AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಗದ್ದೆಯಲ್ಲಿ ಶವ ಹೂತ ಪತ್ನಿ: 6 ತಿಂಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ!

ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ಆಕೆ ತನ್ನ ಪ್ರಿಯಕರನ ಜೊತೆ ಸೇರಿ ತಾಳಿ ಕಟ್ಟಿದ್ದ ಪತಿಗೇ ಚಟ್ಟ ಕಟ್ಟಿದ್ದಳು. ಯಾರಿಗೂ ಅನುಮಾನ ಬಾರದಂತೆ ಶವವನ್ನು ಗದ್ದೆಯಲ್ಲಿ ಹೂತು, ಗಂಡ ಪರ ಊರಿಗೆ ಹೋಗಿದ್ದಾನೆ ಎಂದು ಹೇಳುತ್ತಾ ಓಡಾಡಿಕೊಂಡಿದ್ದಳು. ಆದರೆ ಅದೊಂದು ಘಟನೆ ಈಕಯ ಕಪಟ ನಾಟಕವನ್ನು ಕುಟುಂಬಸ್ಥರ ಎದುರು ಬಯಲು ಮಾಡಿದೆ. ತಪ್ಪು ಮಾಡಿದ್ದ ಆರೋಪಿಗಳು ಬರೋಬ್ಬರಿ 6 ತಿಂಗಳ ಬಳಿಕ ಜೈಲು ಸೇರಿದ್ದಾರೆ.

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಗದ್ದೆಯಲ್ಲಿ ಶವ ಹೂತ ಪತ್ನಿ: 6 ತಿಂಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ!
ಮೃತ ವ್ಯಕ್ತಿ ಮತ್ತು ಆರೋಪಿಗಳುImage Credit source: Tv9 Kannada
ಸಹದೇವ್​ ಮಾನೆ
| Edited By: |

Updated on: Aug 10, 2026 | 12:04 PM

Share

ಮುಖ್ಯಾಂಶಗಳು

  • ನಾಪತ್ತೆ ಪ್ರಕರಣ ಬೆನ್ನತ್ತಿದ್ದ ಪೊಲೀಸರಿಗೇ ಶಾಕ್​​
  • ಪ್ರಿಯಕರನ ಜೊತೆ ಸೇರಿ ಪತಿಗೇ ಚಟ್ಟಕಟ್ಟಿದ್ದ ಪತ್ನಿ!
  • ಕೊಲೆ ನಡೆದು 6 ತಿಂಗಳ ಬಳಿಕ ಆರೋಪಿಗಳ ಬಂಧನ

ಚಿಕ್ಕೋಡಿ, ಆಗಸ್ಟ್​​ 10: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂಬ ಕಾರಣಕ್ಕೆ ಪ್ರಿಯಕರನ ಜೊತೆ ಸೇರಿಕೊಂಡು ಗಂಡನನ್ನೇ ಕೊಂದು, ಶವವನ್ನು ಜಮೀನಿನಲ್ಲಿ ಹೂತುಹಾಕಿದ್ದ ಪತ್ನಿ 6 ತಿಂಗಳ ಬಳಿಕ ಪೊಲೀಸರ ಅತಿಥಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ನಡೆದಿದೆ.  ರಾಘು ಗಾವಡೆ(40) ಕೊಲೆಯಾದ ವ್ಯಕ್ತಿಯಾಗಿದ್ದು, ಇವರ ಪತ್ನಿ ಬಂಗಾರಿ ಗಾವಡೆ, ಪ್ರಿಯಕರ ರಾಮು ರಾಣಗೆ ಬಂಧಿತ ಆರೋಪಿಗಳಾಗಿದ್ದಾರೆ. ಫೆ.7ರಂದೇ ರಾಘು ಗಾವಡೆ ಕೊಲೆ ನಡೆದಿದ್ದು, ಪತಿ ಪರ ಊರಿಗೆ ಹೋಗಿದ್ದಾನೆಂಬ ಪತ್ನಿಯ ನಾಟಕವನ್ನು ಪೊಲೀಸರು ಕುಟುಂಬಸ್ಥರ ಎದುರು ಕೊನೆಗೂ ಬಯಲು ಮಾಡಿದ್ದಾರೆ.

ಘಟನೆ ಏನು?

