾಡಿಕೊಂಡಿದ್ದರೆ, ಅದರ ಪ್ರಕಾರ ನಡೆದುಕೊಳ್ಳಲಿ ಎಂದು ಶ್ರೀಶೈಲ ಜಗದ್ಗುರುಗಳು ಹೇಳಿದ್ದಾರೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲೇ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ, ಸಿದ್ದರಾಮಯ್ಯರನ್ನು ಉದ್ದೇಶಿಸಿ, ನಿಮಗೆ ಅನುಭವ ಇದೆ, ಈಗ ಡಿಕೆ ಶಿವಕುಮಾರ್​​ಗೆ ಅವಕಾಶ ಮಾಡಿಕೊಡಿ ಎಂದು ಹೇಳಿದ್ದು ಚರ್ಚೆಗೆ ಗ್ರಾಸವಾಗಿತ್ತು. ಪ್ರತಿಪಕ್ಷ ಬಿಜೆಪಿ ಕೂಡ ಈ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿತ್ತು. ಸ್ವಾಮೀಜಿ ಸ್ವಯಂಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಅವರೇ ಹೇಳಿಸಿದರೋ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯನವರೇ ದಯವಿಟ್ಟು ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ಚಂದ್ರಶೇಖರಶ್ರೀ ಮನವಿ

ಸ್ವಾಮೀಜಿ ಮನವಿಯಿಂದ ತುಸು ವಿಚಲಿತರಾದಂತೆ ಕಂಡುಬಂದಿದ್ದ ಸಿದ್ದರಾಮಯ್ಯ, ನಂತರ ಆ ಬಗ್ಗೆ ಪ್ರತಿಕ್ರಿಯಿಸಿದ್ದರು. ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದಿದ್ದರು. ಮತ್ತೊಂದೆಡೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಕೂಡ ರಾಜ್ಯ ಕಾಂಗ್ರೆಸ್​ನಲ್ಲಿ ಗೊಂದಲ ಸೃಷ್ಟಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?