AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕೋಡಿ ಜೈನಮುನಿ ಹತ್ಯೆ ಪ್ರಕರಣ: ಆರೋಪಿ ಮಗ ಹಸನ್ ಕೃತ್ಯ ನೆನೆದು ಭಾವುಕರಾದ ತಂದೆ

ಬೆಳಗಾವಿಯ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಹಸನ್​ನ ತಂದೆ ಇಂದು ತನ್ನ ಮಗನ ಕೃತ್ಯ ನೆನೆದು ಭಾವುಕರಾಗಿದ್ದಾರೆ.

ಚಿಕ್ಕೋಡಿ ಜೈನಮುನಿ ಹತ್ಯೆ ಪ್ರಕರಣ: ಆರೋಪಿ ಮಗ ಹಸನ್ ಕೃತ್ಯ ನೆನೆದು ಭಾವುಕರಾದ ತಂದೆ
ಜೈನ ಮುನಿ ಹತ್ಯೆ ಪ್ರಕರಣದ ಆರೋಪಿ ಮಗ ಹಸನ್ ಕೃತ್ಯ ನೆನೆದು ಭಾವುಕರಾದ ತಂದೆ
TV9 Web
| Edited By: |

Updated on:Jul 17, 2023 | 3:44 PM

Share

ಚಿಕ್ಕೋಡಿ, ಜುಲೈ 17: ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ (Kamakumara Nandi Maharaj) ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಮಗ ಹಸನ್​ನ ಕೃತ್ಯ ನೆನೆದು ತಂದೆ ಮಕ್ಬೂಲ್ ದಲಾಯತ್ ಭಾವುಕರಾಗಿದ್ದಾರೆ. ಮಗ ಹಸನಸಾಬ್ ಭೇಟಿಗಾಗಿ ಚಿಕ್ಕೋಡಿ ಡಿವೈಎಸ್‌ಪಿ ಕಚೇರಿಗೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಭಾವುಕರಾದರು.

ಪ್ರಕರಣದ ಪ್ರಮುಖ ಆರೋಪಿ ನಾರಾಯಣ ಮಾಳಿ ಮತ್ತು ಎರಡನೇ ಆರೋಪಿ ಹಸನಸಾಬ್ ದಲಾಯತ್ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಇಬ್ಬರನ್ನು ಬೆಳಗಾವಿ ಜೈಲಿಗೆ ಕರೆದೊಯ್ಯುತ್ತಿದ್ದಾರೆ. ಹೀಗಾಗಿ ಮಗ ಹಸನ್ ಭೇಟಿಗೆ ಬಂದಿದ್ದೇನೆ ಎಂದ ತಂದೆ ಮಕ್ಬೂಲ್ ಹೇಳಿದ್ದಾರೆ. ನಾನು ಬೇರೆಯವರ ಗದ್ದೆಯಲ್ಲಿ ಕಸ ತಗೆದು ಜೀವನ ಮಾಡುತ್ತೇನೆ. ಮಗ ಹೀಗೆ ಮಾಡಿದರೆ ಏನ್ ಮಾಡುವುದು ಹೇಳಿ, ದುಡಿದು ತಿನ್ನೋ ಮನುಷ್ಯ ನಾನು ಎಂದು ಭಾವುಕರಾದರು.

ಇದನ್ನೂ ಓದಿ: Jain Muni Murder: ಜೈನಮುನಿಗಳ ದೇಹ ತುಂಡು ತುಂಡಾಗಿ ಕತ್ತರಿಸಿ ಡೈರಿ ಸುಟ್ಟು ಹಾಕಿದ್ರು, ಎಫ್​ಐಆರ್​ನಲ್ಲಿ ದಾಖಲಾಗಿದೆ ಭಯಾನಕ ಸಂಗತಿ

ಇವನ ಸಹವಾಸ ಬೇಡ ಅಂತಾ ಬೇರೆ ಮನೆ ಮಾಡಿಕೊಂಡು ವಾಸವಿದ್ದೆ ಎಂದು ಹೇಳಿದ ಮಕ್ಬೂಲ್, ನಾರಾಯಣ ಮಾಳಿ ಜೊತೆ ಹಸನ್​ಗೆ ಮೂರ್ನಾಲ್ಕು ವರ್ಷದ ಗೆಳೆತನವಿತ್ತು. ಹೊಲಕ್ಕೆ ಕೀಟನಾಶಕ ಸಿಂಪಡನೆ ಮಾಡಲು ಹೋಗುತ್ತಿದ್ದೇನೆ ಅಂತಾ ಅಂದು ರಾತ್ರಿ ಹೋಗಿದ್ದ. ಈ ವೇಳೆ ಅವರು ಪಗಾರ್ (ವೇತನ) ಕೊಡಲ್ಲ ಹೋಗಬೇಡ ಅಂತಾ ಹಸನ್​​ ಪತ್ನಿ ಹೇಳಿದ್ದಳು. ಆದರೆ ಈಕೆಯ ಮಾತನ್ನೂ ಲೆಕ್ಕಿಸದೆ ಹೋಗಿದ್ದ. ಮನೆಗೆ ವಾಪಸ್ ಬಂದಾಗಲೂ ನಮಗೆ ಏನೂ ಹೇಳಿರಲಿಲ್ಲ. ರಾತ್ರಿ 10 ಗಂಟೆಗೆ ಪೊಲೀಸರು ಬಂದಾಗ ವಿಚಾರ ಗೊತ್ತಾಯಿತು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Mon, 17 July 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?