ಬಂಗಾರಿ ಗಾವಡೆಗೆ ರಾಮು ರಾಣ ಎಂಬಾತನ ಜೊತೆ ಅಕ್ರಮ ಸಂಬಂಧವಿತ್ತು. ಹೀಗಾಗಿ ಪತ್ನಿ ಮೇಲೆ ಸಂಶಯ ವ್ಯಕ್ತಪಡಿಸಿ ರಾಘು ಜಗಳ ಮಾಡುತ್ತಿದ್ದ. ಈ ನಡುವೆ ಫೆ.7ರಂದು ರಾತ್ರಿಯೂ ಕುಡಿದು ಬಂದು ಗಲಾಟೆ ಮಾಡಿದ್ದ. ಇದರಿಂದ ಕೋಪಗೊಂಡು ಪ್ರಿಯಕರ ರಾಮುಗೆ ಕರೆ ಮಾಡಿ ಮನೆಗೆ ಕರೆಸಿಕೊಂಡಿದ್ದ ಬಂಗಾರಿ, ಮಲಗಿದ್ದಾಗ ರಾಘುವಿನ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಳು. ನಂತರ ಮಧ್ಯರಾತ್ರಿ ಟಾಟಾಏಸ್​ ವಾಹನದಲ್ಲಿ ಜಮೀನಿಗೆ ಶವ ಸಾಗಾಟ ಮಾಡಿದ್ದ ಆರೋಪಿಗಳು, ಫೆ.8ರಂದು ರಾತ್ರಿ‌ ಕಬ್ಬಿನ ಗದ್ದೆಯಲ್ಲಿ ಶವ ಹೂತಿದ್ದರು ಎಂಬುದು ತನಿಖೆ ವೇಳೆ ಗೊತ್ತಾಗಿದೆ.

ಇದನ್ನೂ ಓದಿ: ಶಿವಾನಂದ ನೀಲಣ್ಣನವರ್​​ಗೆ ಇಡಿ ಶಾಕ್! ಬೆಳಗಾವಿಯಲ್ಲಿ ಮೂರು ಕಡೆಗಳಲ್ಲಿ ದಾಳಿ

ಕೊಲೆ ವಿಚಾರ ಬಯಲಾಗಿದ್ದೇಗೆ?

ಗಂಡನನ್ನು ಪ್ರಿಯಕರನ ಜೊತೆ ಸೇರಿ ಕೊಂದ ಬಳಿಕ ಅದನ್ನು ಮರೆಮಾಚಲು ಆತ ಕುರಿ ಕಾಯಲು ಬೇರೆ ಊರಿಗೆ ಹೋಗಿದ್ದಾನೆಂದು ಪತ್ನಿ ಬಂಗಾರಿ ಹೇಳಿಕೊಂಡು ತಿರುಗಾಡಿದ್ದಳು. ಆದರೆ ಕೆಲ ತಿಂಗಳ ಹಿಂದೆ ರಾಘುವಿನ ತಾಯಿ ಅನಾರೋಗ್ಯದಿಂದ ಮೃತಪಟ್ಟಿದ್ದರೂ, ಅಂತ್ಯಕ್ರಿಯೆಗೆ ಆತ ಬಾರದಿದ್ದಾಗ ಸಹೋದರನಿಗೆ ಸಂಶಯ ಬಂದಿದೆ. ಇದೇ ಕಾರಣಕ್ಕೆ ಖಡಕಲಾಟ ಠಾಣೆಗೆ ಹೋಗಿ ಆತ ಮಿಸ್ಸಿಂಗ್ ಕೇಸ್ ದಾಖಲಿಸಿದ್ದ. ಜೊತೆಗೆ ಅಣ್ಣನ ಪತ್ನಿ ಬಂಗಾರಿ ಮೇಲೆಯೇ ಸಂಶಯ ವ್ಯಕ್ತಪಡಿಸಿದ್ದ. ಹೀಗಾಗಿ ಬಂಗಾರಿಯನ್ನ ಕರೆದು ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿರೋದಾಗಿ ಆಕೆ ತಪ್ಪೊಪ್ಪಿಕೊಂಡಿದ್ದು, ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಘಟನೆ ಸಂಬಂಧ ಖಡಕಲಾಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಅಧಿವೇಶನಕ್ಕೂ ಮುನ್ನ ಖಾತೆ ಹಂಚಿಕೆಯಾಗದಿದ್ರೆ ಏನ್ಮಾಡ್ತಾರಂತೆ ಡಿಕೆಶಿ!
ಅಧಿವೇಶನಕ್ಕೂ ಮುನ್ನ ಖಾತೆ ಹಂಚಿಕೆಯಾಗದಿದ್ರೆ ಏನ್ಮಾಡ್ತಾರಂತೆ ಡಿಕೆಶಿ!
ರಸ್ತೆ ಗುಂಡಿಯಲ್ಲಿ 'ಕೆರೆ-ದಂಡೆ' ಆಟ
ರಸ್ತೆ ಗುಂಡಿಯಲ್ಲಿ 'ಕೆರೆ-ದಂಡೆ' ಆಟ
ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆ: ಎರಡನೇ ದಿನಕ್ಕೆ HDD ಸಾಥ್
ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆ: ಎರಡನೇ ದಿನಕ್ಕೆ HDD ಸಾಥ್
ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಗಲ್ಲ ಅಂದ್ರೆ ಹೋಗ್ತಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಆಗಲ್ಲ ಅಂದ್ರೆ ಹೋಗ್ತಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